ಬ್ರೇಕಿಂಗ್ ನ್ಯೂಸ್
17-05-25 01:01 pm Mangalore Correspondent ಕರಾವಳಿ
ಮಂಗಳೂರು, ಮೇ.17: ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೇ ಮಾರ್ಗದಲ್ಲಿ ವಿದ್ಯುದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು, ಕಾರವಾರ ನಡುವೆ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025ರ ವರೆಗೆ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಅವಧಿಯಲ್ಲಿ ಮಂಗಳೂರು - ಬೆಂಗಳೂರು ನಡುವಿನ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ. ಜೂನ್ನಿಂದ ನವೆಂಬರ್ ವರೆಗೆ ಎಂದರೆ ಒಟ್ಟು ಆರು ತಿಂಗಳ ಕಾಲ ರೈಲು ಸಂಚಾರ ಇರುವುದಿಲ್ಲ.
ಮೇ 31 ರಿಂದ 2025ರ ನವೆಂಬರ್ 1 ವರೆಗೆ ಪ್ರತಿ ಶನಿವಾರ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು ಜಂಕ್ಷನ್ಗೆ ಸಂಚರಿಸುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದು ಆಗಲಿದೆ. ಅದೇ ರೀತಿ ಜೂನ್ 1 ರಿಂದ ನವೆಂಬರ್ 2ರ ವರೆಗೆ ಪ್ರತಿ ಭಾನುವಾರ ಮಂಗಳೂರಿನಿಂದ ಯಶವಂತಪುರಕ್ಕೆ ತೆರಳುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ಕೂಡ ಇರುವುದಿಲ್ಲ.
ಜೂನ್ 1 ರಿಂದ ಅಕ್ಟೋಬರ್ 30, 2025 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರದಿಂದ ಮಂಗಳೂರು ಜಂಕ್ಷನ್ ವರೆಗೆ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ರದ್ದು ಆಗಲಿದೆ. ಇದರ ಜೊತೆಗೆ ಜೂನ್ 2ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ದು ಆಗಲಿದೆ.
ಜೂನ್ 2 ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಯಶವಂತಪುರದಿಂದ ಕಾರವಾರಗೆ ತೆರಳುವ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ಸಂಚಾರ ಇರುವುದಿಲ್ಲ. ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.
Sakleshpur Subrahmanya Railway Electrification, Daytime Bengaluru Mangaluru Karwar Trains Cancelled for Six Months from June 1.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm