ಬ್ರೇಕಿಂಗ್ ನ್ಯೂಸ್
20-05-25 02:03 pm Mangalore Correspondent ಕರಾವಳಿ
ಮಂಗಳೂರು, ಮೇ 20 : ಮಂಗಳೂರು, ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಬೆಳಗ್ಗಿನಿಂದ ಉತ್ತಮ ಮಳೆಯಾಗಿದೆ. ರಾತ್ರಿಯಿಂದಲೇ ನಿರಂತರ ಮಳೆ ಸುರಿದಿದ್ದು ಬಿಸಿಲ ಬೇಗೆಯಿಂದ ಬೆಂದು ಹೋಗಿದ್ದ ನೆಲ ಒಮ್ಮಿಂದೊಮ್ಮೆಲೆ ತಂಪಗಾಗಿದೆ. ಗಾಳಿ, ಸಿಡಿಲಿನ ಅಬ್ಬರ ಇಲ್ಲದೆ ಸಾಧಾರಣ ರೀತಿಯಲ್ಲಿ ಮಳೆ ಸುರಿಯತೊಡಗಿದ್ದು ಮಳೆಗಾಲದ ಅನುಭವ ನೀಡಿದೆ.
ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಬಹುತೇಕ ಭಾಗದಲ್ಲಿ ಒಂದೇ ರೀತಿಯಲ್ಲಿ ಮಳೆಯಾಗಿದೆ. ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಮೇ ಆರಂಭದಲ್ಲಿಯೇ ಒಳ್ಳೆ ಮಳೆ ಆಗಿದ್ದರೂ ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಒಳ್ಳೆಯ ಮಳೆ ಆಗಿರಲಿಲ್ಲ.




ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು ಹೆಲ್ತ್ ಹಬ್ ಎನಿಸಿರುವ ಮಣಿಪಾಲದಲ್ಲಿ ಹೆದ್ದಾರಿಯಲ್ಲಿ ನದಿಯಂತೆ ನೀರು ಹರಿಯುವ ವಿಡಿಯೋ ವೈರಲ್ ಆಗಿದೆ. ಉಡುಪಿ- ಮಣಿಪಾಲ ರಸ್ತೆಯಲ್ಲಿ ಕೃತಕ ಪ್ರವಾಹದ ರೀತಿಯಲ್ಲಿ ಮಳೆ ನೀರು ಹರದಿದ್ದು ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿ ರಸ್ತೆಯಲ್ಲಿ ಪ್ರವಾಹದ ರೀತಿ ಕಲ್ಲು ಮಣ್ಣಿನ ಜೊತೆಗೆ ನೀರು ಹರಿದಿದ್ದು, ಘಟ್ಟ ಕುಸಿದು ಬಂದ ರೀತಿಯ ಅನುಭವ ಆಗಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ ಹರಿದಿದೆ.
ಎರಡು ದಿನ ಭಾರೀ ಮಳೆ ಸೂಚನೆ
ಹವಾಮಾನ ಇಲಾಖೆಯಿಂದ ಕರಾವಳಿ ಮತ್ತು ಘಟ್ಟ ಪ್ರದೇಶದಲ್ಲಿ ಮೇ 20 ಮತ್ತು 21ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಸೂಚನೆ ನೀಡಲಾಗಿದ್ದು ಈಗಾಗಲೇ ಮೀನುಗಾರಿಕೆ ತೆರಳಿದವರು ಮರಳುವಂತೆ ಸೂಚಿಸಲಾಗಿದೆ.
Heavy #rainfall that began early Tuesday, May 20 morning has once again triggered artificial flooding along the crucial #Udupi-#Manipal Road, causing severe inconvenience to commuters.#mangalore pic.twitter.com/arFDGlYThX
— Headline Karnataka (@hknewsonline) May 20, 2025
Heavy rainfall that began early Tuesday, May 20 morning has once again triggered artificial flooding along the crucial Udupi-Manipal Road, causing severe inconvenience to commuters.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm