ಬ್ರೇಕಿಂಗ್ ನ್ಯೂಸ್
21-12-20 02:45 pm Mangalore Correspondent ಕರಾವಳಿ
ಉಳ್ಳಾಲ ಡಿ.21: ಇಲ್ಲಿನ ದೇರಳಕಟ್ಟೆಯ ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ತಜ್ಞ ವೈದ್ಯರ ತಂಡದಿಂದ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಾಲ್ಕು ವರ್ಷದ ಮಗುವಿನ ಕಾಲಿನ ತೊಡೆಯಲ್ಲಿ ಕ್ಯಾನ್ಸರ್ ಬಾಧಿತ ಎಲುಬಿನ ಅಸ್ಥಿಮಜ್ಜೆಯ ಮೇಲೆ ಅಪರೂಪದ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿದ್ದು ಇದೊಂದು ಅಪರೂಪದ ಮತ್ತು ಭಾರತದಲ್ಲೇ ಪ್ರಥಮ ಪ್ರಯೋಗವಾಗಿದೆ ಎಂದು ಯೆನೆಪೋಯ ಮೆಡಿಕಲ್ ಕಾಲೇಜಿ ವೈದ್ಯಕೀಯ ಅಧೀಕ್ಷಕ ಡಾ.ಪದ್ಮನಾಭ ಹೇಳಿದ್ದಾರೆ.
ಯೆನೆಪೋಯ ಮೆಡಿಕಲ್ ಕಾಲೇಜಿನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದರು. ನಾಲ್ಕು ವರ್ಷದ ಮಗುವಿನ ಕುಟುಂಬವು ಈ ಸಮಸ್ಯೆಯ ಬಗ್ಗೆ ಅರಿವಾಗಿ ಭಾರತದ ಹಲವಾರು ಪರಿಣಿತ ಕ್ಯಾನ್ಸರ್ ಶಸ್ತ್ರಚಿಕಿತ್ಸಕರನ್ನು ಸಂದರ್ಶಿಸಿದಾಗ ಕ್ಯಾನ್ಸರ್ ಬಾಧಿತ ಕಾಲಿನ ಭಾಗವನ್ನು ತುಂಡರಿಸುವುದೇ ಪರಿಹಾರ ಎಂದು ತಿಳಿಸಿದ್ದರು.
ಬಳಿಕ ಯೆನಪೋಯ ಮೆಡಿಕಲ್ ಕಾಲೇಜಿನ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಜಲಾಲುದ್ದೀನ್ ಅಕ್ಬರ್ ಅವರನ್ನು ಭೇಟಿ ಮಾಡಿ ವಿಚಾರಿಸಿದ್ದರು. ಬಳಿಕ ಉಪಕುಲಪತಿ ಡಾ.ವಿಜಯಕುಮಾರ್ ಅವರ ಮಾರ್ಗದರ್ಶನದೊಂದಿಗೆ ಕಾಲು ಕತ್ತರಿಸದೆಯೇ ಮಗುವಿಗೆ ಚಿಕಿತ್ಸೆ ನೀಡುವ ಬಗ್ಗೆ ತೀರ್ಮಾನಿಸಲಾಗಿತ್ತು. ಸತತ ಆರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸಿ ಮಗುವಿನ ಕಾಲು ಮತ್ತು ಜೀವವನ್ನು ರಕ್ಷಿಸುವ ಪಣದೊಂದಿಗೆ ಅಪರೂಪದ ಯಶಸ್ವೀ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು.
ಸುಮಾರು ಒಂದೂವರೆ ಲಕ್ಷ ರೂ. ವೆಚ್ಚದಲ್ಲಿ ಆರು ಗಂಟೆಯ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಅಲ್ಲದೆ ಇಂತಹ ಕ್ಯಾನ್ಸರ್ ಪೀಡಿತ ಕಾಲಿನ ಅಂಗನ್ಯೂನ್ಯತೆ ಸರಿಪಡಿಸುವ ಬಹಳ ವಿರಳವಾಗಿ ನಡೆಯುವ ಶಸ್ತ್ರಚಿಕಿತ್ಸೆಯನ್ನು ಯೆನೆಪೋಯದ ಪರಿಣಿತ ವೈದ್ಯರುಗಳ ತಂಡವು ಯಶಸ್ವಿಯಾಗಿ ನಡೆಸಿ ನಾಲ್ಕು ವರ್ಷಗಳ ಮಗುವಿನ ಕಾಲು ಹಾಗೂ ಜೀವದ ರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿದೆ.

ಈ ಅಪರೂಪದ ಶಸ್ತ್ರಚಿಕಿತ್ಸೆಯಲ್ಲಿ ಯೆನೆಪೋಯ ಕ್ಯಾನ್ಸರ್ ಸೆಂಟರಿನ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ವಿಭಾಗದ ಡಾ.ರೋಹನ್ ಶೆಟ್ಟಿ ,ಡಾ.ಅಮರ್ ರಾವ್, ಡಾ.ನೂರ್ ಮಹಮ್ಮದ್, ಆರ್ಥೋಪೆಡಿಕ್ಸ್ ವಿಭಾಗ ಮುಖ್ಯಸ್ಥರಾದ ಡಾ.ಇಮ್ತಿಯಾಝ್ ಅಹ್ಮದ್, ಡಾ.ಅಭಿಷೇಕ್ ಶೆಟ್ಟಿ, ಅರಿವಳಿಕೆ ವಿಭಾಗದ ಡಾ.ಎಜಾಝ್, ಮಕ್ಕಳ ಚಿಕಿತ್ಸಾ ವಿಭಾಗದ ಡಾ.ಮಿಥುನ್ ಪಾಲ್ಗೊಂಡಿದ್ದರು.
ಭಾರತದಲ್ಲೇ ಪ್ರಥಮ ಪ್ರಯೋಗ
ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥರಾದ ಡಾ.ಜಲಾಲುದ್ದೀನ್ ಅಕ್ಬರ್ ಅವರು ಮಾಹಿತಿ ನೀಡಿ ಸಾಮಾನ್ಯವಾಗಿ ಇಂತಹ ಕ್ಯಾನ್ಸರ್ ಬಾಧಿತ ಚಿಕಿತ್ಸೆಯನ್ನು ಕಾಲುಗಳನ್ನು ಕತ್ತರಿಸಿಯೇ ಪರಿಹಾರ ಕಂಡುಕೊಳ್ಳುವುದು ಕಾಣುತ್ತೇವೆ. ರೋಗಭಾದಿತ ಅಂಗಗಳ ಛೇದನ ಮಾಡದೆಯೇ ಪರಿಣಿತ ವೈದ್ಯರು ಮತ್ತು ಆಧುನಿಕ ವೈದ್ಯಕೀಯ ಪರಿಕರ ಮತ್ತು ಉಪಕರಣಗಳಿಂದ ಶಸ್ತ್ರಚಿಕಿತ್ಸೆ ನೆರವೇರಿಸಿರುವುದು ಮಂಗಳೂರಿನ ಯೆನೆಪೋಯ ವಿಶ್ವವಿದ್ಯಾನಿಲಯದ ಕ್ಯಾನ್ಸರ್ ಸೆಂಟರಿನ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ವಿಭಾಗದ ವೈದ್ಯರುಗಳ ಸಾಧನೆಯಾಗಿದೆ. ಅಲ್ಲದೆ ಇದು ಬಹಳ ಅಪರೂಪದ ಮತ್ತು ಭಾರತದಲ್ಲಿ ಇಷ್ಟು ಸಣ್ಣ ವಯಸ್ಸಿನ ಮಕ್ಕಳಲ್ಲಿ ಇಂತಹ ಚಿಕಿತ್ಸೆ ನಡೆದಿರುವುದು ಇದೇ ಪ್ರಥಮ ಆಗಿದೆ ಎಂದರು.
Mangalore Yenepoya Hopsital Doctors perform a rare Leg operation of a little boy which is of First in India.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm