ಬ್ರೇಕಿಂಗ್ ನ್ಯೂಸ್
22-05-25 10:19 pm Mangalore Correspondent ಕರಾವಳಿ
ಉಳ್ಳಾಲ, ಮೇ 22 : ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲಕರಾದ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾವನ್ನ ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ ಹೇಳಿದ್ದಾರೆ. ಇಷ್ಟಕ್ಕೇ ಕುಪಿತಗೊಂಡ ಚಾಲಕ ಬಶೀರ್ ತನ್ನ ಸಹಚರ ರಿಕ್ಷಾ ಚಾಲಕನಾದ ಇಶಾನ್ ನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಬಶೀರ್ ಮತ್ತು ಇಶಾನ್ ಜೊತೆ ಮತ್ತೆ ಕೆಲವು ರಿಕ್ಷಾ ಚಾಲಕರು ದಾಂಧಲೆಗೆ ಕುಮ್ಮಕ್ಕು ನೀಡಿದ್ದಾರೆ.




ಬೇಕರಿಯೊಳಗಿದ್ದ ಅಶ್ವಿನ್ ಅವರ ತಾಯಿ ಮತ್ತು ಸಿಬ್ಬಂದಿ ಯುವತಿ ರಿಕ್ಷಾ ಚಾಲಕರನ್ನ ತಡೆದಿದ್ದು ಅವರನ್ನೂ ತಳ್ಳಿ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಶಿವಸಾಗರ್ ಹೊಟೇಲಿನ ಮಾಲಕ ಸುಚಿವೃತ ಶೆಟ್ಟಿ ಅವರು ಮಧ್ಯ ಪ್ರವೇಶಿಸಿ ಬೇಕರಿ ಮಾಲೀಕನಿಗೆ ಹಲ್ಲೆಗೆ ಮುಂದಾಗಿದ್ದ ಪುಂಡ ರಿಕ್ಷಾ ಚಾಲಕರನ್ನ ಅಂಗಡಿಯಿಂದ ಹೊರ ತಳ್ಳಿದ್ದಾರೆ. ಘಟನೆಯ ದೃಶ್ಯವು ಬೇಕರಿಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಬೇಕರಿ ಮಾಲಕ ಅಶ್ವಿನ್ ಅವರು ತನ್ನ ಮತ್ತು ತಾಯಿ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ನೀಡಿರುವ ರಿಕ್ಷಾ ಚಾಲಕರಾದ ಬಶೀರ್ ಮತ್ತು ಇಷಾನ್ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಬಜ್ಪೆಯಲ್ಲಿ ನಡೆದಿರುವ ಸುಹಾಸ್ ಶೆಟ್ಟಿ ಕೊಲೆಯ ಕಿಚ್ಚು ಜೀವಂತ ಇರುವಾಗಲೇ ಗೂಂಡಾ ರಿಕ್ಷಾ ಚಾಲಕರು ಬೇಕರಿಗೆ ನುಗ್ಗಿ ಧಾಂದಲೆ ನಡೆಸಿರುವುದು ಪೊಲೀಸ್ ಇಲಾಖೆಯನ್ನೂ ಅಲರ್ಟ್ ಮಾಡಿಸಿದೆ. ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
#Mangalore Bakery Owner Assaulted for Asking to Move Parked Tempo, #Auto Drivers #Rowdyism at #Thokottu Junction Caught on CCTV #breakingnews pic.twitter.com/JVUVyMas63
— Headline Karnataka (@hknewsonline) May 22, 2025
Mangalore Bakery Owner Assaulted for Asking to Move Parked Tempo, Auto Drivers Rowdyism at Thokottu Junction Caught on CCTV.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm