ಬ್ರೇಕಿಂಗ್ ನ್ಯೂಸ್
22-05-25 10:19 pm Mangalore Correspondent ಕರಾವಳಿ
ಉಳ್ಳಾಲ, ಮೇ 22 : ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲಕರಾದ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾವನ್ನ ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ ಹೇಳಿದ್ದಾರೆ. ಇಷ್ಟಕ್ಕೇ ಕುಪಿತಗೊಂಡ ಚಾಲಕ ಬಶೀರ್ ತನ್ನ ಸಹಚರ ರಿಕ್ಷಾ ಚಾಲಕನಾದ ಇಶಾನ್ ನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಬಶೀರ್ ಮತ್ತು ಇಶಾನ್ ಜೊತೆ ಮತ್ತೆ ಕೆಲವು ರಿಕ್ಷಾ ಚಾಲಕರು ದಾಂಧಲೆಗೆ ಕುಮ್ಮಕ್ಕು ನೀಡಿದ್ದಾರೆ.




ಬೇಕರಿಯೊಳಗಿದ್ದ ಅಶ್ವಿನ್ ಅವರ ತಾಯಿ ಮತ್ತು ಸಿಬ್ಬಂದಿ ಯುವತಿ ರಿಕ್ಷಾ ಚಾಲಕರನ್ನ ತಡೆದಿದ್ದು ಅವರನ್ನೂ ತಳ್ಳಿ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಶಿವಸಾಗರ್ ಹೊಟೇಲಿನ ಮಾಲಕ ಸುಚಿವೃತ ಶೆಟ್ಟಿ ಅವರು ಮಧ್ಯ ಪ್ರವೇಶಿಸಿ ಬೇಕರಿ ಮಾಲೀಕನಿಗೆ ಹಲ್ಲೆಗೆ ಮುಂದಾಗಿದ್ದ ಪುಂಡ ರಿಕ್ಷಾ ಚಾಲಕರನ್ನ ಅಂಗಡಿಯಿಂದ ಹೊರ ತಳ್ಳಿದ್ದಾರೆ. ಘಟನೆಯ ದೃಶ್ಯವು ಬೇಕರಿಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಬೇಕರಿ ಮಾಲಕ ಅಶ್ವಿನ್ ಅವರು ತನ್ನ ಮತ್ತು ತಾಯಿ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ನೀಡಿರುವ ರಿಕ್ಷಾ ಚಾಲಕರಾದ ಬಶೀರ್ ಮತ್ತು ಇಷಾನ್ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಬಜ್ಪೆಯಲ್ಲಿ ನಡೆದಿರುವ ಸುಹಾಸ್ ಶೆಟ್ಟಿ ಕೊಲೆಯ ಕಿಚ್ಚು ಜೀವಂತ ಇರುವಾಗಲೇ ಗೂಂಡಾ ರಿಕ್ಷಾ ಚಾಲಕರು ಬೇಕರಿಗೆ ನುಗ್ಗಿ ಧಾಂದಲೆ ನಡೆಸಿರುವುದು ಪೊಲೀಸ್ ಇಲಾಖೆಯನ್ನೂ ಅಲರ್ಟ್ ಮಾಡಿಸಿದೆ. ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
#Mangalore Bakery Owner Assaulted for Asking to Move Parked Tempo, #Auto Drivers #Rowdyism at #Thokottu Junction Caught on CCTV #breakingnews pic.twitter.com/JVUVyMas63
— Headline Karnataka (@hknewsonline) May 22, 2025
Mangalore Bakery Owner Assaulted for Asking to Move Parked Tempo, Auto Drivers Rowdyism at Thokottu Junction Caught on CCTV.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm