ಬ್ರೇಕಿಂಗ್ ನ್ಯೂಸ್
23-05-25 10:46 pm Mangalore Correspondent ಕರಾವಳಿ
ಮಂಗಳೂರು, ಮೇ 23:ಹಣ ದುರುಪಯೋಗ ಆಗಿರುವ ಆರೋಪದ ಹಿನ್ನೆಲೆಯಲ್ಲಿ ಪಿಲಿಕುಳ ನಿಸರ್ಗಧಾಮದ ಕಚೇರಿ ಮತ್ತು ಪಿಲಿಕುಳ ವಿಜ್ಞಾನ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ನಿರೀಕ್ಷಕರಾದ ಸುರೇಶ್ ಕುಮಾರ್ ಮತ್ತು ಭಾರತಿ ಜಿ. ಅವರು ದಾಳಿ ನಡೆಸಿದ್ದು, ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ನಿಸರ್ಗಧಾಮದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಜೈವಿಕ ಉದ್ಯಾನವನ ಮತ್ತು ನಿಸರ್ಗಧಾಮದಲ್ಲಿ ಪ್ರಾಣಿಗಳ ಸಾಗಣೆ ಮತ್ತು ವಹಿವಾಟು ವಿಚಾರದಲ್ಲಿ ಹಣ ದುರುಪಯೋಗ ಆಗುತ್ತಿರುವ ಬಗ್ಗೆ ಹಿಂದಿನಿಂದಲೂ ದೂರುಗಳಿದ್ದವು.
ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದಿದ್ದು, ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರೂ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲ. ಅಲ್ಲಿನ ಸಿಬ್ಬಂದಿಯವರಿಗೆ ಕಡಿಮೆ ವೇತನ ನೀಡುತ್ತಿದ್ದು, ಯಾವುದೇ ಆರೋಗ್ಯ ಸೌಲಭ್ಯವನ್ನು ಒದಗಿಸದೆ ಇರುವುದು ಕಂಡುಬರುತ್ತದೆ. ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಆದೇಶವಾಗಿದ್ದರೂ ಪ್ರಾಧಿಕಾರವು ಈವರೆಗೂ ಹಸ್ತಾಂತರಿಸದೆ ವಿಳಂಬ ಧೋರಣೆ ಮಾಡಿರುವುದು ಕಂಡುಬರುತ್ತದೆ.


ಅಲ್ಲದೆ, ಲೀಸ್ ಗೆ ಕೊಟ್ಟ ಕೆಲವು ಸಂಸ್ಥೆಗಳಿಂದ ಪ್ರಾಧಿಕಾರವು ತೆರಿಗೆ ಹಣ ಸಂಗ್ರಹಿಸದೆ ಇರುವುದು ಕಂಡುಬರುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ನಿವೇದಿಸಲಾಗುವುದು ಎಂಬುದಾಗಿ ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.
Mangalore Misuse of Funds Allegation, Lokayukta Raid and Officials Inspection at Pilikula Nisargadham.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm