ಬ್ರೇಕಿಂಗ್ ನ್ಯೂಸ್
23-05-25 10:46 pm Mangalore Correspondent ಕರಾವಳಿ
ಮಂಗಳೂರು, ಮೇ 23:ಹಣ ದುರುಪಯೋಗ ಆಗಿರುವ ಆರೋಪದ ಹಿನ್ನೆಲೆಯಲ್ಲಿ ಪಿಲಿಕುಳ ನಿಸರ್ಗಧಾಮದ ಕಚೇರಿ ಮತ್ತು ಪಿಲಿಕುಳ ವಿಜ್ಞಾನ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ನಿರೀಕ್ಷಕರಾದ ಸುರೇಶ್ ಕುಮಾರ್ ಮತ್ತು ಭಾರತಿ ಜಿ. ಅವರು ದಾಳಿ ನಡೆಸಿದ್ದು, ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ನಿಸರ್ಗಧಾಮದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಜೈವಿಕ ಉದ್ಯಾನವನ ಮತ್ತು ನಿಸರ್ಗಧಾಮದಲ್ಲಿ ಪ್ರಾಣಿಗಳ ಸಾಗಣೆ ಮತ್ತು ವಹಿವಾಟು ವಿಚಾರದಲ್ಲಿ ಹಣ ದುರುಪಯೋಗ ಆಗುತ್ತಿರುವ ಬಗ್ಗೆ ಹಿಂದಿನಿಂದಲೂ ದೂರುಗಳಿದ್ದವು.
ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದಿದ್ದು, ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರೂ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲ. ಅಲ್ಲಿನ ಸಿಬ್ಬಂದಿಯವರಿಗೆ ಕಡಿಮೆ ವೇತನ ನೀಡುತ್ತಿದ್ದು, ಯಾವುದೇ ಆರೋಗ್ಯ ಸೌಲಭ್ಯವನ್ನು ಒದಗಿಸದೆ ಇರುವುದು ಕಂಡುಬರುತ್ತದೆ. ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಆದೇಶವಾಗಿದ್ದರೂ ಪ್ರಾಧಿಕಾರವು ಈವರೆಗೂ ಹಸ್ತಾಂತರಿಸದೆ ವಿಳಂಬ ಧೋರಣೆ ಮಾಡಿರುವುದು ಕಂಡುಬರುತ್ತದೆ.


ಅಲ್ಲದೆ, ಲೀಸ್ ಗೆ ಕೊಟ್ಟ ಕೆಲವು ಸಂಸ್ಥೆಗಳಿಂದ ಪ್ರಾಧಿಕಾರವು ತೆರಿಗೆ ಹಣ ಸಂಗ್ರಹಿಸದೆ ಇರುವುದು ಕಂಡುಬರುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ನಿವೇದಿಸಲಾಗುವುದು ಎಂಬುದಾಗಿ ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.
Mangalore Misuse of Funds Allegation, Lokayukta Raid and Officials Inspection at Pilikula Nisargadham.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am