ಬ್ರೇಕಿಂಗ್ ನ್ಯೂಸ್
25-05-25 07:57 pm Mangalore Correspondent ಕರಾವಳಿ
ಮಂಗಳೂರು, ಮೇ 25 : ಕೆಫಟೇರಿಯಾ ಹೆಸರಲ್ಲಿ ಲೈಸನ್ಸ್ ಪಡೆದು ಹುಕ್ಕಾ ಬಾರ್ ನಡೆಸುತ್ತಿದ್ದುದಾಗಿ ಎಂಎಫ್ ಸಿ ಹೊಟೇಲ್ ಮಾಲೀಕನನ್ನು ಸಿಸಿಬಿ ಪೊಲೀಸರು ದಾಳಿ ಮಾಡಿ ಅರೆಸ್ಟ್ ಮಾಡಿದ್ದಾರೆಂಬ ಘಟನೆ ಬಗ್ಗೆ ಸ್ವತಃ ಎಂಎಫ್ ಸಿ ಮಾಲೀಕ ಸಿದ್ದಿಕ್ ಸ್ಪಷ್ಟನೆ ನೀಡಿದ್ದು ತನ್ನನ್ನು ಯಾರು ಕೂಡ ಬಂಧನ ಮಾಡಿಲ್ಲ. ತನಗೂ ಹುಕ್ಕಾ ಬಾರ್ ಗೂ ಯಾವುದೇ ಸಂಬಂಧ ಇಲ್ಲವೆಂದು ಹೇಳಿದ್ದಾರೆ.
ಮಂಗಳೂರು ಸಿಸಿಬಿ ಮತ್ತು ಕದ್ರಿ ಪೊಲೀಸರು ಜಂಟಿಯಾಗಿ ಕಂಕನಾಡಿಯ ಮ್ಯಾಕ್ ಮಾಲ್ ಕಟ್ಟಡದ ಪಾರ್ಕಿಂಗ್ ನಲ್ಲಿ ಬ್ಲಾಕ್ ಮೂನ್ ರೆಸ್ಟೋ ಕೆಫೆ ಹೆಸರಲ್ಲಿ ಹುಕ್ಕಾ ಬಾರ್ ನಡೆಸುತ್ತಿದ್ದಲ್ಲಿಗೆ ದಾಳಿ ನಡೆಸಿದ್ದರು. ಹುಕ್ಕಾ ಬಾರ್ ಮಾಲೀಕನೆಂದು ಎಂಎಫ್ ಸಿ ಹೊಟೇಲ್ ಮಾಲೀಕ ಸಿದ್ದಿಕ್, ಅಬ್ದುಲ್ ನಾಸಿರ್, ಸಫ್ವಾನ್ ಎಂಬವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಪ್ರಕಟಣೆ ನೀಡಿದ್ದರು. ಇದರ ಜೊತೆಗೆ, ಆರೋಪಿ ಸಿದ್ದಿಕ್ ಫೋಟೊವನ್ನೂ ನೀಡಿದ್ದರು.


ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಹೊಟೇಲ್ ಮಾಲೀಕ ಸಿದ್ದಿಕ್ ಆಡಿಯೋ ಮೆಸೇಜ್ ಮೂಲಕ ಸ್ಪಷ್ಟನೆ ನೀಡಿದ್ದು ತನ್ನನ್ನು ಪೊಲೀಸರು ಬಂಧಿಸಿಲ್ಲ. ಅಲ್ಲದೆ, ತನಗೂ ಹುಕ್ಕಾ ಬಾರ್ ಕೆಫೆಗೂ ಸಂಬಂಧ ಇಲ್ಲ. ಸದ್ಯಕ್ಕೆ ನಾನು ಮಂಜೇಶ್ವರದ ವರ್ಕಾಡಿಯ ತಾಯಿ ಮನೆಯಲ್ಲಿದ್ದು ಯಾರೋ ತನಗೆ ಆಗದವರು ಪಿತೂರಿ ಮಾಡಿದ್ದಾರೆ. ಪೊಲೀಸರು ಬಂಧಿಸಿದ್ದಾಗಿ ಹೇಳಿ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿದಿದ್ದಾರೆ. ತೇಜೋವಧೆ ಮಾಡುವ ಯತ್ನ ಮಾಡಿದ್ದಾರೆ. ಹುಕ್ಕಾ ಬಾರ್ ಬಗ್ಗೆ ತನಗೆ ಗೊತ್ತೇ ಇಲ್ಲ. ನನ್ನ ಜೊತೆಗೆ ಬಂಧಿಸಿದ್ದಾಗಿ ತೋರಿಸಿರುವ ಇನ್ನಿಬ್ಬರು ಕೂಡ ಅರೆಸ್ಟ್ ಆಗಿಲ್ಲ. ಅವರು ತಮ್ಮ ಮನೆಯಲ್ಲೇ ಇದ್ದಾರೆ.
ಸಿಸಿಬಿ ಪೊಲೀಸರು ಯಾರದ್ದೋ ಒತ್ತಡಕ್ಕೆ ಮಣಿದು ಈ ರೀತಿ ಮಾಡಿದ್ದಾರೆ. ನಾನು ಪೊಲೀಸರ ವಿರುದ್ಧ ಕೋರ್ಟಿನಲ್ಲಿ ಪ್ರಶ್ನಿಸುತ್ತೇನೆ. ಪೊಲೀಸ್ ಕಮಿಷನರ್ ವಿರುದ್ಧ ಮಾನನಷ್ಟ ಕೇಸು ಹಾಕುತ್ತೇನೆಂದು ಈ ಕುರಿತು ಸಂಪರ್ಕಿಸಿದ ಹೆಡ್ ಲೈನ್ ಕರ್ನಾಟಕಕ್ಕೆ ಸಿದ್ದಿಕ್ ತಿಳಿಸಿದ್ದಾರೆ.
ಪೊಲೀಸರು ಸಾಮಾನ್ಯವಾಗಿ ಯಾವುದೇ ಪ್ರಕರಣದಲ್ಲಿ ಆರೋಪಿಗಳನ್ನು ಬಂಧನ ಮಾಡಿದರೆ ಮಾತ್ರ ಫೋಟೊ ನೀಡುತ್ತಾರೆ. ಠಾಣೆಯಲ್ಲೇ ಜಾಮೀನು ನೀಡಬಲ್ಲ ಗಂಭೀರವಲ್ಲದ ಪ್ರಕರಣದಲ್ಲಿ ಆರೋಪಿಗಳ ಬಂಧನ ಆದರೂ ಫೋಟೊ ನೀಡುವುದಿಲ್ಲ. ಹುಕ್ಕಾ ಬಾರ್ ಇಡೀ ರಾಜ್ಯದಲ್ಲಿ ನಿಷೇಧವಿದ್ದು ಅಕ್ರಮವಾಗಿ ನಡೆಸುತ್ತಿದ್ದರೆ ಗಂಭೀರ ವಿಚಾರ. ಆದರೆ ಈ ಪ್ರಕರಣದಲ್ಲಿ ಮಾಲೀಕ ಸಿದ್ದಿಕ್ ನನ್ನು ಬಂಧಿಸಿದ್ದಾಗಿ ಹೇಳಿ ಮಾಧ್ಯಮಕ್ಕೆ ಪ್ರಕಟಣೆ ಕೊಟ್ಟು ಪೊಲೀಸರು ತಾವೇ ಬೆನ್ನು ತಟ್ಟಿಕೊಂಡಿದ್ದರು. ಈಗ ಆರೋಪಿ ಎನ್ನಲಾದ ಸಿದ್ದಿಕ್ ತನ್ನನ್ನು ಬಂಧನ ಮಾಡಿಯೇ ಇಲ್ಲ ಎನ್ನುತ್ತಿದ್ದು ಪೊಲೀಸರಿಗೆ ಸವಾಲು ಹಾಕಿದ್ದಾನೆ. ಬಂಧನ ಮಾಡದೇ ಪೊಲೀಸರು ಪ್ರಕಟಣೆ ನೀಡಿದ್ದಾರೆಯೇ ಅಂತ ಪೊಲೀಸ್ ಕಮಿಷನರ್ ಅವರೇ ಹೇಳಬೇಕು.
Mangalore Black Moon Resto cafe raid, MFC Hotel Owner Siddique Denies Arrest, Calls It Fake News, Vows to Challenge in Court.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm