ಬ್ರೇಕಿಂಗ್ ನ್ಯೂಸ್
26-05-25 07:09 pm Bangalore Correspondent ಕರಾವಳಿ
ಮಂಗಳೂರು, ಮೇ 26 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬಜ್ಪೆ ಪೇಟೆಯಲ್ಲಿ ವಿಶ್ವ ಹಿಂದು ಪರಿಷತ್ ವತಿಯಿಂದ ಆಯೋಜಿಸಿದ್ದ ಜನಾಗ್ರಹ ಸಭೆಗೆ ಪೊಲೀಸ್ ಅನುಮತಿ ಪಡೆದಿರಲಿಲ್ಲವೆಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆಯ ಶಾರದಾ ಮಂಟಪದ ಬಳಿ ಬಜ್ಪೆ ಚಲೋ ಎನ್ನುವ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಪೊಲೀಸರ ಅನುಮತಿ ಪಡೆದಿರಲಿಲ್ಲ. ಪೊಲೀಸ್ ಅನುಮತಿ ಪಡೆಯದೆ ನಡೆಸಿದ ಕಾರ್ಯಕ್ರಮದಲ್ಲಿ ಮೂರು ಸಾವಿರದಷ್ಟು ಜನರು ಪಾಲ್ಗೊಂಡಿದ್ದರು. ಕಾನೂನು ವಿರುದ್ಧವಾಗಿ ಬಜ್ಪೆ ಪೇಟೆಯಲ್ಲಿ ಜನರು ಸೇರಿದ್ದು, ಆಮೂಲಕ ಬಜ್ಪೆಗೆ ಹೋಗುವ ಮತ್ತು ಹಿಂತಿರುಗುವ ದಾರಿಗಳನ್ನು ಮುಚ್ಚಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಪ್ರಯಾಣಿಕರಿಗೆ ಅಡಚಣೆಯಾಗಿತ್ತು.

ಇದಲ್ಲದೆ, ಪ್ರತಿಭಟನೆ ಸಂದರ್ಭದಲ್ಲಿ ಭಾಷಣಕಾರ ಶ್ರೀಕಾಂತ್ ಶೆಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳುವಂತೆ ಹೇಳಿ ಜನರನ್ನು ಪ್ರಚೋದಿಸಿದ್ದು, ಇದರಿಂದ ಕೋಮು ಸೌಹಾರ್ದ ಕದಡುವ ಯತ್ನ ಮಾಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಬಜ್ಪೆ ಠಾಣೆಯಲ್ಲಿ ಪೊಲೀಸರು ಆಯೋಜಕರು ಮತ್ತು ಭಾಷಣಕಾರನ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ ಸೆಕ್ಷನ್ ಗಳಾದ 189(2), 191(2), 285, 192, 351(2), 351(3), 190 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 107 ಮತ್ತು 109 ಪ್ರಕಾರ ಪ್ರಕರಣ ದಾಖಲಾಗಿದೆ.
Mangalore Bajpe Chalo Held Without Police Permission; FIR Filed Against Organizers and Speaker at Bajpe Station.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm