ಬ್ರೇಕಿಂಗ್ ನ್ಯೂಸ್
27-05-25 10:29 pm Mangalore Correspondent ಕರಾವಳಿ
ಮಂಗಳೂರು, ಮೇ 27 : ಬಂಟ್ವಾಳದಲ್ಲಿ ಯುವಕನ ಕೊಲೆ ಹಿನ್ನೆಲೆ ಮುಸ್ಲಿಂ ಸಂಘಟನೆಗಳು ಹಾಗೂ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ಪ್ರಚೋದನಕಾರಿ ಭಾಷಣ ಮಾಡಿದವರನ್ನು ಬಂಧಿಸಿಲ್ಲ ಯಾಕೆಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಹಳೆ ಕೇಸಿನ ನೆಪದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆಯ ಹಿನ್ನೆಲೆಯಲ್ಲಿ ಮೇ 1ರಂದು ಎಜೆ ಆಸ್ಪತ್ರೆಯ ಬಳಿ ಜಮಾಯಿಸಿದ್ದ ಕಾರ್ಯಕರ್ತರ ಬೇಡಿಕೆಯಂತೆ, ಶರಣ್ ಪಂಪ್ವೆಲ್ ಮರುದಿನ ಮೇ 2ರಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಮಾಡುವಂತೆ ಕರೆ ಕೊಟ್ಟಿದ್ದರು. ಅದರಂತೆ, ಮರುದಿನ ಈ ಹೇಳಿಕೆಯಿಂದ ಪ್ರೇರಣೆ ಪಡೆದ ಕಾರ್ಯಕರ್ತರು ಬಸ್ಸಿಗೆ ಕಲ್ಲು ತೂರಿದ್ದಲ್ಲದೆ, ಕೆಲವು ಕಡೆ ಮುಸ್ಲಿಂ ಯುವಕರಿಗೆ ಚೂರಿ ಇರಿತ ಮಾಡಿದ್ದರು. ಅಹಿತಕರ ಘಟನೆಗಳಿಗೆ ಶರಣ್ ಪಂಪ್ವೆಲ್ ಬಂದ್ ಕರೆ ಮತ್ತು ಸುಹಾಸ್ ಶೆಟ್ಟಿಯನ್ನು ಪಿಎಫ್ಐನ ಜಿಹಾದಿ ಇಸ್ಲಾಮಿ ಭಯೋತ್ಪಾದಕರು ಮಾಡಿದ್ದಾರೆಂದು ಉದ್ರೇಕಿಸಿದ್ದು ಕಾರಣವೆಂದು ಕದ್ರಿ ಠಾಣೆಯಲ್ಲಿ ಕೇಸು ದಾಖಲಿಸಲಾಗಿತ್ತು.






ಕದ್ರಿ ಠಾಣೆಯಲ್ಲಿ ಬಿಎನ್ ಎಸ್ ಸೆಕ್ಷನ್ 49, 196(1), 324(2), 324(4), 324(5), 353(2) ಪ್ರಕಾರ ಕೇಸು ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ದಾಖಲೆಗಳನ್ನು ಸಂಗ್ರಹಿಸಿ, ವಿಚಾರಣೆಗೆ ಹಾಜರಾಗಲು ಎರಡು ಬಾರಿ ನೋಟೀಸ್ ನೀಡಲಾಗಿತ್ತು. ವಿಚಾರಣೆಗೆ ಬಾರದೆ ತನಿಖೆಗೂ ಸಹಕಾರ ನೀಡದೇ ಇದ್ದ ಶರಣ್ ಪಂಪ್ವೆಲ್ ಅವರನ್ನು ಮೇ 27ರಂದು ಬಂಧನ ಮಾಡಲಾಗಿದೆ. ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಇತ್ತ ಮುಸ್ಲಿಂ ಯುವಕನ ಕೊಲೆ ಹಿನ್ನೆಲೆಯಲ್ಲಿ ಮುಸ್ಲಿಂ ನಾಯಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪೊಲೀಸರ ವಿರುದ್ಧ ತಿರುಗಿದೆ. ಇದೇ ವೇಳೆ, ಅಬ್ದುಲ್ ರಹೀಂ ಕೊಲೆ ಘಟನೆಯನ್ನು ಖಂಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದಾರೆ.
VHP Leader Sharan Pumpwell Arrested by Kadri Police for Calling Mangalore Bandh Over Suhas Shetty Murder.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am