ಬ್ರೇಕಿಂಗ್ ನ್ಯೂಸ್
27-05-25 10:49 pm Mangalore Correspondent ಕರಾವಳಿ
ಮಂಗಳೂರು, ಮೇ 27 : ಬಂಟ್ವಾಳದಲ್ಲಿ ಬರ್ಬರವಾಗಿ ಹತ್ಯೆಯಾದ ಅಬ್ದುಲ್ ರಹೀಂ ಅವರ ಮೃತದೇಹ ಇರಿಸಲಾದ ಯೇನಪೋಯಾ ಆಸ್ಪತ್ರೆಗೆ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಭೇಟಿ ನೀಡಿದ್ದು ಈ ವೇಳೆ ಹಿಂದು ಸಂಘಟನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಳ್ತಮಜಲು ಬಳಿ ಪಿಕಪ್ ಚಾಲಕನಾಗಿದ್ದ ಮುಸ್ಲಿಂ ಯುವಕನಿಗೆ ಮರಳು ಲೋಡ್ ಗೆ ಕರೆದಿದ್ದರು. ಈ ಸಂದರ್ಭ ಸಂಘ ಪರಿವಾರಕ್ಕೆ ಸೇರಿದ ಗೂಂಡಾ ಪಡೆ ಏಕಾಏಕಿ ತಲವಾರು ದಾಳಿ ನಡೆಸಿದೆ. ಘಟನೆಯಲ್ಲಿ ಇಮ್ತಿಯಾಜ್ ಆಲಿಯಾಸ್ ಅಬ್ದುಲ್ ರಹೀಂ ಸ್ಥಳದಲ್ಲೇ ಹತ್ಯೆಯಾಗಿದ್ದಾರೆ. ಕೆಲವು ದಿನಗಳಿಂದ ಕಿಡಿಗೇಡಿಗಳು ಮುಸ್ಲಿಮರಿಗೆ ಬಹಿರಂಗ ಬೆದರಿಕೆ ಹಾಕ್ತಾ ಇದ್ದಾರೆ. ರೌಡಿಶೀಟರ್ ಒಬ್ಬನ ಹತ್ಯೆಗೆ ಪ್ರತೀಕಾರವಾಗಿ ಬೆದರಿಕೆ ಹಾಕ್ತಾ ಇದಾರೆ. ಮೊನ್ನೆ ಪ್ರತಿಭಟನೆಯಲ್ಲಿ ಶ್ರೀಕಾಂತ್ ಶೆಟ್ಟಿ ಎಂಬಾತ ರಕ್ತಕ್ಕೆ ರಕ್ತ ಅಂತ ಹೇಳಿದ್ದಾನೆ. ಮತ್ತೊಬ್ಬ ಭರತ್ ಕುಮ್ಡೇಲ್ ಎಂಬ ಗೂಂಡಾ ಪೋಸ್ಟ್ ಮಾರ್ಟಂ ಕೂಡ ಮಾಡಲು ಆಗದ ರೀತಿಯಲ್ಲಿ ಕೊಲೆ ಮಾಡ್ತೇನೆ ಅಂದಿದ್ದಾನೆ. ಸಾಮಾಜಿಕ ತಾಣಗಳಲ್ಲಿ ಬೆದರಿಕೆ ಹಾಕಿದವರ ವಿರುದ್ದ 45 ಎಫ್ಐಆರ್ ಆಗಿದೆ. ಆದರೆ ಒಂದಿಬ್ಬರನ್ನ ಬಿಟ್ಟು ಯಾರನ್ನೂ ಬಂಧನ ಮಾಡಲಿಲ್ಲ. ಪೊಲೀಸರು ಆಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ಮಾಡ್ತಾರೆ ಅಂತಿದಾರೆ, ಆದರೆ ಅದಕ್ಕೆ ಮತ್ತೊಂದು ಹೆಣ ಬೀಳಬೇಕಾ ಎಂದು ಪ್ರಶ್ನಿಸಿದರು.
15 ಮಂದಿ ಬಹಳ ವ್ಯವಸ್ಥಿತವಾಗಿ ಈ ಹತ್ಯೆ ಮಾಡಿದ್ದಾರೆ. ಇದರ ವಿರುದ್ದ ವಿಶೇಷ ತನಿಖಾ ತಂಡ ರಚಿಸಿ ತಕ್ಷಣ ತನಿಖೆ ಮಾಡಬೇಕು. ರಹೀಂ ಒಬ್ಬ ಅಮಾಯಕ ಯುವಕ, ಯಾವುದೇ ಸಂಘಟನೆಯಲ್ಲಿ ಆತ ಇರಲಿಲ್ಲ. ಆತ ಮಸೀದಿಯಲ್ಲಿ ಕಾರ್ಯದರ್ಶಿ ಆಗಿದ್ದು, ಶ್ರಮಜೀವಿಯಾಗಿದ್ದ. ಯಾವುದೇ ಕೇಸು ಆತನ ಮೇಲೆ ಇಲ್ಲ. ಸಂಘ ಪರಿವಾರದ ಗೂಂಡಾಗಳು ಅಂತಹ ಅಮಾಯಕನನ್ನ ಕೊಂದಿದ್ದಾರೆ. ಮರಳು ಲೋಡ್ ಬಾಡಿಗೆಗೆ ಕರೆಸಿ ಹತ್ಯೆ ಮಾಡಲಾಗಿದೆ.
ಈ ಹಿಂದೆ ಯಾವುದೇ ಸಂಘಟನೆಯಲ್ಲಿ ಇಲ್ಲದ ಫಾಜಿಲ್ ಹತ್ಯೆ ಮಾಡಿದ್ದರು. ಇವರಿಗೆ ಒಬ್ಬ ಮುಸಲ್ಮಾನನ ರಕ್ತ ಬೇಕು, ಯಾವುದೇ ಸಂಘಟನೆಯಲ್ಲಿ ಇರಬೇಕು ಅಂತ ಇಲ್ಲ. ಬಜಪೆಯಲ್ಲಿ ಶ್ರೀಕಾಂತ್ ಶೆಟ್ಟಿ ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದ. ಪೊಲೀಸರ ಗಮನಕ್ಕೆ ತಂದರೂ ಎಫ್ ಐಆರ್ ಮಾಡಿದ್ದು ಬಿಟ್ಟರೆ ಕ್ರಮ ಆಗಿಲ್ಲ. ಸಂಘ ಪರಿವಾರದವರು ಓಪನ್ ಹೇಳಿಕೆ ಕೊಟ್ಟರೂ ಕ್ರಮ ಆಗ್ತಿಲ್ಲ. ಇಲ್ಲಿನ ಬಿಜೆಪಿ ಶಾಸಕರು ಕೂಡ ಬಹಿರಂಗ ಹೇಳಿಕೆ ಕೊಡ್ತಾ ಇದ್ದಾರೆ. ಸರ್ಕಾರ ತಕ್ಷಣ ಕೊಲೆಯ ಹಿಂದಿರೋ ಎಲ್ಲರನ್ನೂ ಹುಡುಕಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
Mangalore SDPI District President Anwar Sadat Visits Yenepoya Hospital, Condemns Hindu Organizations after Brutal Murder in Bantwal.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm