ಬ್ರೇಕಿಂಗ್ ನ್ಯೂಸ್
27-05-25 10:49 pm Mangalore Correspondent ಕರಾವಳಿ
ಮಂಗಳೂರು, ಮೇ 27 : ಬಂಟ್ವಾಳದಲ್ಲಿ ಬರ್ಬರವಾಗಿ ಹತ್ಯೆಯಾದ ಅಬ್ದುಲ್ ರಹೀಂ ಅವರ ಮೃತದೇಹ ಇರಿಸಲಾದ ಯೇನಪೋಯಾ ಆಸ್ಪತ್ರೆಗೆ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಭೇಟಿ ನೀಡಿದ್ದು ಈ ವೇಳೆ ಹಿಂದು ಸಂಘಟನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಳ್ತಮಜಲು ಬಳಿ ಪಿಕಪ್ ಚಾಲಕನಾಗಿದ್ದ ಮುಸ್ಲಿಂ ಯುವಕನಿಗೆ ಮರಳು ಲೋಡ್ ಗೆ ಕರೆದಿದ್ದರು. ಈ ಸಂದರ್ಭ ಸಂಘ ಪರಿವಾರಕ್ಕೆ ಸೇರಿದ ಗೂಂಡಾ ಪಡೆ ಏಕಾಏಕಿ ತಲವಾರು ದಾಳಿ ನಡೆಸಿದೆ. ಘಟನೆಯಲ್ಲಿ ಇಮ್ತಿಯಾಜ್ ಆಲಿಯಾಸ್ ಅಬ್ದುಲ್ ರಹೀಂ ಸ್ಥಳದಲ್ಲೇ ಹತ್ಯೆಯಾಗಿದ್ದಾರೆ. ಕೆಲವು ದಿನಗಳಿಂದ ಕಿಡಿಗೇಡಿಗಳು ಮುಸ್ಲಿಮರಿಗೆ ಬಹಿರಂಗ ಬೆದರಿಕೆ ಹಾಕ್ತಾ ಇದ್ದಾರೆ. ರೌಡಿಶೀಟರ್ ಒಬ್ಬನ ಹತ್ಯೆಗೆ ಪ್ರತೀಕಾರವಾಗಿ ಬೆದರಿಕೆ ಹಾಕ್ತಾ ಇದಾರೆ. ಮೊನ್ನೆ ಪ್ರತಿಭಟನೆಯಲ್ಲಿ ಶ್ರೀಕಾಂತ್ ಶೆಟ್ಟಿ ಎಂಬಾತ ರಕ್ತಕ್ಕೆ ರಕ್ತ ಅಂತ ಹೇಳಿದ್ದಾನೆ. ಮತ್ತೊಬ್ಬ ಭರತ್ ಕುಮ್ಡೇಲ್ ಎಂಬ ಗೂಂಡಾ ಪೋಸ್ಟ್ ಮಾರ್ಟಂ ಕೂಡ ಮಾಡಲು ಆಗದ ರೀತಿಯಲ್ಲಿ ಕೊಲೆ ಮಾಡ್ತೇನೆ ಅಂದಿದ್ದಾನೆ. ಸಾಮಾಜಿಕ ತಾಣಗಳಲ್ಲಿ ಬೆದರಿಕೆ ಹಾಕಿದವರ ವಿರುದ್ದ 45 ಎಫ್ಐಆರ್ ಆಗಿದೆ. ಆದರೆ ಒಂದಿಬ್ಬರನ್ನ ಬಿಟ್ಟು ಯಾರನ್ನೂ ಬಂಧನ ಮಾಡಲಿಲ್ಲ. ಪೊಲೀಸರು ಆಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ಮಾಡ್ತಾರೆ ಅಂತಿದಾರೆ, ಆದರೆ ಅದಕ್ಕೆ ಮತ್ತೊಂದು ಹೆಣ ಬೀಳಬೇಕಾ ಎಂದು ಪ್ರಶ್ನಿಸಿದರು.
15 ಮಂದಿ ಬಹಳ ವ್ಯವಸ್ಥಿತವಾಗಿ ಈ ಹತ್ಯೆ ಮಾಡಿದ್ದಾರೆ. ಇದರ ವಿರುದ್ದ ವಿಶೇಷ ತನಿಖಾ ತಂಡ ರಚಿಸಿ ತಕ್ಷಣ ತನಿಖೆ ಮಾಡಬೇಕು. ರಹೀಂ ಒಬ್ಬ ಅಮಾಯಕ ಯುವಕ, ಯಾವುದೇ ಸಂಘಟನೆಯಲ್ಲಿ ಆತ ಇರಲಿಲ್ಲ. ಆತ ಮಸೀದಿಯಲ್ಲಿ ಕಾರ್ಯದರ್ಶಿ ಆಗಿದ್ದು, ಶ್ರಮಜೀವಿಯಾಗಿದ್ದ. ಯಾವುದೇ ಕೇಸು ಆತನ ಮೇಲೆ ಇಲ್ಲ. ಸಂಘ ಪರಿವಾರದ ಗೂಂಡಾಗಳು ಅಂತಹ ಅಮಾಯಕನನ್ನ ಕೊಂದಿದ್ದಾರೆ. ಮರಳು ಲೋಡ್ ಬಾಡಿಗೆಗೆ ಕರೆಸಿ ಹತ್ಯೆ ಮಾಡಲಾಗಿದೆ.
ಈ ಹಿಂದೆ ಯಾವುದೇ ಸಂಘಟನೆಯಲ್ಲಿ ಇಲ್ಲದ ಫಾಜಿಲ್ ಹತ್ಯೆ ಮಾಡಿದ್ದರು. ಇವರಿಗೆ ಒಬ್ಬ ಮುಸಲ್ಮಾನನ ರಕ್ತ ಬೇಕು, ಯಾವುದೇ ಸಂಘಟನೆಯಲ್ಲಿ ಇರಬೇಕು ಅಂತ ಇಲ್ಲ. ಬಜಪೆಯಲ್ಲಿ ಶ್ರೀಕಾಂತ್ ಶೆಟ್ಟಿ ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದ. ಪೊಲೀಸರ ಗಮನಕ್ಕೆ ತಂದರೂ ಎಫ್ ಐಆರ್ ಮಾಡಿದ್ದು ಬಿಟ್ಟರೆ ಕ್ರಮ ಆಗಿಲ್ಲ. ಸಂಘ ಪರಿವಾರದವರು ಓಪನ್ ಹೇಳಿಕೆ ಕೊಟ್ಟರೂ ಕ್ರಮ ಆಗ್ತಿಲ್ಲ. ಇಲ್ಲಿನ ಬಿಜೆಪಿ ಶಾಸಕರು ಕೂಡ ಬಹಿರಂಗ ಹೇಳಿಕೆ ಕೊಡ್ತಾ ಇದ್ದಾರೆ. ಸರ್ಕಾರ ತಕ್ಷಣ ಕೊಲೆಯ ಹಿಂದಿರೋ ಎಲ್ಲರನ್ನೂ ಹುಡುಕಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
Mangalore SDPI District President Anwar Sadat Visits Yenepoya Hospital, Condemns Hindu Organizations after Brutal Murder in Bantwal.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm