ಬ್ರೇಕಿಂಗ್ ನ್ಯೂಸ್
29-05-25 10:40 pm Mangalore Correspondent ಕರಾವಳಿ
ಮಂಗಳೂರು, ಮೇ.29: ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಕೊಲೆಯ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಎಂದು ಆರೋಪಿಸಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ಸೇರಿದಂತೆ ಮುಸ್ಲಿಂ ನಾಯಕರು ರಾಜಿನಾಮೆಗೆ ಮುಂದಾಗಿದ್ದು, ಈ ಕುರಿತು ಕರೆದಿದ್ದ ಸಭೆ ಗೊಂದಲದ ಗೂಡಾಗಿ ಪರಿಣಮಿಸಿತು.
ನಗರದ ಶಾದಿ ಮಹಲ್ ಹಾಲ್ ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ನೂರಾರು ಕಾರ್ಯಕರ್ತರು, ಮುಸ್ಲಿಂ ನಾಯಕರು ಪಾಲ್ಗೊಂಡಿದ್ದರು. ಆದರೆ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಅವರಿಗೆ ಕರೆ ಮಾಡಿದ್ದು, ದುಡುಕಿನ ನಿರ್ಧಾರ ತಳೆಯದಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಮುಂದೆ ಸಾಮೂಹಿಕ ರಾಜಿನಾಮೆಯೆಂದು ಸಭೆ ಕರೆದಿದ್ದರೂ, ಶಾಹುಲ್ ಹಮೀದ್ ಮತ್ತು ಕೆಲವರು ಸದ್ಯಕ್ಕೆ ರಾಜಿನಾಮೆ ನೀಡುವುದಿಲ್ಲ. ಸರ್ಕಾರಕ್ಕೆ ಒಂದು ವಾರದ ಗಡುವು ನೀಡುವುದಾಗಿ ಹೇಳುತ್ತಿದ್ದಂತೆ ಕಾರ್ಯಕರ್ತರು ಗರಂ ಆಗಿದ್ದು, ಸಾಮೂಹಿಕ ರಾಜಿನಾಮೆಯನ್ನೇ ನೀಡುವಂತೆ ಆಗ್ರಹ ಮಾಡಿದ್ದಾರೆ.
ಕಾರ್ಯಕರ್ತರು ನ್ಯಾಯಕ್ಕಾಗಿ ಧ್ವನಿಯೆತ್ತಿ ಘೆರಾವ್ ಹಾಕುತ್ತಿದ್ದರೆ, ಮುಖಂಡರು ಕಾರ್ಯಕರ್ತರನ್ನು ಸಂತೈಸುವುದಕ್ಕಾಗಿ ವೇದಿಕೆ ಕಡೆಯಿಂದ ಮಾತನಾಡುತ್ತಿದ್ದರು. ಎರಡೂ ಕಡೆಯಿಂದ ಎಲ್ಲರೂ ಧ್ವನಿಯೆತ್ತಿ ಮಾತನಾಡುತ್ತಿದ್ದರಿಂದ ಇಡೀ ಸಭೆಯಲ್ಲಿ ಏನಾಗುತ್ತಿದೆ ಎಂದು ತಿಳಿಯದೆ ಗದ್ದಲ ಉಂಟಾಗಿತ್ತು. ಕಾರ್ಯಕರ್ತರ ಒತ್ತಾಯದಂತೆ, ಬಳಿಕ ಶಾಹುಲ್ ಹಮೀದ್ ಸೇರಿದಂತೆ ಅಲ್ಪಸಂಖ್ಯಾತ ಘಟಕದ ಎಲ್ಲ ನಾಯಕರು ತಮ್ಮ ಹುದ್ದೆಗಳಿಗೆ ರಾಜಿನಾಮೆ ನೀಡಿದ್ದಾರೆ. ಆದರೆ ಕಾರ್ಯಕರ್ತರು ಇಷ್ಟಕ್ಕೇ ನಿಲ್ಲದೆ ಜಿಲ್ಲೆಯಾದ್ಯಂತ ಹೋರಾಟ ಕೈಗೆತ್ತಿಕೊಳ್ಳುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ. ಉಳ್ಳಾಲ, ಮಂಗಳೂರು, ಸುರತ್ಕಲ್ ಹಾಗೂ ಜಿಲ್ಲೆಯ ವಿವಿಧ ಭಾಗದಿಂದ ಮುಸ್ಲಿಂ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.


ಒಬ್ಬರ ವರ್ಗಾವಣೆಯಿಂದ ಏನೂ ಆಗಲ್ಲ
ಸಭೆಯ ಕೊನೆಯಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಎಂ.ಎಸ್.ಮಹಮ್ಮದ್, ಅಹಿತಕರ ಘಟನೆಗಳಿಗೆ ಪೊಲೀಸ್ ಇಲಾಖೆಯ ವೈಫಲ್ಯ ಕಾರಣ. ಬಜ್ಪೆ ಚಲೋ ಕಾರ್ಯಕ್ರಮಕ್ಕೆ ಪರವಾನಗಿ ಇಲ್ಲದಿದ್ದರೂ ಸಭೆಯನ್ನು ಆಯೋಜಿಸಿ ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡುವುದಕ್ಕೆ ಪೊಲೀಸರೇ ಅವಕಾಶ ನೀಡಿದ್ದಾರೆ. ಅಲ್ಲಿ ಬಹಿರಂಗ ಬೆದರಿಕೆ ಹಾಕಿದ್ದರೂ ಪೊಲೀಸರು ಕ್ರಮ ತೆಗೆದುಕೊಂಡಿರಲಿಲ್ಲ. ಅದರಿಂದಾಗಿಯೇ ಅಬ್ದುಲ್ ರಹಿಮಾನ್ ಕೊಲೆಯಾಗಿದೆ ಎಂದು ಹೇಳುತ್ತೇನೆ.
ಇವತ್ತು ಒಂದೂವರೆ ಸಾವಿರದಷ್ಟು ಕಾರ್ಯಕರ್ತರು ಸಭೆಯಲ್ಲಿ ಸೇರಿದ್ದಾರೆ. ಎಲ್ಲ ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಕಮಿಷನರ್ ಅವರನ್ನ ವರ್ಗಾವಣೆ ಮಾಡುವ ಬಗ್ಗೆ ಮಾಹಿತಿ ಲಭಿಸಿದೆ. ಒಬ್ಬರ ವರ್ಗಾವಣೆಯಿಂದ ಪೊಲೀಸ್ ಇಲಾಖೆ ಸರಿಯಾಗುವುದಿಲ್ಲ. ಅಮೂಲಾಗ್ರ ಬದಲಾವಣೆ ಆಗಬೇಕಿದೆ. ಮುಖ್ಯಮಂತ್ರಿಗಳು ಬಿಕೆ ಹರಿಪ್ರಸಾದ್ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಜಿಲ್ಲೆಗೆ ಕಳುಹಿಸುತ್ತಿದ್ದಾರೆ, ಅವರ ಜೊತೆ ಎಲ್ಲವನ್ನೂ ಚರ್ಚೆ ಮಾಡುತ್ತೇವೆ ಎಂದರು.
A meeting of the Congress party's minority cell in Mangaluru turned chaotic on the afternoon of May 29, as tensions flared over the decision to initiate mass resignations in protest against the state government's handling of recent incidents in Dakshina Kannada district.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 03:31 pm
Mangalore Correspondent
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm