ಬ್ರೇಕಿಂಗ್ ನ್ಯೂಸ್
29-05-25 10:40 pm Mangalore Correspondent ಕರಾವಳಿ
ಮಂಗಳೂರು, ಮೇ.29: ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಕೊಲೆಯ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಎಂದು ಆರೋಪಿಸಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ಸೇರಿದಂತೆ ಮುಸ್ಲಿಂ ನಾಯಕರು ರಾಜಿನಾಮೆಗೆ ಮುಂದಾಗಿದ್ದು, ಈ ಕುರಿತು ಕರೆದಿದ್ದ ಸಭೆ ಗೊಂದಲದ ಗೂಡಾಗಿ ಪರಿಣಮಿಸಿತು.
ನಗರದ ಶಾದಿ ಮಹಲ್ ಹಾಲ್ ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ನೂರಾರು ಕಾರ್ಯಕರ್ತರು, ಮುಸ್ಲಿಂ ನಾಯಕರು ಪಾಲ್ಗೊಂಡಿದ್ದರು. ಆದರೆ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಅವರಿಗೆ ಕರೆ ಮಾಡಿದ್ದು, ದುಡುಕಿನ ನಿರ್ಧಾರ ತಳೆಯದಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಮುಂದೆ ಸಾಮೂಹಿಕ ರಾಜಿನಾಮೆಯೆಂದು ಸಭೆ ಕರೆದಿದ್ದರೂ, ಶಾಹುಲ್ ಹಮೀದ್ ಮತ್ತು ಕೆಲವರು ಸದ್ಯಕ್ಕೆ ರಾಜಿನಾಮೆ ನೀಡುವುದಿಲ್ಲ. ಸರ್ಕಾರಕ್ಕೆ ಒಂದು ವಾರದ ಗಡುವು ನೀಡುವುದಾಗಿ ಹೇಳುತ್ತಿದ್ದಂತೆ ಕಾರ್ಯಕರ್ತರು ಗರಂ ಆಗಿದ್ದು, ಸಾಮೂಹಿಕ ರಾಜಿನಾಮೆಯನ್ನೇ ನೀಡುವಂತೆ ಆಗ್ರಹ ಮಾಡಿದ್ದಾರೆ.
ಕಾರ್ಯಕರ್ತರು ನ್ಯಾಯಕ್ಕಾಗಿ ಧ್ವನಿಯೆತ್ತಿ ಘೆರಾವ್ ಹಾಕುತ್ತಿದ್ದರೆ, ಮುಖಂಡರು ಕಾರ್ಯಕರ್ತರನ್ನು ಸಂತೈಸುವುದಕ್ಕಾಗಿ ವೇದಿಕೆ ಕಡೆಯಿಂದ ಮಾತನಾಡುತ್ತಿದ್ದರು. ಎರಡೂ ಕಡೆಯಿಂದ ಎಲ್ಲರೂ ಧ್ವನಿಯೆತ್ತಿ ಮಾತನಾಡುತ್ತಿದ್ದರಿಂದ ಇಡೀ ಸಭೆಯಲ್ಲಿ ಏನಾಗುತ್ತಿದೆ ಎಂದು ತಿಳಿಯದೆ ಗದ್ದಲ ಉಂಟಾಗಿತ್ತು. ಕಾರ್ಯಕರ್ತರ ಒತ್ತಾಯದಂತೆ, ಬಳಿಕ ಶಾಹುಲ್ ಹಮೀದ್ ಸೇರಿದಂತೆ ಅಲ್ಪಸಂಖ್ಯಾತ ಘಟಕದ ಎಲ್ಲ ನಾಯಕರು ತಮ್ಮ ಹುದ್ದೆಗಳಿಗೆ ರಾಜಿನಾಮೆ ನೀಡಿದ್ದಾರೆ. ಆದರೆ ಕಾರ್ಯಕರ್ತರು ಇಷ್ಟಕ್ಕೇ ನಿಲ್ಲದೆ ಜಿಲ್ಲೆಯಾದ್ಯಂತ ಹೋರಾಟ ಕೈಗೆತ್ತಿಕೊಳ್ಳುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ. ಉಳ್ಳಾಲ, ಮಂಗಳೂರು, ಸುರತ್ಕಲ್ ಹಾಗೂ ಜಿಲ್ಲೆಯ ವಿವಿಧ ಭಾಗದಿಂದ ಮುಸ್ಲಿಂ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.


ಒಬ್ಬರ ವರ್ಗಾವಣೆಯಿಂದ ಏನೂ ಆಗಲ್ಲ
ಸಭೆಯ ಕೊನೆಯಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಎಂ.ಎಸ್.ಮಹಮ್ಮದ್, ಅಹಿತಕರ ಘಟನೆಗಳಿಗೆ ಪೊಲೀಸ್ ಇಲಾಖೆಯ ವೈಫಲ್ಯ ಕಾರಣ. ಬಜ್ಪೆ ಚಲೋ ಕಾರ್ಯಕ್ರಮಕ್ಕೆ ಪರವಾನಗಿ ಇಲ್ಲದಿದ್ದರೂ ಸಭೆಯನ್ನು ಆಯೋಜಿಸಿ ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡುವುದಕ್ಕೆ ಪೊಲೀಸರೇ ಅವಕಾಶ ನೀಡಿದ್ದಾರೆ. ಅಲ್ಲಿ ಬಹಿರಂಗ ಬೆದರಿಕೆ ಹಾಕಿದ್ದರೂ ಪೊಲೀಸರು ಕ್ರಮ ತೆಗೆದುಕೊಂಡಿರಲಿಲ್ಲ. ಅದರಿಂದಾಗಿಯೇ ಅಬ್ದುಲ್ ರಹಿಮಾನ್ ಕೊಲೆಯಾಗಿದೆ ಎಂದು ಹೇಳುತ್ತೇನೆ.
ಇವತ್ತು ಒಂದೂವರೆ ಸಾವಿರದಷ್ಟು ಕಾರ್ಯಕರ್ತರು ಸಭೆಯಲ್ಲಿ ಸೇರಿದ್ದಾರೆ. ಎಲ್ಲ ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಕಮಿಷನರ್ ಅವರನ್ನ ವರ್ಗಾವಣೆ ಮಾಡುವ ಬಗ್ಗೆ ಮಾಹಿತಿ ಲಭಿಸಿದೆ. ಒಬ್ಬರ ವರ್ಗಾವಣೆಯಿಂದ ಪೊಲೀಸ್ ಇಲಾಖೆ ಸರಿಯಾಗುವುದಿಲ್ಲ. ಅಮೂಲಾಗ್ರ ಬದಲಾವಣೆ ಆಗಬೇಕಿದೆ. ಮುಖ್ಯಮಂತ್ರಿಗಳು ಬಿಕೆ ಹರಿಪ್ರಸಾದ್ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಜಿಲ್ಲೆಗೆ ಕಳುಹಿಸುತ್ತಿದ್ದಾರೆ, ಅವರ ಜೊತೆ ಎಲ್ಲವನ್ನೂ ಚರ್ಚೆ ಮಾಡುತ್ತೇವೆ ಎಂದರು.
A meeting of the Congress party's minority cell in Mangaluru turned chaotic on the afternoon of May 29, as tensions flared over the decision to initiate mass resignations in protest against the state government's handling of recent incidents in Dakshina Kannada district.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm