ಬ್ರೇಕಿಂಗ್ ನ್ಯೂಸ್
30-05-25 08:44 am Mangaluru Correspondent ಕರಾವಳಿ
ಉಳ್ಳಾಲ, ಮೇ 30: ನಿನ್ನೆ ರಾತ್ರಿಯಿಡೀ ನಿರಂತರ ಸುರಿದ ಧಾರಾಕಾರ ಮಳೆಗೆ ಉಳ್ಳಾಲ ತಾಲೂಕಿನಾದ್ಯಂತ ಜಲಪ್ರಳಯ ಉಂಟಾಗಿದೆ. ಮಳೆ ಅವಾಂತರಕ್ಕೆ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದ ಪರಿಣಾಮ ಬಾಲಕಿಯೊಬ್ಬಳು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಜನಾಡಿ ಬಳಿಯ ಮೊಂಟೆಪದವು ಸಮೀಪದ ಕೋಡಿ ಎಂಬಲ್ಲಿ ಮನೆ ಮೇಲೆ ಗುಡ್ಡ ಜರಿದು ಮಹಿಳೆ ಮೃತಪಟ್ಟಿದ್ದು, ಉಳಿದವರ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಕಾನಕೆರೆ ನಿವಾಸಿ ನೌಶಾದ್ ಎಂಬವರ ಪುತ್ರಿ ಫಾತಿಮ ನಯೀಮ(10) ಮೃತಪಟ್ಟ ಬಾಲಕಿ. ಕಾನಕರೆಯ ನೌಶಾದ್ ಅವರ ಮನೆಗೆ ಹಿಂಬದಿ ಗುಡ್ಡೆಯ ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಬಾಲಕಿಯ ಮೇಲೆ ಬಿದ್ದಿದೆ. ಬಾಲಕಿಯನ್ನ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಮಂಜನಾಡಿ ಗ್ರಾಮದ ಮೊಂಟೆಪದವು ಕೋಡಿಯಲ್ಲಿ ಗುಡ್ಡ ಜರಿದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (50) ಮೃತಪಟ್ಟಿದ್ದಾರೆ. ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದು ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಕಾಂತಪ್ಪ ಪೂಜಾರಿ ಕಾಲು ಮುರಿದಿದ್ದು ಗಂಭೀರ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರು ಮಹಿಳೆ ಮತ್ತು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್ ಭೇಟಿ ನೀಡಿದ್ದು ರಕ್ಷಣಾ ಕಾರ್ಯ ಮುಂದುವರಿದಿದೆ.
ಉಳ್ಳಾಲ ಬೈಲಿನಲ್ಲೂ ಕೃತಕ ನೆರೆಯಿಂದ ಹಲವು ಮನೆಗಳು ಜಲಾವೃತಗೊಂಡಿವೆ. ಮೊಗವೀರ ಸಮುದಾಯದವರು ಬೋಟ್ ಗಳನ್ನ ಬಳಸಿ ಮನೆಯೊಳಗೆ ಸಿಲುಕಿದವರನ್ನ ರಕ್ಷಿಸಿದ್ದಾರೆ. ಉಳ್ಳಾಲಬೈಲಿನಲ್ಲಿ ಕಾಲುವೆಗಳನ್ನು ಒತ್ತುವರಿ ಮಾಡಿದ್ದರಿಂದ ನೀರು ಹರಿಯಲಾಗದೆ ಕೃತಕ ನೆರೆ ಉಂಟಾಗಿದೆ. ತಾಲೂಕು ವ್ಯಾಪ್ತಿಯ ಕುಂಪಲ, ಪಿಲಾರು, ಕಲ್ಲಾಪು, ಧರ್ಮನಗರ, ತಲಪಾಡಿ, ಕಲ್ಕಟ್ಟ ಪ್ರದೇಶಗಳಲ್ಲು ಕೃತಕ ನೆರೆ ಬಂದಿದ್ದು ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ನಿರಂತರ ಮಳೆ ಮತ್ತು ಕೃತಕ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಬಹಳಷ್ಟು ಕುಟುಂಬಗಳು ರಾತ್ರಿ ವೇಳೆ ಬೇರೆಡೆ ಸ್ಥಳಾಂತರಗೊಂಡಿದೆ.
ಕಲ್ಲಾಪುವಿನಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ತಲಪಾಡಿಯಲ್ಲಿ ಒಂದು ಮನೆಗೆ ನೀರು ನುಗ್ಗಿ ಹಾನಿಯಾಗಿದೆ. ಅಲ್ಲಿನ ಕುಟುಂಬವನ್ನು ರಾತ್ರಿ ವೇಳೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್, ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ, ಗ್ರಾಮ ಕರಣಿಕ ಸುರೇಶ್ ಮತ್ತಿತರರು ರಾತ್ರಿ ವೇಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Continuous heavy rains through the night have caused severe flooding across Ullal taluk. In Kanakare, Belma village, a compound wall collapsed on a house, tragically killing a young girl. In Kodi near Montepadavu, a landslide struck a house, leading to the death of a woman. Rescue operations are ongoing for others who may be trapped.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm