ಬ್ರೇಕಿಂಗ್ ನ್ಯೂಸ್
31-05-25 11:14 pm Mangalore Correspondent ಕರಾವಳಿ
ಮಂಗಳೂರು, ಮೇ 31 : ಕೋಮು ವೈಷಮ್ಯದ ಕೊಲೆಗೆ ಪ್ರಚೋದನಕಾರಿ ಭಾಷಣವೇ ಕಾರಣ. ಅಂಥ ಭಾಷಣ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮುಸ್ಲಿಂ ಮುಖಂಡರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಆಗಮಿಸಿದ್ದ ಸಚಿವರನ್ನು ಭೇಟಿಯಾಗಿ ನಾಯಕರು ಮನವಿ ಸಲ್ಲಿಸಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ ಮುಖಂಡ ಜಿಎ ಬಾವಾ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಶಾಂತಿ ಬೇಕು. ನಮ್ಮ ಮಕ್ಕಳು ಇಂಥ ಸ್ಥಿತಿಯಲ್ಲಿ ಬದುಕುವಂತೆ ಆಗಬಾರದು. ಯಾವುದೇ ಧರ್ಮ, ಜಾತಿ ಇರಲಿ, ಹಿಂದು- ಮುಸ್ಲಿಂ ಯಾರಿದ್ದರೂ ದ್ವೇಷದ ಭಾಷಣ ಮಾಡಿದರೆ ಕಠಿಣ ಕ್ರಮ ಜರುಗಿಸಿ. ಈ ರೀತಿಯ ಕೊಲೆ ಮುಂದೆ ಯಾವತ್ತೂ ಆಗದಂತೆ ಕಠಿಣ ಕ್ರಮ ಆಗಬೇಕಾಗಿದೆ. ನಮಗೆ ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸ ಇದೆ, ಹಾಗಾಗಿ ಮನವಿ ಕೊಟ್ಟಿದ್ದೇವೆ. ಪೊಲೀಸ್ ಇಲಾಖೆಯಲ್ಲೂ ಅಮೂಲಾಗ್ರ ಬದಲಾವಣೆ ಆಗಬೇಕೆಂದು ಬೇಡಿಕೆ ಇಟ್ಟಿದ್ದೇವೆ ಎಂದರು.
ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್ ಮಾತನಾಡಿ, ಕೋಮು ದ್ವೇಷದ ಕೊಲೆಗಳು ಯಾವತ್ತೂ ಆಗಬಾರದು. ಮುಸ್ಲಿಮರು ಶಾಂತಿ ಪ್ರಿಯರು. ಯಾರನ್ನೂ ಹಿಂಸಿಸುವ ಪ್ರವೃತ್ತಿ ನಮ್ಮಲ್ಲಿ ಇಲ್ಲ. ಆದರೆ ಇಂಥ ಸ್ಥಿತಿ ಬರುವುದಕ್ಕೆ ಪೊಲೀಸರ ವೈಫಲ್ಯವೇ ಕಾರಣ. ಕೆಲವು ಪೊಲೀಸ್ ಠಾಣೆಗಳಲ್ಲಿ 10-15 ವರ್ಷಗಳಿಂದ ಠಿಕಾಣಿ ಹೂಡಿದವರು ಇದ್ದಾರೆ. ಅವರನ್ನು ಬೇರೆ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು. ಹೆಡ್ ಕಾನ್ಸ್ ಟೇಬಲ್ ಆಗಿದ್ದವರು ರಾಜಕೀಯ ಬಲದಿಂದ ಎಸಿಪಿ ಅಧಿಕಾರಿಗೆ ಬೆದರಿಕೆ ಹಾಕುವ ಸ್ಥಿತಿಯಿದೆ. ಇದಕ್ಕೆಲ್ಲ ಕೊನೆ ಹಾಕಬೇಕು, ಹೊಸ ಅಧಿಕಾರಿ ಬಂದಿದ್ದಾರೆ. ನಮಗೆಲ್ಲ ವಿಶ್ವಾಸ ಇದೆ ಎಂದು ಹೇಳಿದರು.
ಕಾನೂನು ಬಿಗಿ ಮಾಡುತ್ತೇವೆ ; ಸಚಿವ
ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರು, ರಾಜಕೀಯ ಮುಖಂಡರು ಕೂಡ ಬಾಯಿಗೆ ಬಂದಂತೆ ಮಾತನಾಡಿ ಪ್ರಚೋದನೆ ಮಾಡುತ್ತಾರೆ. ಪೊಲೀಸರು ಎಫ್ಐಆರ್ ಮಾಡಿದ್ರೂ ಬೇಲ್ ಮೇಲೆ ಬರುತ್ತಾರೆ. ಇಂಥದ್ದಕ್ಕೆ ಕಡಿವಾಣ ಹಾಕಬೇಕಾಗಿದೆ. ಕಾನೂನು ಬಿಗಿಗೊಳಿಸಲು ತಜ್ಞರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡುತ್ತೇನೆ. ಈಗ ಇರುವ ಕಾನೂನಿನಲ್ಲಿ ಸ್ಪಷ್ಟತೆ ಇಲ್ಲದ್ದರಿಂದ ಈ ರೀತಿಯಾಗಿದೆ. ಮೂರು ಜಿಲ್ಲೆಗೆ ಕಾರ್ಯಪಡೆ ರಚನೆ ಮಾಡಲಾಗಿದೆ. ಇಲಾಖೆಯಲ್ಲಿ ಒಳ್ಳೆಯ ಹೆಸರಿರುವ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಫುಲ್ ಪವರ್ ನೀಡಿದ್ದೇವೆ ಎಂದು ಹೇಳಿದ್ದಾರೆ.
Dakshina Kannada district in-charge Dinesh Gundu Rao on Saturday addressed a press conference at the Mangaluru police commissioner’s office, emphasizing the need for strict law enforcement and lasting peace in the region, which has witnessed recent communal disturbances.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am