ಬ್ರೇಕಿಂಗ್ ನ್ಯೂಸ್
21-12-20 05:57 pm Mangalore Correspondent ಕರಾವಳಿ
ಮಂಗಳೂರು, ಡಿ.21: ಈಗೆಲ್ಲಾ ಪ್ರೀ ವೆಡ್ಡಿಂಗ್ ಫೋಟೋಶೂಟ್ ಅನ್ನೋದು ವಿಚಿತ್ರ ಹುಚ್ಚು ಸೃಷ್ಟಿಸಿದೆ. ವಧು ವರರನ್ನು ಮಾಡೆಲ್ ಗಳ ರೀತಿ ಬಿಂಬಿಸಲು ಹೋಗಿ ಏನೋ ಗಿಮಿಕ್ ಮಾಡುವ ಸಾಹಸ ಮಾಡಿ, ವಿವಾದಕ್ಕೆ ಕಾರಣವಾಗುತ್ತಿದ್ದಾರೆ. ಕೆಲವು ಸನ್ನಿವೇಶಗಳಲ್ಲಿ ಆಕ್ರೋಶಕ್ಕೂ ಗುರಿಯಾಗುತ್ತಿದ್ದಾರೆ. ಕೇರಳದಲ್ಲಿ ನಡೆದಿರುವ ಹೊಸ ರೀತಿಯ ಫೋಟೊ ಶೂಟ್ ಒಂದು ಮತ್ತೆ ವಿವಾದಕ್ಕೆ ಸೃಷ್ಟಿಸಿದೆ.
ಯುವಜೋಡಿ ಋಷಿಗಳ ರೀತಿ ವೇಷ ತೊಟ್ಟು ಹಸಿಬಿಸಿ ದೃಶ್ಯಗಳನ್ನು ಸೆರೆ ಹಿಡಿಯಲಾಗಿದ್ದು ಫೋಟೊಗಳು ಭಾರೀ ವೈರಲ್ ಆಗಿದೆ. ತಿಂಗಳ ಹಿಂದೆ ಕೇರಳದಲ್ಲಿ ಇದೇ ರೀತಿ ಕಾಫಿ ತೋಟದಲ್ಲಿ ನಡೆಸಿದ್ದ ಪೋಸ್ಟ್ ವೆಡ್ಡಿಂಗ್ ಹಸಿಬಿಸಿ ಫೋಟೋ ಶೂಟ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಕೇರಳದ ಮತ್ತೊಂದು ಜೋಡಿ ಪ್ರೀವೆಡ್ಡಿಂಗ್ ಫೋಟೋಶೂಟ್ ನೆಪದಲ್ಲಿ ಹಿಂದುಗಳ ಋಷಿ ಪರಂಪರೆಯನ್ನು ಅಣಕಿಸುವ ರೀತಿ ಕಾನ್ಸೆಪ್ಟ್ ಇಟ್ಟುಕೊಂಡು ಕಾಡಿನ ಮಧ್ಯೆ ಚಿತ್ರ ವಿಚಿತ್ರ ಭಂಗಿಗಳಿಂದ ಫೋಟೊ ತೆಗೆಸಿಕೊಂಡಿದ್ದು ಹಿಂದು ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ವಿಶ್ವಾಮಿತ್ರ ಮೇನಕೆಯರೋ ಎನ್ನುವಂತೆ ಯುವಕ - ಯುವತಿ ಋಷಿಗಳ ಬಟ್ಟೆ ಧರಿಸಿಕೊಂಡು ತೀರಾ ಕೆಳಮಟ್ಟದ ಹಸಿಬಿಸಿಯ ದೃಶ್ಯಗಳಿಗೆ ಪೋಸು ನೀಡಿದೆ. ಮಲಯಾಳಂ ಭಾಷೆಯ ಹಳೆಯ ವಯಸ್ಕರ ಚಿತ್ರಗಳನ್ನು ನೆನಪಿಸುವಂತಿದೆ ಅಲ್ಲಿನ ದೃಶ್ಯಗಳು. ಈ ಫೊಟೋಗಳು ಇನ್ಸ್ಟಾ ಗ್ರಾಮ್ ಮತ್ತು ಫೇಸ್ಬುಕ್ ನಲ್ಲಿ ಭಾರೀ ವೈರಲ್ ಆಗಿದ್ದು ಜನ ಕೆಟ್ಟದಾಗಿ ಕಮೆಂಟ್ ಮಾಡಿದ್ದಲ್ಲದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೋಟೋಶೂಟ್ ಹೆಸರಿನಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ತ್ರಿಶ್ಯೂರಿನ ಋಗ್ವೇದ ಬ್ಯೂಟಿಕ್ ಎನ್ನುವ ಫೋಟೊ ಸ್ಟುಡಿಯೋ ಸಹಯೋಗದಲ್ಲಿ ನಡೆದ ಈ ಫೋಟೋ ಶೂಟ್ ಅನ್ನು 1988 ರಲ್ಲಿ ಮಲಯಾಳಂನಲ್ಲಿ ಬಂದಿದ್ದ ವೈಶಾಲಿ ಚಿತ್ರದಲ್ಲಿನ ದೃಶ್ಯಗಳನ್ನು ಮಾದರಿಯಾಗಿಟ್ಟು ಚಿತ್ರ ಸೆರೆಹಿಡಿಯಲಾಗಿದೆ ಎನ್ನಲಾಗಿದೆ. ತೃಶ್ಶೂರಿನ ಅಭಿಜಿತ್ ಹಾಗೂ ಮಾಯಾ ಎಂಬ ಯುವಜೋಡಿ ಪ್ರಿ ವೆಡ್ಡಿಂಗ್ ಶೂಟ್ ಗಾಗಿ ವಿಭಿನ್ನ ಪೋಸು ನೀಡಿ ಈಗ ಇಡೀ ಕೇರಳದಲ್ಲಿ ವೈರಲ್ ಆಗಿದ್ದಾರೆ.
Kerala Couple Photshoot in Rushis Costume lands in controversy after the pictures became viral on Social Media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am