ಬ್ರೇಕಿಂಗ್ ನ್ಯೂಸ್
01-06-25 12:32 pm Mangalore Correspondent ಕರಾವಳಿ
ಮಂಗಳೂರು, ಜೂ 1: ಕೋಮು ವೈಷಮ್ಯದ ಕೊಲೆಗೆ ಪ್ರಚೋದನಕಾರಿ ಭಾಷಣವೇ ಕಾರಣ. ಅಂಥ ಭಾಷಣ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮುಸ್ಲಿಂ ಮುಖಂಡರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಆಗಮಿಸಿದ್ದ ಸಚಿವರನ್ನು ಭೇಟಿಯಾಗಿ ನಾಯಕರು ಮನವಿ ಸಲ್ಲಿಸಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ ಮುಖಂಡ ಜಿಎ ಬಾವಾ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಶಾಂತಿ ಬೇಕು. ನಮ್ಮ ಮಕ್ಕಳು ಇಂಥ ಸ್ಥಿತಿಯಲ್ಲಿ ಬದುಕುವಂತೆ ಆಗಬಾರದು. ಯಾವುದೇ ಧರ್ಮ, ಜಾತಿ ಇರಲಿ, ಹಿಂದು- ಮುಸ್ಲಿಂ ಯಾರಿದ್ದರೂ ದ್ವೇಷದ ಭಾಷಣ ಮಾಡಿದರೆ ಕಠಿಣ ಕ್ರಮ ಜರುಗಿಸಿ. ಈ ರೀತಿಯ ಕೊಲೆ ಮುಂದೆ ಯಾವತ್ತೂ ಆಗದಂತೆ ಕಠಿಣ ಕ್ರಮ ಆಗಬೇಕಾಗಿದೆ. ನಮಗೆ ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸ ಇದೆ, ಹಾಗಾಗಿ ಮನವಿ ಕೊಟ್ಟಿದ್ದೇವೆ. ಪೊಲೀಸ್ ಇಲಾಖೆಯಲ್ಲೂ ಅಮೂಲಾಗ್ರ ಬದಲಾವಣೆ ಆಗಬೇಕೆಂದು ಬೇಡಿಕೆ ಇಟ್ಟಿದ್ದೇವೆ ಎಂದರು.
ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್ ಮಾತನಾಡಿ, ಕೋಮು ದ್ವೇಷದ ಕೊಲೆಗಳು ಯಾವತ್ತೂ ಆಗಬಾರದು. ಮುಸ್ಲಿಮರು ಶಾಂತಿ ಪ್ರಿಯರು. ಯಾರನ್ನೂ ಹಿಂಸಿಸುವ ಪ್ರವೃತ್ತಿ ನಮ್ಮಲ್ಲಿ ಇಲ್ಲ. ಆದರೆ ಇಂಥ ಸ್ಥಿತಿ ಬರುವುದಕ್ಕೆ ಪೊಲೀಸರ ವೈಫಲ್ಯವೇ ಕಾರಣ. ಕೆಲವು ಪೊಲೀಸ್ ಠಾಣೆಗಳಲ್ಲಿ 10-15 ವರ್ಷಗಳಿಂದ ಠಿಕಾಣಿ ಹೂಡಿದವರು ಇದ್ದಾರೆ. ಅವರನ್ನು ಬೇರೆ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು. ಹೆಡ್ ಕಾನ್ಸ್ ಟೇಬಲ್ ಆಗಿದ್ದವರು ರಾಜಕೀಯ ಬಲದಿಂದ ಎಸಿಪಿ ಅಧಿಕಾರಿಗೆ ಬೆದರಿಕೆ ಹಾಕುವ ಸ್ಥಿತಿಯಿದೆ. ಇದಕ್ಕೆಲ್ಲ ಕೊನೆ ಹಾಕಬೇಕು, ಹೊಸ ಅಧಿಕಾರಿ ಬಂದಿದ್ದಾರೆ. ನಮಗೆಲ್ಲ ವಿಶ್ವಾಸ ಇದೆ ಎಂದು ಹೇಳಿದರು.
ಕಾನೂನು ಬಿಗಿ ಮಾಡುತ್ತೇವೆ ; ಸಚಿವ
ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರು, ರಾಜಕೀಯ ಮುಖಂಡರು ಕೂಡ ಬಾಯಿಗೆ ಬಂದಂತೆ ಮಾತನಾಡಿ ಪ್ರಚೋದನೆ ಮಾಡುತ್ತಾರೆ. ಪೊಲೀಸರು ಎಫ್ಐಆರ್ ಮಾಡಿದ್ರೂ ಬೇಲ್ ಮೇಲೆ ಬರುತ್ತಾರೆ. ಇಂಥದ್ದಕ್ಕೆ ಕಡಿವಾಣ ಹಾಕಬೇಕಾಗಿದೆ. ಕಾನೂನು ಬಿಗಿಗೊಳಿಸಲು ತಜ್ಞರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡುತ್ತೇನೆ. ಈಗ ಇರುವ ಕಾನೂನಿನಲ್ಲಿ ಸ್ಪಷ್ಟತೆ ಇಲ್ಲದ್ದರಿಂದ ಈ ರೀತಿಯಾಗಿದೆ. ಮೂರು ಜಿಲ್ಲೆಗೆ ಕಾರ್ಯಪಡೆ ರಚನೆ ಮಾಡಲಾಗಿದೆ. ಇಲಾಖೆಯಲ್ಲಿ ಒಳ್ಳೆಯ ಹೆಸರಿರುವ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಫುಲ್ ಪವರ್ ನೀಡಿದ್ದೇವೆ ಎಂದು ಹೇಳಿದ್ದಾರೆ.
Mangalore Amid rising tensions following a recent communal murder, Muslim leaders met Karnataka Minister Dinesh Gundu Rao, urging strict action against those delivering provocative speeches. They also demanded major reforms in the police department. Leaders expressed concern over long-standing police postings and political interference, calling for transfers and stricter accountability. Senior leaders like G.A. Bava and Ibrahim Kodijal emphasized the need for peace and justice, placing trust in CM Siddaramaiah.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm