ಬ್ರೇಕಿಂಗ್ ನ್ಯೂಸ್
02-06-25 10:59 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 2 : ಕರಾವಳಿಯಲ್ಲೇ ಅತಿ ದೊಡ್ಡದು ಎನ್ನಲಾದ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ಅನ್ನು ಕಡೆಗೂ ವಾಹನ ಸಂಚಾರಕ್ಕೆ ಮುಕ್ತಗೊಳಿಸಿರುವುದು ವಾಹನ ಸವಾರರಿಗೆ ಸಂತಸ ತರಿಸಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಇತ್ತೀಚೆಗೆ ಸೂಚನೆ ನೀಡಿದ್ದರು. ಅದರಂತೆ ಜೂನ್ 2ರಂದು ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ತೆರೆದುಕೊಂಡಿದೆ.
ಸೋಮವಾರ ಬೆಳಗ್ಗೆ ಫ್ಲೈ ಓವರ್ ನ ಆರಂಭಿಕ ಭಾಗವಾದ ಪೂರ್ಲಪ್ಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ನೇತೃತ್ವದಲ್ಲಿ ಪ್ರೈಓವರ್ ಸಂಚಾರವನ್ನು ಸ್ವಾಗತಿಸುವ ಮೂಲಕ ವಾಹನ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.
ಕಲ್ಲಡ್ಕದ ಪೂರ್ಲಪ್ಪಾಡಿಯಿಂದ ಕೃಷ್ಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದದ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ಗಳ ಫ್ಲೈಓವರ್ ಇದಾಗಿದೆ. ಜೂನ್ ಕೊನೆಯೊಳಗೆ ಫ್ಲೈಓವರ್ಗೆ ಸಂಬಂಧಪಟ್ಟ ಎಲ್ಲ ಕಾಮಗಾರಿಗಳು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.
Mangalore Kalladka Flyover Finally Opens for Traffic; Welcomed by Local Residents.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm