ಬ್ರೇಕಿಂಗ್ ನ್ಯೂಸ್
21-12-20 07:38 pm Mangaluru Correspondent ಕರಾವಳಿ
ಮೂಡುಬಿದ್ರೆ, ಡಿ.21: ಇಲ್ಲಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಬಾರಿಯೂ ಜಾತಿ ತಾರತಮ್ಯ ನಡೆಸಿ, ಪ್ರಸಾದ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಉತ್ಸವ ನಡೆದಿದ್ದು ಬಳಿಕ ಭಕ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವೇಳೆ, ಮೊದಲಿಗೆ ಬ್ರಾಹ್ಮಣರಿಗೆ ಮಾತ್ರ ಊಟ ನೀಡಲಾಗಿದ್ದು, ಉಳಿದವರನ್ನು ಒಳಗೆ ಬಾರದಂತೆ ತಡೆಯಲಾಗಿತ್ತು ಅನ್ನುವ ಬಗ್ಗೆ ಆರೋಪ ಕೇಳಿಬಂದಿದೆ. ದೇಗುಲದ ಅರ್ಚಕರು ಬ್ರಾಹ್ಮಣರನ್ನು ಮಾತ್ರ ಒಳಗೆ ಬಿಟ್ಟುಕೊಂಡಿದ್ದು, ಉಳಿದವರಿಗೆ ಆಬಳಿಕ ಭೋಜನ ನೀಡಲಾಗುವುದು ಎಂದು ತಾರತಮ್ಯ ಮಾಡಿದ್ದಾರೆಂದು ಆರೋಪಿಸಲಾಗಿದೆ.
ದೇವಸ್ಥಾನದ ಗೋಪುರದಲ್ಲಿ ಭೋಜನ ನಡೆದಿದ್ದು ಈ ವೇಳೆ ಇತರೇ ಜಾತಿಗಳವರು ಕೂಡ ಅದೇ ಸಾಲಿನಲ್ಲಿ ಊಟಕ್ಕೆ ಕುಳಿತುಕೊಂಡಿದ್ದಾಗ ಬ್ರಾಹ್ಮಣರು ಮಾತ್ರ ಎಂದು ಅರ್ಚಕರು ಸೂಚನೆ ನೀಡಿದ್ದಾಗಿ ಅಲ್ಲಿನ ಭಕ್ತರು ಆರೋಪಿಸಿದ್ದಾರೆ. ಕಳೆದ ವರ್ಷ ಪೊಲೀಸರು ಊಟಕ್ಕೆ ಕುಳಿತುಕೊಂಡಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಸಿಬಂದಿಯೊಬ್ಬರು ದೇವಸ್ಥಾನದ ಒಳಗೆ ಊಟಕ್ಕೆ ಕುಳಿತುಕೊಂಡಿದ್ದನ್ನು ನೋಡಿ ಎಬ್ಬಿಸಿ ಹೊರಕ್ಕೆ ಕಳಿಸಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರ ವಿವಾದಕ್ಕೂ ಕಾರಣವಾಗಿತ್ತಲ್ಲದೆ, ಪೊಲೀಸರ ಮಧ್ಯಪ್ರವೇಶದಿಂದ ದೇವಸ್ಥಾನದ ಆಡಳಿತಕ್ಕೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
Moodbidri Kadandale temple is now in controversy after it has calculated the Panchyath Elections 2020 upon Catse basis.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am