ಬ್ರೇಕಿಂಗ್ ನ್ಯೂಸ್

Mangalore Police, Social Media, Arrest: ಜಾಲತಾಣಗಳಲ್ಲಿ ಕೋಮು ಪ್ರಚೋದಕ ಸಂದೇಶ ; ಬಿಸಿ ಮುಟ್ಟಿಸಿದ ವಿಶೇಷ ಪೊಲೀಸ್ ತಂಡ, ಮಂಗಳೂರಿನಲ್ಲಿ ಆರು ಮಂದಿ ಸೆರೆ 

04-06-25 09:34 pm       Mangalore Correspondent   ಕರಾವಳಿ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹಾಕಿ, ಸಮಾಜದ ನೆಮ್ಮದಿಗೆ ಭಂಗವನ್ನುಂಟು ಮಾಡಲು ಪ್ರಯತ್ನಿಸಿದ ಆರೋಪಿಗಳ ಪತ್ತೆಗಾಗಿ ಮಂಗಳೂರು ನಗರ  ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದು, ಪ್ರಕರಣಗಳನ್ನು ದಾಖಲಿಸಿ ಆರೋಪಿತರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ.

ಮಂಗಳೂರು, ಜೂನ್ 4 : ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹಾಕಿ, ಸಮಾಜದ ನೆಮ್ಮದಿಗೆ ಭಂಗವನ್ನುಂಟು ಮಾಡಲು ಪ್ರಯತ್ನಿಸಿದ ಆರೋಪಿಗಳ ಪತ್ತೆಗಾಗಿ ಮಂಗಳೂರು ನಗರ  ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದು, ಪ್ರಕರಣಗಳನ್ನು ದಾಖಲಿಸಿ ಆರೋಪಿತರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ.

ಸೌದಿ ಅರೇಬಿಯಾದಿಂದ team_jokerzzz._ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದ ಆರೋಪಿ ಹೆಜಮಾಡಿ ನಿವಾಸಿ ಮೊಹಮ್ಮದ್ ಅಸ್ಲಾಂ ಎಂಬಾತನ ವಿರುದ್ದ LOC ಹೊರಡಿಸಿ, ದಸ್ತಗಿರಿ ಮಾಡಲಾಗಿದೆ. 

ಮತ್ತೊಂದು ಪ್ರಕರಣದಲ್ಲಿ ಮುಸ್ಲಿಂ ಹೆಸರಿನ ಸಿಮ್ ಕಾರ್ಡ್ ಬಳಸಿಕೊಂಡು team_karna_surathkal ಎಂಬ Instagram ಪೇಜ್ ತೆರೆದಿದ್ದು, ಸದ್ರಿ ಪೇಜ್ ನಲ್ಲಿ ಚೆನ್ನಪ್ಪ @ ಮುತ್ತು  ಸುರತ್ಕಲ್ ಎಂಬಾತನು ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ ಆರೋಪದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ರಿ ಪ್ರಕರಣದಲ್ಲಿ ಸುರತ್ಕಲ್ ಇಡ್ಯಾ ಗ್ರಾಮದ ಚೇತನ್ ಬಂಗೇರ(20) ಮತ್ತು ಹಳೆಯಂಗಡಿ ಚೇಳ್ಯಾರು ನಿವಾಸಿ ನಿತಿನ್ ಅಡಪ(23) ಎಂಬವರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿದ್ದಾರೆ. 

ಸೌದಿ ಅರೇಬಿಯಾದಿಂದ Beary_royal_nawab ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ, ಆಧಾರದಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ. 353 (2) ಭಾರತೀಯ ನ್ಯಾಯ ಸಂಹಿತೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 42/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಫರ‌ಂಗಿಪೇಟೆಯ ರಿಯಾಝ್ ಇ್ರಬಾಹಿಂ ಎಂಬಾತನ ವಿರುದ್ದ LOC ಹೊರಡಿಸಿ, ದಸ್ತಗಿರಿ ಮಾಡಲಾಗಿದೆ.  

Troll_bengare_ro_makka ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಕುಳೂರು ಕಸಬಾ ಬೆಂಗ್ರೆಯ ಜಮಾಲ್ ಝಾಕೀರ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.   

Facebook ಖಾತೆಯ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 53/2025 ಕಲಂ.196(1),(A),353(2),79,56 ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ, ಸದ್ರಿ ಗುರು ಪ್ರಸಾದ್ ಹಳೆಯಂಗಡಿ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ಸದ್ರಿ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ವಿಶೇಷ ತಂಡಗಳಿಂದ ಮುಂದುವರೆಸಲಾಗಿದೆ.

Communal Provocative Posts on Social Media, Special Police Teams Nab Six in Mangalore  Crackdown.