ಬ್ರೇಕಿಂಗ್ ನ್ಯೂಸ್
04-06-25 10:43 pm Mangalore Correspondent ಕರಾವಳಿ
ಉಳ್ಳಾಲ, ಜೂ.4 : ಮೊನ್ನೆಯಷ್ಟೇ ಉಳ್ಳಾಲ ತಾಲೂಕಿನಾದ್ಯಂತ ಗರಿಷ್ಠ ಪ್ರಮಾಣದಲ್ಲಿ ಸುರಿದಿದ್ದ ಮಳೆಯಿಂದಾಗಿ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಅಂಬಿಕಾ ರೋಡ್ ಮೂರನೇ ಅಡ್ಡ ರಸ್ತೆಯ ರಾಜಕಾಲುವೆ ಉಕ್ಕಿ ಹರಿದ ಪರಿಣಾಮ ಸ್ಥಳೀಯ ಮನೆಗಳು ಪ್ರವಾಹದಿಂದ ಮುಳುಗಡೆಯಾಗಿದ್ದವು. ಬುಧವಾರ ಸಂಜೆ ರಾಜಕಾಲುವೆಯ ಕಿರು ಸೇತುವೆಯ ಅಡಿಭಾಗ ಕುಸಿದಿದ್ದು ಸೇತುವೆ ಕುಸಿದು ಬೀಳಲು ಕ್ಷಣಗಣನೆ ಆರಂಭವಾಗಿದೆ. ಸುರಕ್ಷತೆ ದೃಷ್ಟಿಯಿಂದ ಸೇತುವೆ ಸಂಚಾರವನ್ನ ಸೋಮೇಶ್ವರ ಪುರಸಭಾ ಅಧಿಕಾರಿಗಳು ನಿಷೇಧಗೊಳಿಸಿದ್ದು ಸ್ಥಳೀಯ ಅಂಬಿಕಾರೋಡ್ ಲೇ ಔಟ್ ನ ಸುಮಾರು ಎಪ್ಪತ್ತು ಮನೆಗಳ ಸಂಪರ್ಕ ಕಡಿತವಾಗಿ ನಿವಾಸಿಗಳು ಮನೆ ತಲುಪಲು ಬವಣೆ ಪಡುವಂತಾಗಿದೆ.
ಅಂಬಿಕಾರೋಡ್ ಮೂರನೇ ಅಡ್ಡ ರಸ್ತೆಯ ರಾಜ ಕಾಲುವೆಯ ಕಿರು ಸೇತುವೆ ಹಳೆಯದಾಗಿದ್ದು ಕಳೆದ ನಾಲ್ಕು ವರ್ಷದ ಹಿಂದಷ್ಟೆ ಸೋಮೇಶ್ವರ ಪುರಸಭೆ ಆಡಳಿತವು ಸೇತುವೆಯ ದುರಸ್ತಿ ಕಾರ್ಯ ನಡೆಸಿತ್ತು. ಸೇತುವೆಯ ಕಳಪೆ ದುರಸ್ತಿಯಿಂದಾಗಿ ಕಳೆದ ಗುರುವಾರ ಸುರಿದ ಭಾರೀ ಮಳೆಗೆ ಕಾಲುವೆಯಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಅಡಿಭಾಗವು ಕುಸಿತಗೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನು ಕೆಲವರು ಸ್ಥಳೀಯ ಅಂಬಿಕಾರೋಡ್ ಲೇ ಔಟ್ ನಲ್ಲಿ ಮನೆ ನಿರ್ಮಾಣ ಕಾಮಗಾರಿಗೆ ರಾಜಕಾಲುವೆಯ ಕಿರು ಸೇತುವೆಯ ಮೇಲೆ ದಿನ ನಿತ್ಯಲೂ ಕಲ್ಲು , ಮರಳು ಇತರ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಘನ ವಾಹನಗಳು ಚಲಿಸುತ್ತಿದ್ದ ಪರಿಣಾಮ ಹಳೆ ಸೇತುವೆ ಶಿಥಿಲಗೊಂಡು ಕುಸಿದಿರೋದಾಗಿ ಆರೋಪಿಸಿದ್ದಾರೆ.





ಮತ್ತೆ ಧಾರಾಕಾರವಾಗಿ ಮಳೆ ಸುರಿದರೆ ಸೇತುವೆ ಸಂಪೂರ್ಣ ಕುಸಿದು ಬಿದ್ದು ರಾಜ ಕಾಲುವೆಯಲ್ಲಿ ಹರಿಯುವ ಭಾರೀ ಪ್ರಮಾಣದ ನೀರು ಸ್ಥಳೀಯ ಅನೇಕ ಮನೆಗಳಿಗೆ ನುಗ್ಗಿ ಮತ್ತೆ ಅವಾಂತರ ಸೃಷ್ಟಿಸುವ ಭೀತಿ ಎದುರಾಗಿದೆ. ಸ್ಥಳಕ್ಕೆ ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ ಮತ್ತು ಪ್ರಬಂಧಕರಾದ ಕೃಷ್ಣ, ಸ್ಥಳೀಯ ಪುರಸಭೆ ಸದಸ್ಯರಾದ ಪರ್ವೀನ್ ಅವರು ಭೇಟಿ ನೀಡಿದ್ದು ಪರಿಸ್ಥಿತಿ ಅವಲೋಕಿಸಿದ್ದಾರೆ. ಸದ್ಯಕ್ಕೆ ಕುಸಿದಿರುವ ಸೇತುವೆ ಬೀಳದಂತೆ ತಡೆಯುವುದೇ ಅಧಿಕಾರಿಗಳಿಗೆ ಸವಾಲಾಗಿದೆ.
ಅತ್ತ ಕುಂಪಲ ಮುಖ್ಯ ರಸ್ತೆಯಲ್ಲಿ ಪೈಪ್ ಲೈನ್ ಕಾಮಗಾರಿಯಿಂದ ಕೆಟ್ಟು ಹೋಗಿದ್ದು, ದುರಸ್ತಿ ಕಾಮಗಾರಿಗೆಂದು ಅಲ್ಲಿನ ರಸ್ತೆ ಸಂಚಾರ ನಿರ್ಬಂಧಿಸಲಾಗಿದೆ. ಕುಂಪಲ ಪ್ರದೇಶಕ್ಕೆ ತೆರಳುವವರೂ ಕೂಡ ಅಂಬಿಕಾ ರೋಡಿನ ಮೂರನೇ ಅಡ್ಡ ರಸ್ತೆಯನ್ನೇ ಪರ್ಯಾಯವಾಗಿ ನೆಚ್ಚಿಕೊಂಡಿದ್ದರು.
Mangalore Cracks in Someshwara Ambika Road Culvert Raise Flood Fears; Bridge Closed, 70 Homes Cut Off.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm