ಬ್ರೇಕಿಂಗ್ ನ್ಯೂಸ್
05-06-25 01:48 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಗೋವುಗಳ ಹತ್ಯೆಗೆ ನಿಷೇಧವಿದೆ. ಇದರ ಪ್ರಕಾರ, ಹತ್ಯೆ ಉದ್ದೇಶದಿಂದ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧ. ಅಕ್ರಮವಾಗಿ ಗೋವು ಹತ್ಯೆಗೈದ ಸ್ಥಳವನ್ನು ಸರಕಾರ ಮುಟ್ಟುಗೋಲು ಹಾಕುವುದಕ್ಕೂ ಕಾನೂನಿನಲ್ಲಿ ಅವಕಾಶವಿದೆ. ಬಕ್ರೀದ್ ಸಂದರ್ಭದಲ್ಲಿ ಮಂಗಳೂರು ಪೊಲೀಸರು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪ್ರಾಂತ ಗೋರಕ್ಷಾ ಪ್ರಮುಖ್ ಸುನಿಲ್ ಕೆ.ಆರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಗೋವುಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ನಾಕಾಬಂದಿ ಹಾಕಬೇಕು. ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ, ಸೂರ್ಯಾಸ್ತದಿಂದ ಸೂರ್ಯೋದಯ ವರೆಗೆ ಜಾನುವಾರು ಸಾಗಾಟ ನಿಷೇಧವಿದ್ದು ಈ ಬಗ್ಗೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕಾಗಿದೆ. ಕಾನೂನು ಉಲ್ಲಂಘಿಸಿ ಕಿವಿಯೋಲೆ ಇಲ್ಲದೆ ಶೇಖರಿಸಿಟ್ಟ, ಮೇಯಲು ಬಿಟ್ಟ ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಕಾಯಿದೆ 2020 ರಂತೆ ಪ್ರಕರಣ ದಾಖಲಿಸಬೇಕು. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕಸಾಯಿಖಾನೆ ಜಾಗದ ಬಗ್ಗೆ ನಿಗಾ ಇಡುವುದರ ಜೊತೆಗೆ ಪ್ರಾರ್ಥನಾ ಮಂದಿರಗಳಲ್ಲಿ ಜಾನುವಾರು ಶೇಖರಿಸಿ ಇಡದಂತೆ ನಿಗಾ ಇಡಬೇಕು.

ಕಾಯಿದೆಯಂತೆ ಜಾನುವಾರು ಹತ್ಯೆ ತಡೆಯುವ ಅಧಿಕಾರ ಸಾರ್ವಜನಿಕರಿಗೂ ಇದ್ದು ಅದನ್ನು ನಮ್ಮ ಸಂಘಟನೆಗಳು ಮಾಡುತ್ತವೆ. ಅಕ್ರಮ ಜಾನುವಾರು ಸಾಗಾಟ, ಶೇಖರಣೆ, ಹತ್ಯೆಗಳನ್ನು ಪೊಲೀಸರೇ ತಡೆಯುವ ಮೂಲಕ ಸಾರ್ವಜನಿಕರು ಅಧಿಕಾರ ಉಪಯೋಗಿಸಲು ಅವಕಾಶ ಸಿಗದಂತೆ ಎಚ್ಚರ ವಹಿಸಬೇಕು. ಈ ಎಲ್ಲಾ ಕಾರ್ಯಗಳಲ್ಲಿ ಕಾನೂನು ಪ್ರಕಾರ ತಮ್ಮೊಂದಿಗೆ ಪೂರ್ಣ ಮಟ್ಟದ ಸಹಕಾರ ನೀಡಲು ನಮ್ಮ ಸಂಘಟನೆ ಬದ್ಧವಿದೆ ಎಂದವರು ಹೇಳಿದರು.
ಮಂಗಳೂರಿನಲ್ಲಿ ನೂತನ ಪೊಲೀಸ್ ಕಮಿಷನರ್ ಅಧಿಕಾರ ವಸಿಕೊಂಡ ದಿನದಂದೇ ಕೇರಳದಿಂದ ಮಂಗಳೂರಿಗೆ (ತಲಪಾಡಿಯ ಬಳಿ) ಅಕ್ರಮವಾಗಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 24 ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪೊಲೀಸ್ ಕಮಿಷನರ್ ಅವರ ಈ ಕಾರ್ಯ ಶ್ಲಾಘನೀಯ. ಅದೇ ರೀತಿ ಮಂಗಳೂರು ವ್ಯಾಪ್ತಿಯಲ್ಲಿ ಎಲ್ಲಿಯೂ ಅಕ್ರಮ ಗೋಸಾಗಾಟ / ಗೋ ವಧೆಯಾಗದ ರೀತಿಯಲ್ಲಿ ಪೊಲೀಸರು ಕ್ರಮ ಕೈಗೊಳ್ಳುವ ಬಗ್ಗೆ ಸಂಪೂರ್ಣ ವಿಸ್ವಾಸವಿದೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಎಚ್ ಕೆ ಪುರುಷೋತ್ತಮ್, ಪ್ರದೀಪ್ ಸರಿಪಲ್ಲ, ಹರೀಶ್ ಶೇಟ್, ನವೀನ್ ಮೂಡುಶೆಡ್ಡೆ ಇದ್ದರು.
Mangalore VHP Urges Police to Prevent Illegal Cow Slaughter During Bakrid, Says Public Should Not Be Forced to Intervene
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm