ಬ್ರೇಕಿಂಗ್ ನ್ಯೂಸ್
05-06-25 03:05 pm HK News Desk ಕರಾವಳಿ
ಮಂಗಳೂರು, ಜೂನ್ 5: ಅರ್ ಸಿಬಿ ರಾಜ್ಯದ ಅಥವಾ ರಾಷ್ಟ್ರದ ಟೀಂ ಅಲ್ಲ. ಯಾವುದೋ ಒಂದು ಭಾವನೆ ಮತ್ತು ಹರ್ಷೋದ್ಘಾರದಲ್ಲಿ ವಿಜಯೋತ್ಸವ ಮಾಡುವಾಗ ಘಟನೆ ನಡೆದಿದೆ. ಏನಾಗಿದೆ ಏನಾಗಿಲ್ಲ ಅನ್ನೋದನ್ನ ಮುಖ್ಯಮಂತ್ರಿಗಳು ಹೇಳಬೇಕಾಗುತ್ತದೆ. ಐಪಿಎಲ್ ನಡೆಸೋರು ಕರೋಡ್ ಪತಿಗಳಲ್ಲ, ಸಾವಿರಾರು ಕೋಟಿ ಮಾಲೀಕರು. ಪ್ರಾಣ ಕಳೆದುಕೊಂಡವರಿಗೆ ಬಿಸಿಸಿಐ ಕಡೆಯಿಂದ ಒಂದೊಂದು ಕೋಟಿ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ ಸರ್ಕಾರಕ್ಕೆ ಒತ್ತಡ ಮಾಡ್ತೀನಿ, ರಾಜ್ಯ ಸರ್ಕಾರದಿಂದಲೇ ಬಿಸಿಸಿಐನಿಂದ ಒಂದು ಕೋಟಿ ಕೊಡಿಸಬೇಕು. ಎಲ್ಲರೂ ದುಃಖದಲ್ಲಿದ್ದಾರೆ, ಹಾಗಾಗಿ ಏನೂ ಹೇಳಲು ಹೋಗಲ್ಲ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ದುಃಖ ತಡೆದುಕೊಳ್ಳಲು ಭಗವಂತ ಶಕ್ತಿ ಕೊಡಲಿ. ಸರ್ಕಾರ ಏನ್ ಮಾಡಿದೆ, ಏನ್ ಮಾಡಿಲ್ಲ ಅಂತ ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳಲು ಆಗಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ಈ ಬಗ್ಗೆ ತಿಳುವಳಿಕೆ ಕೊಡಬೇಕು.
ಚಿನ್ನಸ್ವಾಮಿ ಕ್ರೀಡಾಂಗಣದ ಕೆಪಾಸಿಟಿ ಇರೋದು 35 ಸಾವಿರ ಜನ ಮಾತ್ರ. ಉಚಿತ ಅಂದ ತಕ್ಷಣ ಮೂರು ಲಕ್ಷ ಜನ ಅಲ್ಲಿಗೆ ಬಂದಿದಾರೆ. ಸಾವಿರಕ್ಕೆ ಒಂದು ಪೊಲೀಸ್ ನಮ್ಮಲ್ಲಿರೋದು, ಎಲ್ಲೋ ಒಂದು ಕಡೆ ಹೆಚ್ಚು ಕಮ್ಮಿ ಆಗಿದೆ. ಸಾವು ಹೊರಗಡೆ ಆದಾಗ ಒಳಗಡೆ ಸೆಲೆಬ್ರೇಷನ್ ನಿಲ್ಲಿಸಬೇಕಾಗಿತ್ತು. ಅಭಿಮಾನಿಗಳು ಬರೋವಾಗ ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಯೋಚನೆ ಮಾಡಬೇಕಾಗಿತ್ತು.
ಹೈಕೋರ್ಟ್ ಗೆ ಸುಮೊಟೋ ಕೇಸ್ ಮಾಡುವ ಎಲ್ಲಾ ಹಕ್ಕಿದೆ, ಅದೇ ಥರ ಎಲ್ಲದರಲ್ಲೂ ಮಾಡಿದರೆ ಒಳ್ಳೆಯದು. ಹನ್ನೊಂದು ಜನರ ಸಾವಿಗೆ ಯಾರು ಹೊಣೆ ಅಂತ ಸರ್ಕಾರ ಹೇಳಬೇಕು. ಇದು ಸರ್ಕಾರ ನಡೆಸಿರೋ ಕ್ರಿಕೆಟ್ ಅಲ್ಲ. ವಿಧಾನಸೌಧ ಬಳಿ ಯಾವುದೇ ಘಟನೆ ಆಗಿಲ್ಲ. ಇನ್ಜು ಸ್ಟೇಡಿಯಂನವರು ಕಾರ್ಯಕ್ರಮ ನಡೆಸುವಾಗ ಸ್ವಲ್ಪ ಯೋಚನೆ ಮಾಡಿ ನಡೆಸಬೇಕಿತ್ತು. ಅಮಾಯಕರು, ಯುವಕರು, ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಹೊಣೆ ಹೊರಬೇಕು ಎಂದು ಹೇಳಿದರು.
B K Hariprasad in Mangalore Demands Rs 1 Crore Compensation from BCCI for Each Victim of IPL Celebration Tragedy
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am