ಬ್ರೇಕಿಂಗ್ ನ್ಯೂಸ್
05-06-25 03:56 pm Mangaluru Staff ಕರಾವಳಿ
ಮಂಗಳೂರು, ಜೂನ್ 4: ಇಡೀ ರಾಜ್ಯದಲ್ಲಿ ಶಾಂತಿ ನೆಲೆಸಿರೋವಾಗ ಕರಾವಳಿಯಲ್ಲಿ ಯಾಕೆ ಹೀಗಾಗ್ತಿದೆ ಅನ್ನೋದನ್ನ ನೋಡಬೇಕಿದೆ. ಅಮಾಯಕರನ್ನ ಹೋಗಿ ಸಾಯಿಸೋಕೆ ಇದು ಉತ್ತರಪ್ರದೇಶ, ಮಣಿಪುರ ಅಲ್ಲ. ಮಂಗಳೂರಿಗೆ ಒಳ್ಳೆಯ ಹೆಸರಿದೆ, ಮಣಿಪುರ ಮಾಡಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷದ ಹತ್ಯೆ, ಕಾಂಗ್ರೆಸಿನಲ್ಲಿ ಮುಸ್ಲಿಂ ಮುಖಂಡರ ರಾಜೀನಾಮೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಸ್ಲಿಂ ಮುಖಂಡರು ರಾಜೀನಾಮೆ ವಾಪಸ್ ಪಡೆಯವಂತೆ ಮನವಿ ಮಾಡುತ್ತೇನೆ. ನಾನು ಯಾರೊಂದಿಗೂ ಸಭೆ ನಡೆಸಲು ಬಂದಿಲ್ಲ, ಪ್ರತೀ ಸಾರಿ ಬರುವಂತೆ ಯಥಾ ಪ್ರಕಾರ ಬಂದಿದ್ದೇನೆ. ಕೆಲವು ನಡೆಯಬಾರದ ಘಟನೆ ನಡೆದಿದೆ, ಯಾರೂ ದೃತಿಗೆಡೋದು ಬೇಡ ಅಂತ ಮಾತನಾಡಿಸಿಕೊಂಡು ಹೋಗಲು ಬಂದಿದ್ದೇನೆ ಎಂದರು.
ನಿಮ್ಮನ್ನು ಜಿಲ್ಲೆಯ ಉಸ್ತುವಾರಿ ಮಾಡ್ತಾರೆಯೇ, ನಿಮ್ಮನ್ನು ಸಿಎಂ ಭೇಟಿಯಾದ ಉದ್ದೇಶವೇನು ಎಂಬ ಪ್ರಶ್ನೆಗೆ, ಉಸ್ತುವಾರಿ ಮಾಡ್ತಾರೆ ಅನ್ನೋ ಊಹಾಪೋಹಗಳನ್ನ ಬಿಟ್ಟು ಬಿಡಿ. ಮುಖ್ಯಮಂತ್ರಿಗಳು ಮತ್ರು ನನ್ನ ನಡುವಿನದ್ದು ಸೌಜನ್ಯದ ಭೇಟಿ, ಮಂಗಳೂರನ್ನ ಮಣಿಪುರ ಮಾಡಬೇಡಿ ಅಂತ ಹೇಳೋದಷ್ಟಕ್ಕೆ ಸೀಮಿತ ಆಗಿತ್ತು. ಕೊಲೆ, ಕೋಮು ದ್ವೇಷದ ಬಗ್ಗೆ ಕ್ರಮ ತಗೊಳ್ಳಿ ಅಂದಾಗ ಅವರೇ ಸ್ವಲ್ಪ ಹದಗೆಟ್ಟಿದೆ ಸರಿ ಮಾಡ್ತೀವಿ ಅಂದರು. ನೀವು ಹೋಗಿ ಕಾಂಗ್ರೆಸ್ ಕಾರ್ಯಕರ್ತರ ಬಳಿ ಮಾತನಾಡಿ ಎಂದು ಹೇಳಿ ಕಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ದೃತಿಗೆಡಬೇಡಿ. ನಾವು ಸಂವಿಧಾನ ಮತ್ತು ನ್ಯಾಯದ ಪರ ಇದೀವಿ, ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ ಮಾಡಲು ಬಂದಿದ್ದೇನೆ. ಮುಂದೆ ಹೆಜ್ಜೆ ಇಟ್ಟು ರಾಜೀನಾಮೆ ನೀಡಿ ಹಿಂದೆ ಸರಿಯೋದು ಬೇಕಾಗಿಲ್ಲ, ವಾಪಾಸ್ ತೆಗೋಳಿ. ಯಾರು ಸಹ ಉಗ್ರವಾಗಿ ಯೋಚನೆ ಮಾಡೋದು ಕೂಡ ಬೇಕಾಗಿಲ್ಲ. ಮಂಗಳೂರಿಗೆ ಕರ್ನಾಟಕದಲ್ಲಿ ಒಳ್ಳೆಯ ಹೆಸರಿದೆ, ಅದನ್ನ ಮಣಿಪುರ ಮಾಡೋದು ಬೇಡ.
ನಾನು ಎಲ್ಲರಿಗೂ ಮಾತನಾಡಿಸ್ತೀನಿ, ಕಾಂಗ್ರೆಸ್ ಪಕ್ಷದಲ್ಲಿ ಯಾರನ್ನು ಕಳೆದುಕೊಳ್ಳಲು ತಯಾರಿಲ್ಲ. ಯಾವುದೋ ಭಾವನಾತ್ಮಕವಾಗಿ ಮನಸ್ಸಿಗೆ ನೋವಾದಾಗ ರಾಜೀನಾಮೆ ಕೊಟ್ಟಿದ್ದಾರೆ. ಎಲ್ಲರಿಗೂ ರಾಜೀನಾಮೆ ವಾಪಸ್ ಪಡೆಯಲು ಮನವಿ ಮಾಡ್ತೇನೆ. ಸರ್ಕಾರ ಜೊತೆಗಿರುವಾಗ ನಾವು ಕೆಲಸ ಮಾಡಿಲ್ಲ ಅಂದ್ರೆ ರಾಜೀನಾಮೆ ಕೊಡಬೇಕು. ನಾವು ಸೈದ್ದಾಂತಿಕವಾಗಿ ಬಹಳ ದೃಢವಾಗಿ ಇದ್ದಂಥವರು. ನಮ್ಮ ಸಿದ್ಧಾಂತಕ್ಕೆ ದಕ್ಕೆಯಾದಾಗ ಯಾರೂ ಸಹ ಹಾಗೆ ಮಾಡಬಹುದು.
ಇದರಲ್ಲಿ ಇರೋ ಪಾತ್ರಧಾರಿಗಳು ಮತ್ತು ಅವರ ಕುಟುಂಬದವರು ಪಾಪದವರು. ಸೂತ್ರಧಾರಿಗಳು ಯಾರ ಕೈಗೂ ಸಿಗದೇ ತಪ್ಪಿಸಿಕೊಳ್ತಾ ಇದಾರೆ. ಸೂತ್ರಧಾರಿಗಳ ಕೈಗೊಂಬೆಯಾಗಿ ನಮ್ಮ ಪಾತ್ರಧಾರಿಗಳು ಪ್ರಾಣ ಕಳೆದುಕೊಳ್ತಾ ಇದಾರೆ. ಸ್ವಲ್ಪ ದಿವಸದಲ್ಲಿ ಸೂತ್ರಧಾರಿಗಳು ಯಾರ್ಯಾರೆಂದು ನಾವು ಹೇಳ್ತೇವೆ. ಪೊಲೀಸರು ಒಳ್ಳೆಯ ಅಧಿಕಾರಿಗಳು ಇದಾರೆ, ಕ್ರಮ ಜರುಗಿಸ್ತಾರೆ. ಕಾನೂನು ಸುವ್ಯವಸ್ಥೆ ವಿಫಲ ಆದಾಗ ಸಿಎಂ ಮತ್ತು ಗೃಹ ಸಚಿವರು ಕ್ರಮ ಜರುಗಿಸಬೇಕಾಗುತ್ತದೆ. ಇದೊಂಥರ ಸೂಕ್ಷ್ಮ ಪ್ರದೇಶ ಆದ ಕಾರಣ ಬಹಳ ಯೋಚನೆ ಮಾಡಿ ಹೆಜ್ಜೆ ಇಟ್ಟಿದ್ದಾರೆ. ಎಲ್ಲಾ ಸರಿಯಾಗುತ್ತೆ, ಏನೂ ತೊಂದರೆ ಇಲ್ಲ, ನಾನಾದ್ರೂ ಅವರ ಪರ ನಿಲ್ತೀನಿ ಎಂದು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಬಿ.ಕೆ ಹರಿಪ್ರಸಾದ್ ಹೇಳಿದರು
Mangalore Has a Good Reputation, Don’t Turn It Into Manipur, BK Hariprasad Urges Congress Workers Not to Lose Heart
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm