ಬ್ರೇಕಿಂಗ್ ನ್ಯೂಸ್
05-06-25 06:00 pm Mangaluru Staff ಕರಾವಳಿ
ಬಂಟ್ವಾಳ, ಜೂನ್ 5: ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯ ರಮೇಶ್ ರೈ (55) ಪಾಣೆಮಂಗಳೂರು ಸೇತುವೆ ಬಳಿಯ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ವೇಳೆಗೆ ರಮೇಶ್ ರೈ ಅವರಿಗೆ ಸೇರಿದ್ದ ಬೈಕ್ ಮತ್ತು ಮೊಬೈಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಪೋಲೀಸ್ ಮತ್ತು ಸ್ಥಳೀಯರು ಸ್ಥಳದಲ್ಲಿ ಹುಡುಕಾಟ ನಡೆಸಿದ್ದರು. ಪಾಣೆಮಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ರಮೇಶ್ ರೈ ಅವರ ಮೃತದೇಹ ಮಧ್ಯಾಹ್ನ ಪತ್ತೆಯಾಗಿದೆ.
ಇತ್ತೀಚಿಗೆ ನಗರಸಭೆ ನೆಲ್ಲಿಕಟ್ಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ರೈ ಆಯ್ಕೆಯಾಗಿದ್ದರು. ಇವರು ತನ್ನ ಚಪ್ಪಲಿ, ಮೊಬೈಲ್, ಅಂಗಿ ತೆಗೆದಿಟ್ಟು ನಾಪತ್ತೆಯಾಗಿದ್ದರು. ಇದರಿಂದಾಗಿ ಈ ಸೊತ್ತು ರಮೇಶ್ ರೈಯವರದ್ದೇ ಅನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು.
ಆತ್ಮಹತ್ಯೆ ಮಾಹಿತಿ ತಿಳಿಯುತ್ತಿದ್ದಂತೆ ಪುತ್ತೂರಿನಿಂದ ಬಿಜೆಪಿ ಪಕ್ಷದ ಮುಖಂಡರು ಮತ್ತು ಸಂಬಂಧಿಕರು ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಮೇಶ್ ರೈ ಅವರು ಪತ್ನಿ ಮೋಹಿನಿ, ಪುತ್ರ ವಿನೀಶ್, ಪುತ್ರಿ ವೀಕ್ಷಾ ಅವರನ್ನು ಅಗಲಿದ್ದಾರೆ. ಸುಳ್ಯದಲ್ಲಿ ಮಂಗಳಾ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ರಮೇಶ್ ರೈ ದಿಢೀರ್ ಸಾವಿಗೇನು ಕಾರಣ ಎನ್ನುವುದು ಗೊತ್ತಾಗಿಲ್ಲ. ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Ramesh Rai (55), a BJP councillor from Puttur Municipality, was found dead in the Nethravathi River near Panemangalore Bridge today. His bike, mobile phone, slippers, and shirt were discovered on the bridge around 11 AM, prompting a search operation by police and fire personnel. His body was later recovered from a nearby water tank.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm