ಬ್ರೇಕಿಂಗ್ ನ್ಯೂಸ್
05-06-25 06:00 pm Mangaluru Staff ಕರಾವಳಿ
ಬಂಟ್ವಾಳ, ಜೂನ್ 5: ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯ ರಮೇಶ್ ರೈ (55) ಪಾಣೆಮಂಗಳೂರು ಸೇತುವೆ ಬಳಿಯ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ವೇಳೆಗೆ ರಮೇಶ್ ರೈ ಅವರಿಗೆ ಸೇರಿದ್ದ ಬೈಕ್ ಮತ್ತು ಮೊಬೈಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಪೋಲೀಸ್ ಮತ್ತು ಸ್ಥಳೀಯರು ಸ್ಥಳದಲ್ಲಿ ಹುಡುಕಾಟ ನಡೆಸಿದ್ದರು. ಪಾಣೆಮಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ರಮೇಶ್ ರೈ ಅವರ ಮೃತದೇಹ ಮಧ್ಯಾಹ್ನ ಪತ್ತೆಯಾಗಿದೆ.
ಇತ್ತೀಚಿಗೆ ನಗರಸಭೆ ನೆಲ್ಲಿಕಟ್ಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ರೈ ಆಯ್ಕೆಯಾಗಿದ್ದರು. ಇವರು ತನ್ನ ಚಪ್ಪಲಿ, ಮೊಬೈಲ್, ಅಂಗಿ ತೆಗೆದಿಟ್ಟು ನಾಪತ್ತೆಯಾಗಿದ್ದರು. ಇದರಿಂದಾಗಿ ಈ ಸೊತ್ತು ರಮೇಶ್ ರೈಯವರದ್ದೇ ಅನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು.
ಆತ್ಮಹತ್ಯೆ ಮಾಹಿತಿ ತಿಳಿಯುತ್ತಿದ್ದಂತೆ ಪುತ್ತೂರಿನಿಂದ ಬಿಜೆಪಿ ಪಕ್ಷದ ಮುಖಂಡರು ಮತ್ತು ಸಂಬಂಧಿಕರು ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಮೇಶ್ ರೈ ಅವರು ಪತ್ನಿ ಮೋಹಿನಿ, ಪುತ್ರ ವಿನೀಶ್, ಪುತ್ರಿ ವೀಕ್ಷಾ ಅವರನ್ನು ಅಗಲಿದ್ದಾರೆ. ಸುಳ್ಯದಲ್ಲಿ ಮಂಗಳಾ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ರಮೇಶ್ ರೈ ದಿಢೀರ್ ಸಾವಿಗೇನು ಕಾರಣ ಎನ್ನುವುದು ಗೊತ್ತಾಗಿಲ್ಲ. ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Ramesh Rai (55), a BJP councillor from Puttur Municipality, was found dead in the Nethravathi River near Panemangalore Bridge today. His bike, mobile phone, slippers, and shirt were discovered on the bridge around 11 AM, prompting a search operation by police and fire personnel. His body was later recovered from a nearby water tank.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm