ಬ್ರೇಕಿಂಗ್ ನ್ಯೂಸ್
05-06-25 06:00 pm Mangaluru Staff ಕರಾವಳಿ
ಬಂಟ್ವಾಳ, ಜೂನ್ 5: ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯ ರಮೇಶ್ ರೈ (55) ಪಾಣೆಮಂಗಳೂರು ಸೇತುವೆ ಬಳಿಯ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ವೇಳೆಗೆ ರಮೇಶ್ ರೈ ಅವರಿಗೆ ಸೇರಿದ್ದ ಬೈಕ್ ಮತ್ತು ಮೊಬೈಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಪೋಲೀಸ್ ಮತ್ತು ಸ್ಥಳೀಯರು ಸ್ಥಳದಲ್ಲಿ ಹುಡುಕಾಟ ನಡೆಸಿದ್ದರು. ಪಾಣೆಮಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ರಮೇಶ್ ರೈ ಅವರ ಮೃತದೇಹ ಮಧ್ಯಾಹ್ನ ಪತ್ತೆಯಾಗಿದೆ.
ಇತ್ತೀಚಿಗೆ ನಗರಸಭೆ ನೆಲ್ಲಿಕಟ್ಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ರೈ ಆಯ್ಕೆಯಾಗಿದ್ದರು. ಇವರು ತನ್ನ ಚಪ್ಪಲಿ, ಮೊಬೈಲ್, ಅಂಗಿ ತೆಗೆದಿಟ್ಟು ನಾಪತ್ತೆಯಾಗಿದ್ದರು. ಇದರಿಂದಾಗಿ ಈ ಸೊತ್ತು ರಮೇಶ್ ರೈಯವರದ್ದೇ ಅನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು.
ಆತ್ಮಹತ್ಯೆ ಮಾಹಿತಿ ತಿಳಿಯುತ್ತಿದ್ದಂತೆ ಪುತ್ತೂರಿನಿಂದ ಬಿಜೆಪಿ ಪಕ್ಷದ ಮುಖಂಡರು ಮತ್ತು ಸಂಬಂಧಿಕರು ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಮೇಶ್ ರೈ ಅವರು ಪತ್ನಿ ಮೋಹಿನಿ, ಪುತ್ರ ವಿನೀಶ್, ಪುತ್ರಿ ವೀಕ್ಷಾ ಅವರನ್ನು ಅಗಲಿದ್ದಾರೆ. ಸುಳ್ಯದಲ್ಲಿ ಮಂಗಳಾ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ರಮೇಶ್ ರೈ ದಿಢೀರ್ ಸಾವಿಗೇನು ಕಾರಣ ಎನ್ನುವುದು ಗೊತ್ತಾಗಿಲ್ಲ. ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Ramesh Rai (55), a BJP councillor from Puttur Municipality, was found dead in the Nethravathi River near Panemangalore Bridge today. His bike, mobile phone, slippers, and shirt were discovered on the bridge around 11 AM, prompting a search operation by police and fire personnel. His body was later recovered from a nearby water tank.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm