ಬ್ರೇಕಿಂಗ್ ನ್ಯೂಸ್
06-06-25 05:33 pm Mangalore Correspondent ಕರಾವಳಿ
ಪುತ್ತೂರು, ಜೂನ್ 6 : ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡೀಪಾರು ಮಾಡಲು ಸಿದ್ಧತೆ ನಡೆಸಿದ್ದ ಪೊಲೀಸರಿಗೆ ಎಸಿ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದು, ಪುತ್ತಿಲ ಪರವಾಗಿ ವಾದ ಮಂಡಿಸಿದ್ದಾರೆ.
ಅರುಣ್ ಪುತ್ತಿಲ ಅವರನ್ನು ಗಡೀಪಾರು ಮಾಡುವುದಕ್ಕೆ ಇರುವ ಮಾನದಂಡಗಳೇನು ಮತ್ತು ಪೊಲೀಸ್ ಇಲಾಖೆಯಲ್ಲಿ ಮಾಡಿಕೊಂಡಿರುವ ಆರೋಪ ಪಟ್ಟಿ ಅಥವಾ ಆ ಕುರಿತ ದಾಖಲೆ ಏನಿದೆ ಎಂದು ವಕೀಲರು ಉಪ ವಿಭಾಗಾಧಿಕಾರಿ ಮುಂದೆ ಪ್ರಶ್ನೆ ಮಾಡಿದ್ದಾರೆ. ಪುತ್ತಿಲ ಅವರಿಗೆ ನೀಡಿದ್ದ ನೋಟೀಸಿನಲ್ಲಿ ಕಳೆದ ಬಾರಿ ವಿಧಾನಸಭೆ ಕ್ಷೇತ್ರದಲ್ಲಿ ಸ್ವತಂತ್ರ ಸ್ಪರ್ಧಿಸಿದ್ದಾಗ, ಯೋಗಿ ಮತ್ತು ಮೋದಿಯವರ ಫೋಟೋ ಬಳಸಿದ್ದಕ್ಕಾಗಿ ಮಾಡಿದ್ದ ಕೇಸು, 2013ರಲ್ಲಿ ದಾಖಲಾಗಿದ್ದ ಕೇಸಿನ ವಿವರಗಳಿದ್ದವು. ಇವೆರಡೂ ಪ್ರಕರಣಗಳು ಕೋರ್ಟಿನಲ್ಲಿ ಖುಲಾಸೆಗೊಂಡಿವೆ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಎಸಿ ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಹಾಜರಿದ್ದರೂ, ಸಮರ್ಪಕ ದಾಖಲೆಗಳನ್ನು ಒದಗಿಸಲು ಮುಂದಾಗಿಲ್ಲ. ಇದರಂತೆ, ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದು, ಪೊಲೀಸರು ಸಮರ್ಪಕ ದಾಖಲೆ ಒದಗಿಸುವಂತೆ ಆದೇಶ ಮಾಡಿದ್ದಾರೆ. ಇದೇ ವೇಳೆ, ಇಂದು ಪುತ್ತೂರು ಎಸಿ ಕೋರ್ಟಿನಲ್ಲಿ ನೋಟಿಸ್ ಪಡೆದ 9 ಮಂದಿ ವಿಚಾರಣೆಗೆ ಹಾಜರಾಗಿದ್ದರು. ವಾರದ ಹಿಂದೆ ನೀಡಿದ್ದ ನೋಟೀಸಿನಲ್ಲಿ ತಾವು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರಿಂದ ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದರು.
Setback for Mangalore Police in Arun Puthila Externment Case, AC Court Seeks Proper Documentation, Hearing Postponed.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm