ಬ್ರೇಕಿಂಗ್ ನ್ಯೂಸ್
06-06-25 05:33 pm Mangalore Correspondent ಕರಾವಳಿ
ಪುತ್ತೂರು, ಜೂನ್ 6 : ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡೀಪಾರು ಮಾಡಲು ಸಿದ್ಧತೆ ನಡೆಸಿದ್ದ ಪೊಲೀಸರಿಗೆ ಎಸಿ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದು, ಪುತ್ತಿಲ ಪರವಾಗಿ ವಾದ ಮಂಡಿಸಿದ್ದಾರೆ.
ಅರುಣ್ ಪುತ್ತಿಲ ಅವರನ್ನು ಗಡೀಪಾರು ಮಾಡುವುದಕ್ಕೆ ಇರುವ ಮಾನದಂಡಗಳೇನು ಮತ್ತು ಪೊಲೀಸ್ ಇಲಾಖೆಯಲ್ಲಿ ಮಾಡಿಕೊಂಡಿರುವ ಆರೋಪ ಪಟ್ಟಿ ಅಥವಾ ಆ ಕುರಿತ ದಾಖಲೆ ಏನಿದೆ ಎಂದು ವಕೀಲರು ಉಪ ವಿಭಾಗಾಧಿಕಾರಿ ಮುಂದೆ ಪ್ರಶ್ನೆ ಮಾಡಿದ್ದಾರೆ. ಪುತ್ತಿಲ ಅವರಿಗೆ ನೀಡಿದ್ದ ನೋಟೀಸಿನಲ್ಲಿ ಕಳೆದ ಬಾರಿ ವಿಧಾನಸಭೆ ಕ್ಷೇತ್ರದಲ್ಲಿ ಸ್ವತಂತ್ರ ಸ್ಪರ್ಧಿಸಿದ್ದಾಗ, ಯೋಗಿ ಮತ್ತು ಮೋದಿಯವರ ಫೋಟೋ ಬಳಸಿದ್ದಕ್ಕಾಗಿ ಮಾಡಿದ್ದ ಕೇಸು, 2013ರಲ್ಲಿ ದಾಖಲಾಗಿದ್ದ ಕೇಸಿನ ವಿವರಗಳಿದ್ದವು. ಇವೆರಡೂ ಪ್ರಕರಣಗಳು ಕೋರ್ಟಿನಲ್ಲಿ ಖುಲಾಸೆಗೊಂಡಿವೆ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಎಸಿ ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಹಾಜರಿದ್ದರೂ, ಸಮರ್ಪಕ ದಾಖಲೆಗಳನ್ನು ಒದಗಿಸಲು ಮುಂದಾಗಿಲ್ಲ. ಇದರಂತೆ, ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದು, ಪೊಲೀಸರು ಸಮರ್ಪಕ ದಾಖಲೆ ಒದಗಿಸುವಂತೆ ಆದೇಶ ಮಾಡಿದ್ದಾರೆ. ಇದೇ ವೇಳೆ, ಇಂದು ಪುತ್ತೂರು ಎಸಿ ಕೋರ್ಟಿನಲ್ಲಿ ನೋಟಿಸ್ ಪಡೆದ 9 ಮಂದಿ ವಿಚಾರಣೆಗೆ ಹಾಜರಾಗಿದ್ದರು. ವಾರದ ಹಿಂದೆ ನೀಡಿದ್ದ ನೋಟೀಸಿನಲ್ಲಿ ತಾವು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರಿಂದ ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದರು.
Setback for Mangalore Police in Arun Puthila Externment Case, AC Court Seeks Proper Documentation, Hearing Postponed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm