ಬ್ರೇಕಿಂಗ್ ನ್ಯೂಸ್
06-06-25 05:33 pm Mangalore Correspondent ಕರಾವಳಿ
ಪುತ್ತೂರು, ಜೂನ್ 6 : ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡೀಪಾರು ಮಾಡಲು ಸಿದ್ಧತೆ ನಡೆಸಿದ್ದ ಪೊಲೀಸರಿಗೆ ಎಸಿ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದು, ಪುತ್ತಿಲ ಪರವಾಗಿ ವಾದ ಮಂಡಿಸಿದ್ದಾರೆ.
ಅರುಣ್ ಪುತ್ತಿಲ ಅವರನ್ನು ಗಡೀಪಾರು ಮಾಡುವುದಕ್ಕೆ ಇರುವ ಮಾನದಂಡಗಳೇನು ಮತ್ತು ಪೊಲೀಸ್ ಇಲಾಖೆಯಲ್ಲಿ ಮಾಡಿಕೊಂಡಿರುವ ಆರೋಪ ಪಟ್ಟಿ ಅಥವಾ ಆ ಕುರಿತ ದಾಖಲೆ ಏನಿದೆ ಎಂದು ವಕೀಲರು ಉಪ ವಿಭಾಗಾಧಿಕಾರಿ ಮುಂದೆ ಪ್ರಶ್ನೆ ಮಾಡಿದ್ದಾರೆ. ಪುತ್ತಿಲ ಅವರಿಗೆ ನೀಡಿದ್ದ ನೋಟೀಸಿನಲ್ಲಿ ಕಳೆದ ಬಾರಿ ವಿಧಾನಸಭೆ ಕ್ಷೇತ್ರದಲ್ಲಿ ಸ್ವತಂತ್ರ ಸ್ಪರ್ಧಿಸಿದ್ದಾಗ, ಯೋಗಿ ಮತ್ತು ಮೋದಿಯವರ ಫೋಟೋ ಬಳಸಿದ್ದಕ್ಕಾಗಿ ಮಾಡಿದ್ದ ಕೇಸು, 2013ರಲ್ಲಿ ದಾಖಲಾಗಿದ್ದ ಕೇಸಿನ ವಿವರಗಳಿದ್ದವು. ಇವೆರಡೂ ಪ್ರಕರಣಗಳು ಕೋರ್ಟಿನಲ್ಲಿ ಖುಲಾಸೆಗೊಂಡಿವೆ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಎಸಿ ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಹಾಜರಿದ್ದರೂ, ಸಮರ್ಪಕ ದಾಖಲೆಗಳನ್ನು ಒದಗಿಸಲು ಮುಂದಾಗಿಲ್ಲ. ಇದರಂತೆ, ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದು, ಪೊಲೀಸರು ಸಮರ್ಪಕ ದಾಖಲೆ ಒದಗಿಸುವಂತೆ ಆದೇಶ ಮಾಡಿದ್ದಾರೆ. ಇದೇ ವೇಳೆ, ಇಂದು ಪುತ್ತೂರು ಎಸಿ ಕೋರ್ಟಿನಲ್ಲಿ ನೋಟಿಸ್ ಪಡೆದ 9 ಮಂದಿ ವಿಚಾರಣೆಗೆ ಹಾಜರಾಗಿದ್ದರು. ವಾರದ ಹಿಂದೆ ನೀಡಿದ್ದ ನೋಟೀಸಿನಲ್ಲಿ ತಾವು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರಿಂದ ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದರು.
Setback for Mangalore Police in Arun Puthila Externment Case, AC Court Seeks Proper Documentation, Hearing Postponed.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm