ಬ್ರೇಕಿಂಗ್ ನ್ಯೂಸ್
07-06-25 12:08 pm Mangalore Correspondent ಕರಾವಳಿ
ಉಳ್ಳಾಲ, ಜೂ.7 : ಮನೆ ಮಂದಿ ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಬೆಂಕಿ ಅವಘಡ ಉಂಟಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ದೇರಳಕಟ್ಟೆ ಸಮೀಪದ ವೈದ್ಯನಾಥ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ವೈದ್ಯನಾಥ ನಗರದ ಸುಶೀಲ ಮಡಿವಾಳ ಎಂಬವರ ಮನೆಯಲ್ಲಿ ರಾತ್ರಿ ಸುಮಾರು 10.30 ರ ವೇಳೆ ದುರ್ಘಟನೆ ಸಂಭವಿಸಿದೆ. ಸುಶೀಲಾ ಅವರ ಸಹೋದರನ ಮಗಳ ಮದುವೆಯ ಪ್ರಯುಕ್ತ ಮನೆ ಮಂದಿ ಮೆಹಂದಿ ಕಾರ್ಯಕ್ರಮಕ್ಕೆಂದು ತೆರಳಿದ್ದರು. ರಾತ್ರಿಯ ವೇಳೆ ಮನೆಯ ಹಂಚಿನ ಮೇಲ್ಛಾವಣಿಯಲ್ಲಿ ಬೆಂಕಿ ಕಾಣಿಸಿದ್ದನ್ನ ನೆರೆ ಮನೆಯ ವ್ಯಕ್ತಿಯೊಬ್ಬರು ನೋಡಿ ಸುಶೀಲ ಅವರಿಗೆ ಕರೆ ಮಾಡಿ ಹೇಳಿದ್ದಾರೆ.




ಮೆಹೆಂದಿ ಕಾರ್ಯಕ್ರಮದಿಂದ ಸುಶೀಲ ಅವರ ಅಳಿಯ ಓಡಿ ಬಂದು ನೋಡಿದಾಗ ಮನೆಯ ಒಂದು ಕೊಠಡಿಯ ಮೇಲ್ಛಾವಣಿಯಲ್ಲಿ ಬೆಂಕಿ ಉರಿಯುತ್ತಿತ್ತು. ಕೂಡಲೇ ವಿದ್ಯುತ್ ಸಂಪರ್ಕದ ಮೈನ್ ಸ್ವಿಚ್ ಬಂದ್ ಮಾಡಲಾಗಿತ್ತು. ಸ್ಥಳೀಯರು ಸೇರಿ ಮನೆಯ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟರೂ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಉರಿದು ಹೋಗಿದೆ.
ಘಟನೆ ಸಂದರ್ಭದಲ್ಲಿ ಯುವಕನೋರ್ವ ಮನೆಯೊಳಗಿದ್ದ ಗ್ಯಾಸ್ ಸಿಲಿಂಡರನ್ನು ಹೊರಗೆ ಎಸೆದಿದ್ದು ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಅಗ್ನಿ ಅವಘಡದಿಂದ ಮನೆಯ ಸೊತ್ತುಗಳು ಉರಿದು ಭಸ್ಮಗೊಂಡಿದ್ದು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳವು ರಾತ್ರಿಯೇ ದೌಡಾಯಿಸಿದ್ದು ಬೆಂಕಿಯನ್ನು ನಂದಿಸಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
Mangalore House Gutted in Fire Accident at Derlakatte While Family Attends Mehendi Ceremony.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am