ಬ್ರೇಕಿಂಗ್ ನ್ಯೂಸ್
07-06-25 12:08 pm Mangalore Correspondent ಕರಾವಳಿ
ಉಳ್ಳಾಲ, ಜೂ.7 : ಮನೆ ಮಂದಿ ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಬೆಂಕಿ ಅವಘಡ ಉಂಟಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ದೇರಳಕಟ್ಟೆ ಸಮೀಪದ ವೈದ್ಯನಾಥ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ವೈದ್ಯನಾಥ ನಗರದ ಸುಶೀಲ ಮಡಿವಾಳ ಎಂಬವರ ಮನೆಯಲ್ಲಿ ರಾತ್ರಿ ಸುಮಾರು 10.30 ರ ವೇಳೆ ದುರ್ಘಟನೆ ಸಂಭವಿಸಿದೆ. ಸುಶೀಲಾ ಅವರ ಸಹೋದರನ ಮಗಳ ಮದುವೆಯ ಪ್ರಯುಕ್ತ ಮನೆ ಮಂದಿ ಮೆಹಂದಿ ಕಾರ್ಯಕ್ರಮಕ್ಕೆಂದು ತೆರಳಿದ್ದರು. ರಾತ್ರಿಯ ವೇಳೆ ಮನೆಯ ಹಂಚಿನ ಮೇಲ್ಛಾವಣಿಯಲ್ಲಿ ಬೆಂಕಿ ಕಾಣಿಸಿದ್ದನ್ನ ನೆರೆ ಮನೆಯ ವ್ಯಕ್ತಿಯೊಬ್ಬರು ನೋಡಿ ಸುಶೀಲ ಅವರಿಗೆ ಕರೆ ಮಾಡಿ ಹೇಳಿದ್ದಾರೆ.




ಮೆಹೆಂದಿ ಕಾರ್ಯಕ್ರಮದಿಂದ ಸುಶೀಲ ಅವರ ಅಳಿಯ ಓಡಿ ಬಂದು ನೋಡಿದಾಗ ಮನೆಯ ಒಂದು ಕೊಠಡಿಯ ಮೇಲ್ಛಾವಣಿಯಲ್ಲಿ ಬೆಂಕಿ ಉರಿಯುತ್ತಿತ್ತು. ಕೂಡಲೇ ವಿದ್ಯುತ್ ಸಂಪರ್ಕದ ಮೈನ್ ಸ್ವಿಚ್ ಬಂದ್ ಮಾಡಲಾಗಿತ್ತು. ಸ್ಥಳೀಯರು ಸೇರಿ ಮನೆಯ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟರೂ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಉರಿದು ಹೋಗಿದೆ.
ಘಟನೆ ಸಂದರ್ಭದಲ್ಲಿ ಯುವಕನೋರ್ವ ಮನೆಯೊಳಗಿದ್ದ ಗ್ಯಾಸ್ ಸಿಲಿಂಡರನ್ನು ಹೊರಗೆ ಎಸೆದಿದ್ದು ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಅಗ್ನಿ ಅವಘಡದಿಂದ ಮನೆಯ ಸೊತ್ತುಗಳು ಉರಿದು ಭಸ್ಮಗೊಂಡಿದ್ದು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳವು ರಾತ್ರಿಯೇ ದೌಡಾಯಿಸಿದ್ದು ಬೆಂಕಿಯನ್ನು ನಂದಿಸಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
Mangalore House Gutted in Fire Accident at Derlakatte While Family Attends Mehendi Ceremony.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm