ಬ್ರೇಕಿಂಗ್ ನ್ಯೂಸ್
09-06-25 11:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 9 : ಕೇರಳದ ಕೊಚ್ಚಿಯ ಬೇಪೂರ್ ಸಮುದ್ರ ತೀರದಿಂದ 78 ನಾಟಿಕಲ್ ಮೈಲು ದೂರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿನಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದರಲ್ಲಿದ್ದ 18 ಮಂದಿಯನ್ನು ನೌಕಾಪಡೆ ಮತ್ತು ಇಂಡಿಯನ್ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. ನಾಲ್ವರು ಸಿಬಂದಿ ನಾಪತ್ತೆಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.
ಐವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕ ಇದೆಯೆಂದು ಅಧಿಕಾರಿಗಳು ತಿಳಿಸಿದ್ದು, ಅವರನ್ನು ಐಎನ್ಎಸ್ ಸೂರತ್ ಶಿಪ್ ಮೂಲಕ ಪಣಂಬೂರು ಬಂದರಿಗೆ ತರಲಾಗಿದೆ. ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆಯಿದೆ. ಎಂವಿ ವ್ಯಾನ್ ಹೈ 503 ಹೆಸರಿನ ಸಿಂಗಾಪುರದ ಕಂಟೇನರ್ ಹಡಗು ಶ್ರೀಲಂಕಾದ ಕೊಲಂಬೋದಿಂದ ಮುಂಬೈ ತೆರಳುತ್ತಿದ್ದಾಗ ಕೇರಳ ಸಮುದ್ರ ತೀರದಲ್ಲಿ ದುರಂತಕ್ಕೀಡಾಗಿದೆ.




ಕೊಲಂಬೋದಿಂದ ಹಡಗು ಹೊರಟಿದ್ದಾಗ ಒಟ್ಟು 22 ಸಿಬಂದಿ ಇದ್ದರು. ಎಂಟು ಚೈನಾ, ನಾಲ್ಕು ತೈವಾನ್, ನಾಲ್ಕು ಮ್ಯಾನ್ಮಾರ್, ಇಬ್ಬರು ಇಂಡೋನೇಶ್ಯಾ ಮೂಲದವರು ಇದ್ದರು. ಈಗ 18 ಸಿಬಂದಿಯನ್ನು ರಕ್ಷಣೆ ಮಾಡಲಾಗಿದ್ದು ನಾಲ್ಕು ಮಂದಿ ಸಮುದ್ರದಲ್ಲಿ ನಾಪತ್ತೆಯಾಗಿದ್ದು ಅವರ ರಕ್ಷಣೆಗಾಗಿ ಹುಡುಕಾಟ ಮುಂದುವರಿದಿದೆ. ಮಂಗಳೂರು ಕೋಸ್ಟ್ ಗಾರ್ಡ್ ಪಡೆಯ ಐಸಿಜಿಎಸ್ ರಾಜದೂತ್, ಕೊಚ್ಚಿಯ ಐಸಿಜಿಎಸ್ ಅರ್ನ್ವೇಶ್, ಅಗತ್ತಿಯ ಐಸಿಜಿಎಸ್ ಸಾಚೆಟ್ ಹಡಗಿನ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ನಾಪತ್ತೆಯಾದವರಲ್ಲಿ ಇಬ್ಬರು ತೈವಾನ್, ಒಬ್ಬ ಇಂಡೋನೇಶ್ಯಾ ಮತ್ತು ಇನ್ನೊಬ್ಬ ಮ್ಯಾನ್ಮಾರ್ ಮೂಲದವರು ಇದ್ದಾರೆ. ಹಡಗಿನಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಎರಡನೇ ಹಡಗು ದುರಂತ
ಇತ್ತೀಚೆಗೆ ಮೇ 25ರಂದು ಕೇರಳ ಕರಾವಳಿಯಲ್ಲಿ ಲೈಬೀರಿಯಾ ಮೂಲದ 30 ವರ್ಷ ಹಳೆಯ ಬೃಹತ್ ಕಂಟೇನರ್ ಹಡಗು ಮುಳುಗಡೆಯಾಗಿತ್ತು. ಅದರಲ್ಲಿ 640 ಕಂಟೇನರ್ ಗಳಿದ್ದು, ಆ ಪೈಕಿ 12 ಕಂಟೇನರ್ ಗಳಲ್ಲಿ ಅತ್ಯಂತ ವಿಷಕಾರಿ ರಾಸಾಯನಿಕಗಳು ತುಂಬಿದ್ದವು. ಕೆಲವು ಕಂಟೇನರ್ ಗಳು ಕೇರಳ ಕರಾವಳಿ ದಡಕ್ಕೆ ತೇಲಿ ಬಂದಿದ್ದು ದಡಕ್ಕೆ ಬಡಿಯುತ್ತಲೇ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದ್ದವು. ಇದರಿಂದಾಗಿ ಕೇರಳದ ಕರಾವಳಿ ಸಮುದ್ರ ತೀರ ತೀವ್ರ ಮಲಿನಗೊಳ್ಳುವ ಆತಂಕ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಕಂಟೇನರ್ ಹಡಗು ದುರಂತಕ್ಕೀಡಾಗಿದೆ.
Fire Breaks Out on Singapore Container Ship Off Kerala Coast; 18 Crew Rescued, 4 Missing, Injured Brought to Mangalore by Coast Guard
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm