ಬ್ರೇಕಿಂಗ್ ನ್ಯೂಸ್
15-06-25 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಗಳೂರಿನಲ್ಲಿ ಹಲವೆಡೆ ಧರೆ ಕುಸಿತ ಉಂಟಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಗುಡ್ಡದ ಬದಿಯಿರುವ ಮನೆಯೊಂದಕ್ಕೆ ಕಾಂಕ್ರೀಟ್ ತಡೆಗೋಡೆ ಮತ್ತು ಮಣ್ಣು ಕುಸಿದು ಬಿದ್ದಿದ್ದು, ಇಡೀ ಮನೆಯೇ ಕುಸಿದು ಹೋಗುವ ಅಪಾಯಕ್ಕೀಡಾಗಿದೆ.
ಕದ್ರಿ ಪಾರ್ಕ್ ಕೆಳಭಾಗದ ಬೃಹತ್ ಅಪಾರ್ಟ್ಮೆಂಟ್ ಬಳಿಯೇ ಗುಡ್ಡದ ಬದಿಯಲ್ಲಿ ಉಷಾ ಅಶೋಕ್ ಎಂಬವರ ಮನೆಯಿದ್ದು, ಶನಿವಾರವೇ ಗುಡ್ಡ ಮತ್ತು ಮೇಲ್ಭಾಗದಲ್ಲಿ ಹಾಕಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಮನೆಯ ಕೆಳಭಾಗದಲ್ಲಿ ಗುಂಡಿಯಿದ್ದು, ಮೇಲ್ಭಾಗದ ಮಣ್ಣು ಮತ್ತು ಮರ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಅಡುಗೆ ಕೋಣೆಯ ಒಳಗಡೆ ಮಣ್ಣು ತುಂಬಿಕೊಂಡಿದೆ. ಮಳೆನೀರು ಕೂಡ ಬೀಳುತ್ತಿದೆ. ಮನೆಯ ಎದುರಿನಲ್ಲಿ ಬಿರುಕು ಬಿಟ್ಟಿದ್ದು ಸಂಪೂರ್ಣ ಕುಸಿದು ಹೋಗುವ ಅಪಾಯದಲ್ಲಿದೆ.



ಈ ಬಗ್ಗೆ ಮಹಾನಗರ ಪಾಲಿಕೆ ದೂರು ನೀಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಬಂದು ಹೋಗಿದ್ದಾರೆಂಬ ಮಾಹಿತಿಯನ್ನು ಉಷಾ ತಿಳಿಸಿದ್ದಾರೆ. ಆದರೆ ಮನೆಯಲ್ಲಿ ಉಳಿಯುವ ಸ್ಥಿತಿ ಇಲ್ಲ. ಹೀಗಾಗಿ ಪಕ್ಕದ ಬೇರೊಂದು ಮನೆಯಲ್ಲಿ ರಾತ್ರಿ ವೇಳೆ ಆಶ್ರಯ ಪಡೆಯುತ್ತಿದ್ದಾರೆ. ಉಷಾ ಅವರ ಪತಿ ಅಶೋಕ್ ಅನಾರೋಗ್ಯದಲ್ಲಿದ್ದು ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದಾರೆ. ಇಬ್ಬರು ಮಕ್ಕಳಿದ್ದರೂ, ಬಡ ಕುಟುಂಬಕ್ಕೆ ಆಸರೆ ಇಲ್ಲದಾಗಿದೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತುರ್ತಾಗಿ ವ್ಯವಸ್ಥೆ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ.
Continuous heavy rainfall over the past two days has triggered multiple instances of landslides across Mangaluru city. One such alarming incident occurred in Kadri Kaibattal, where a concrete retaining wall and a large mass of earth collapsed onto a house, putting the entire structure at risk of falling.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm