ಬ್ರೇಕಿಂಗ್ ನ್ಯೂಸ್
15-06-25 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಗಳೂರಿನಲ್ಲಿ ಹಲವೆಡೆ ಧರೆ ಕುಸಿತ ಉಂಟಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಗುಡ್ಡದ ಬದಿಯಿರುವ ಮನೆಯೊಂದಕ್ಕೆ ಕಾಂಕ್ರೀಟ್ ತಡೆಗೋಡೆ ಮತ್ತು ಮಣ್ಣು ಕುಸಿದು ಬಿದ್ದಿದ್ದು, ಇಡೀ ಮನೆಯೇ ಕುಸಿದು ಹೋಗುವ ಅಪಾಯಕ್ಕೀಡಾಗಿದೆ.
ಕದ್ರಿ ಪಾರ್ಕ್ ಕೆಳಭಾಗದ ಬೃಹತ್ ಅಪಾರ್ಟ್ಮೆಂಟ್ ಬಳಿಯೇ ಗುಡ್ಡದ ಬದಿಯಲ್ಲಿ ಉಷಾ ಅಶೋಕ್ ಎಂಬವರ ಮನೆಯಿದ್ದು, ಶನಿವಾರವೇ ಗುಡ್ಡ ಮತ್ತು ಮೇಲ್ಭಾಗದಲ್ಲಿ ಹಾಕಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಮನೆಯ ಕೆಳಭಾಗದಲ್ಲಿ ಗುಂಡಿಯಿದ್ದು, ಮೇಲ್ಭಾಗದ ಮಣ್ಣು ಮತ್ತು ಮರ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಅಡುಗೆ ಕೋಣೆಯ ಒಳಗಡೆ ಮಣ್ಣು ತುಂಬಿಕೊಂಡಿದೆ. ಮಳೆನೀರು ಕೂಡ ಬೀಳುತ್ತಿದೆ. ಮನೆಯ ಎದುರಿನಲ್ಲಿ ಬಿರುಕು ಬಿಟ್ಟಿದ್ದು ಸಂಪೂರ್ಣ ಕುಸಿದು ಹೋಗುವ ಅಪಾಯದಲ್ಲಿದೆ.



ಈ ಬಗ್ಗೆ ಮಹಾನಗರ ಪಾಲಿಕೆ ದೂರು ನೀಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಬಂದು ಹೋಗಿದ್ದಾರೆಂಬ ಮಾಹಿತಿಯನ್ನು ಉಷಾ ತಿಳಿಸಿದ್ದಾರೆ. ಆದರೆ ಮನೆಯಲ್ಲಿ ಉಳಿಯುವ ಸ್ಥಿತಿ ಇಲ್ಲ. ಹೀಗಾಗಿ ಪಕ್ಕದ ಬೇರೊಂದು ಮನೆಯಲ್ಲಿ ರಾತ್ರಿ ವೇಳೆ ಆಶ್ರಯ ಪಡೆಯುತ್ತಿದ್ದಾರೆ. ಉಷಾ ಅವರ ಪತಿ ಅಶೋಕ್ ಅನಾರೋಗ್ಯದಲ್ಲಿದ್ದು ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದಾರೆ. ಇಬ್ಬರು ಮಕ್ಕಳಿದ್ದರೂ, ಬಡ ಕುಟುಂಬಕ್ಕೆ ಆಸರೆ ಇಲ್ಲದಾಗಿದೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತುರ್ತಾಗಿ ವ್ಯವಸ್ಥೆ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ.
Continuous heavy rainfall over the past two days has triggered multiple instances of landslides across Mangaluru city. One such alarming incident occurred in Kadri Kaibattal, where a concrete retaining wall and a large mass of earth collapsed onto a house, putting the entire structure at risk of falling.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am