ಬ್ರೇಕಿಂಗ್ ನ್ಯೂಸ್
16-06-25 11:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 16 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಆಗಿರುವ ಬೆಳವಣಿಗೆ ಮತ್ತು ಈ ಹಿಂದಿನ ಪೊಲೀಸ್ ಕಮಿಷನರ್ ನಡೆದುಕೊಂಡಿರುವ ರೀತಿ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ದ್ವೇಷ ಭಾಷಣಗಳು, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಮಾಜಘಾತುಕ ವದಂತಿಗಳ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಈ ಹಿಂದಿನ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡಿದ್ದು ಈ ಬಗ್ಗೆ ಪತ್ರದ ಮೂಲಕ ತಮ್ಮ ಗಮನಕ್ಕೆ ತರುತ್ತಿದ್ದೇನೆ. ಗಮನಾರ್ಹ ಸಂಗತಿಯೆಂದರೆ, ಸಮಾಜಘಾತುಕ ವದಂತಿ ಹಬ್ಬಿಸುವುದು, ಪ್ರಚೋದನೆಗಳನ್ನು ಮಾಡುತ್ತಿದ್ದರೂ ಹಿಂದಿನ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ತ್ವರಿತ ಕ್ರಮ ಕೈಗೊಂಡಿದ್ದಾರೆ.
ಒಂದು ವೇಳೆ ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ, ಕರಾವಳಿ ಭಾಗದಲ್ಲಿ ಒಂದೆರಡು ಧರ್ಮಾಧರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೆಲಸಗಳಲ್ಲಿ ನಿಷ್ಠೆಯಿಂದ ಮತ್ತು ತ್ವರಿತಗತಿಯಲ್ಲಿ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಅದಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ.
ಆಮೂಲಕ ನಮ್ಮ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು ಎಂಬ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ತಾವು ಈ ಬಗ್ಗೆ ಗಂಭೀರ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಯುಟಿ ಖಾದರ್, ತಮ್ಮ ಪತ್ರದಲ್ಲಿ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.
Speaker UT Khader Writes to Home Minister, Demands Action Against Former Police Officials for Ignoring Hate Speech and Misinformation.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm