ಬ್ರೇಕಿಂಗ್ ನ್ಯೂಸ್
18-06-25 10:24 am Mangalore Correspondent ಕರಾವಳಿ
ಮಂಗಳೂರು, ಜೂನ್ 18 : ಜಪ್ಪಿನಮೊಗರು ಹೆದ್ದಾರಿಯಲ್ಲಿ ನಸುಕಿನ ವೇಳೆಗೆ ಭೀಕರ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಸ್ಕೋಡಾ ಕಾರು ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಕಾರು ಚಾಲಕ, ಮಂಗಳೂರಿನ ಕದ್ರಿ ನಿವಾಸಿ ಅಮನ್ ರಾವ್(22) ಮತ್ತು ಚಾಲಕನ ಸೀಟಿನ ಹಿಂಬದಿಯಲ್ಲಿದ್ದ ದೇರೆಬೈಲ್ ನಿವಾಸಿ, ಎನ್ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ(24) ಮೃತಪಟ್ಟವರು.






ತಡರಾತ್ರಿ 2.30ರ ವೇಳೆಗೆ ಘಟನೆ ನಡೆದಿದೆ. ರಾ.ಹೆ. 66ರ ಜಪ್ಪಿನಮೊಗರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಎದುರಲ್ಲೇ ಅಪಘಾತ ನಡೆದಿದೆ. ಐವರು ಯುವಕರಿದ್ದ ಫೋಕ್ಸ್ ವೇಗನ್ ವರ್ಟಸ್ ಕಾರು ತಲಪಾಡಿಯಿಂದ ಮಂಗಳೂರಿನ ಕಡೆಗೆ ಅತಿ ವೇಗದಿಂದ ಧಾವಿಸುತ್ತಿತ್ತು. ಅಪಘಾತದ ತೀವ್ರತೆ ಎಷ್ಟು ಭೀಕರವಾಗಿತ್ತೆಂದರೆ, ಕಾರು ಸಂಪೂರ್ಣ ಪುಡಿಯಾಗಿದ್ದು ಇಂಜಿನ್ ಭಾಗವೇ ಹೊರಕ್ಕೆ ಬಂದಿದ್ದು ಏರ್ ಬ್ಯಾಗ್ ಚಿಂದಿಯಾಗಿದೆ. ಸಾಮಾನ್ಯವಾಗಿ ಜರ್ಮನಿ ಮೂಲದ ಫೋಕ್ಸ್ ವೇಗನ್ ಕಾರು ಡಿಕ್ಕಿಯಾದರೂ ಪ್ರಾಣಾಪಾಯ ಆಗಲ್ಲ. ಏರ್ ಬ್ಯಾಗ್ ಮತ್ತು ಹೊರಭಾಗವೂ ಗಟ್ಟಿಯಾಗಿರತ್ತದೆ. ಇಲ್ಲಿ 200 ಕಿಮೀ ವೇಗದಲ್ಲಿ ಬಂದಿರುವ ಸಾಧ್ಯತೆಯಿದ್ದು ಅದರಿಂದಾಗಿ ಇಷ್ಟೊಂದು ಭೀಕರ ಸ್ಥಿತಿಯಾಗಿದೆ ಎಂದು ಕಾರಿನ ಬಗ್ಗೆ ತಿಳಿದವರು ಹೇಳುತ್ತಾರೆ.
ಮೃತಪಟ್ಟವರಲ್ಲಿ ಓಂಶ್ರೀ ಪೂಜಾರಿ ದಕ್ಷಿಣ ಕನ್ನಡ ಎನ್ ಎಸ್ಐಯು ಘಟಕದ ಉಪಾಧ್ಯಕ್ಷರಾಗಿದ್ದು ಸಾಮಾಜಿಕ ಕೆಲಸಗಳಲ್ಲಿ ಸಕ್ರಿಯವಾಗಿದ್ದರು. ಅಮನ್ ರಾವ್ ಆತನ ಗೆಳೆಯನಾಗಿದ್ದು ರಾತ್ರಿ ಕಂಕನಾಡಿಯಲ್ಲಿ ಪಾರ್ಟಿ ಮುಗಿಸಿ ತಲಪಾಡಿಯಲ್ಲಿ ಊಟ ತಿಂದು ಮುಗಿಸಿ ಹಿಂತಿರುಗುತ್ತಿದ್ದರು. ಜೊತೆಗಿದ್ದ ವಂಶಿ ಮತ್ತು ಆಶಿಕ್ ಗಂಭೀರ ಗಾಯಗೊಂಡಿದ್ದು ತೀವ್ರ ನಿಗಾದಲ್ಲಿದ್ದಾರೆ. ಇವರೊಂದಿಗೆ ಇನ್ನೊಬ್ಬ ಇಟಲಿ ಮೂಲದ ಪ್ರವಾಸಿಗ ಜೆರ್ರಿ ಎಂಬಾತನಿದ್ದು ಆತ ಅಪಾಯದಿಂದ ಪಾರಾಗಿದ್ದಾನೆ. ಮೃತ ಅಮನ್ ರಾವ್, ಕಾಂಗ್ರೆಸ್ ಮುಖಂಡ ಮಿಥುನ್ ರೈ ಜೊತೆಗೆ ಗುರುತಿಸಿಕೊಂಡಿದ್ದು ಫ್ಲೆಕ್ಸ್, ಪೋಸ್ಟರ್ ಮಾಡುವ ಉದ್ಯಮ ನಡೆಸುತ್ತಿದ್ದ.
A tragic accident occurred early morning on the NH-66 near Japinamogaru, where a speeding Volkswagen Virtus car lost control and crashed into a divider. Two young men, Aman Rao (22) of Kadri and Omshree Poojary (24), NSUI district vice-president from Derebail, died on the spot. The vehicle, reportedly traveling at over 200 km/h, was completely mangled.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm