ಬ್ರೇಕಿಂಗ್ ನ್ಯೂಸ್
18-06-25 10:57 pm Udupi Correspondent ಕರಾವಳಿ
ಉಡುಪಿ, ಜೂನ್ 18 : ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸಿ, ಹಠಾತ್ ಬ್ರೇಕ್ ತುಳಿದು ಇಡೀ ಬಸ್ಸೇ ಒಂದು ಸುತ್ತು ಬರುವಂತೆ ಮಾಡಿ ಪ್ರಯಾಣಿಕರ ಜೀವದ ಚೆಲ್ಲಾಟವಾಡಿದ ಖಾಸಗಿ ಬಸ್ ಚಾಲಕನನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಸ್ ಚಾಲಕ ದೇವರಾಜ್ ಮತ್ತು ಆತ ಚಲಾಯಿಸುತ್ತಿದ್ದ ದುರ್ಗಾಂಬಾ ಹೆಸರಿನ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್ ಅನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತ ಬಂದಿದ್ದಾನೆ. ಎದುರಿಗೆ ಕಾರು ಬಂದಿದ್ದರಿಂದ ಹಠಾತ್ ಬ್ರೇಕ್ ತುಳಿದಿದ್ದು ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ಒಂದು ಸುತ್ತು ಹೊಡೆದು ನಿಂತುಬಿಟ್ಟಿದೆ.
ವಿರುದ್ಧ ದಿಕ್ಕಿಗೆ ತಿರುಗಿ ನಿಂತ ಬಸ್ಸನ್ನು ಆರೋಪಿ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿಯೇ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
In a shocking incident of reckless driving, Udupi Traffic Police have arrested a private bus driver for endangering the lives of passengers by driving rashly and losing control of the vehicle. The bus, named Sri Durgamba, and its driver, Devaraj, have been taken into custody.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm