ಬ್ರೇಕಿಂಗ್ ನ್ಯೂಸ್
18-06-25 10:57 pm Udupi Correspondent ಕರಾವಳಿ
ಉಡುಪಿ, ಜೂನ್ 18 : ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸಿ, ಹಠಾತ್ ಬ್ರೇಕ್ ತುಳಿದು ಇಡೀ ಬಸ್ಸೇ ಒಂದು ಸುತ್ತು ಬರುವಂತೆ ಮಾಡಿ ಪ್ರಯಾಣಿಕರ ಜೀವದ ಚೆಲ್ಲಾಟವಾಡಿದ ಖಾಸಗಿ ಬಸ್ ಚಾಲಕನನ್ನು ಉಡುಪಿ ಸಂಚಾರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಸ್ ಚಾಲಕ ದೇವರಾಜ್ ಮತ್ತು ಆತ ಚಲಾಯಿಸುತ್ತಿದ್ದ ದುರ್ಗಾಂಬಾ ಹೆಸರಿನ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಚಾಲಕ ದೇವರಾಜ್ ಜೂನ್ 17 ರಂದು ಶ್ರೀ ದುರ್ಗಾಂಬ ಖಾಸಗಿ ಬಸ್ ಅನ್ನು ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಅತಿ ವೇಗದಿಂದ ಚಲಾಯಿಸುತ್ತ ಬಂದಿದ್ದಾನೆ. ಎದುರಿಗೆ ಕಾರು ಬಂದಿದ್ದರಿಂದ ಹಠಾತ್ ಬ್ರೇಕ್ ತುಳಿದಿದ್ದು ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯೆ ಒಂದು ಸುತ್ತು ಹೊಡೆದು ನಿಂತುಬಿಟ್ಟಿದೆ.
ವಿರುದ್ಧ ದಿಕ್ಕಿಗೆ ತಿರುಗಿ ನಿಂತ ಬಸ್ಸನ್ನು ಆರೋಪಿ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿಯೇ ಚಲಾಯಿಸಿಕೊಂಡು ಉಡುಪಿ ಕಡೆಗೆ ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಸ್ ಚಾಲಕನ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿ ಚಾಲಕ ದೇವರಾಜ್ನನ್ನು ಬಂಧಿಸಿ, ಬಸ್ಸನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
In a shocking incident of reckless driving, Udupi Traffic Police have arrested a private bus driver for endangering the lives of passengers by driving rashly and losing control of the vehicle. The bus, named Sri Durgamba, and its driver, Devaraj, have been taken into custody.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm