ಬ್ರೇಕಿಂಗ್ ನ್ಯೂಸ್
10-08-20 05:37 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 9: ಯಾವತ್ತೂ ಮಲ್ಲಿಗೆ ಹೂವಿನ ಕೊರತೆಯನ್ನೇ ಎದುರಿಸಿರದ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿ ಈ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ ಮಲ್ಲಿಗೆ ಅಟ್ಟೆಯ ಅಭಾವ ಕಂಡಿದ್ದಳಂತೆ. ದೇವಿಯ ಪೂಜೆಗೂ ಹೀಗಾಯ್ತಲ್ಲ ಅಂತ ಅಲ್ಲಿನ ಅರ್ಚಕರು ಮರುಕವನ್ನೂ ಪಟ್ಟಿದ್ದರಂತೆ. ಈ ಮಾತು ಕೇಳಿದ ಶಾಸಕರೊಬ್ವರ ಮನವೂ ಕರಗಿತ್ತಂತೆ..
ಹೌದು.. ಮೂಲ್ಕಿ ಸೀಮೆಯ ತಾಯಿ ಬಪ್ಪನಾಡು ದೇವಿಗೆ ಇನ್ನು ಯಾವತ್ತೂ ಮಲ್ಲಿಗೆಯ ಕೊರತೆ ಎದುರಾಗಬಾರದು. ಯಾವುದೇ ಲಾಕ್ ಡೌನ್ ಬರಲಿ, ಮುಷ್ಕರವೇ ಎದುರಾಗಲಿ.. ಪ್ರತಿ ದಿನವೂ ಮಲ್ಲಿಗೆ ಅಟ್ಟೆ ದೇವಿಗೆ ಅರ್ಪಣೆಯಾಗಲೇಬೇಕು ಎಂದು ನಿರ್ಧರಿಸಿದ್ದು ಮೂಡುಬಿದ್ರೆಯ ಮಾಜಿ ಶಾಸಕ ಅಭಯಚಂದ್ರ ಜೈನ್. ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕರ ಮಾತು ಕೇಳಿದ ಅಭಯಚಂದ್ರ ಜೈನ್, ವರ್ಷದ 365 ದಿನವೂ ತಾನೇ ಮಲ್ಲಿಗೆ ಅಟ್ಟೆ ಅರ್ಪಿಸುತ್ತೇನೆ ಎಂದು ಅಭಯ ನೀಡಿದ್ದಾರೆ.


ಆದರೆ, ಅಭಯರು ತಾವು ಅರ್ಪಿಸುವ ಮಲ್ಲಿಗೆ ಅಟ್ಟೆಯ ಅರ್ಪಣೆಯ ಹಿಂದೆ ರಾಜಕೀಯ ಉದ್ದೇಶ ಇಟ್ಟುಕೊಂಡಿದ್ದಾರೆ. ರಾಜ್ಯದ ಕಾಂಗ್ರೆಸ್ ಸಾರಥ್ಯ ವಹಿಸಿರುವ ಡಿ.ಕೆ.ಶಿವಕುಮಾರ್ ಹೆಸರಲ್ಲಿ ಮಲ್ಲಿಗೆ ಅಟ್ಟೆ ದೇವಿಗೆ ಅರ್ಪಣೆಯಾಗಲಿ ಎಂದಿದ್ದಾರೆ. ತಮ್ಮ ಹೆಸರು ಬೇಡ. ಡಿಕೆಶಿ ಹೆಸರಿನಲ್ಲಿಯೇ ದೇವಿಗೆ ಮಲ್ಲಿಗೆ ಸೇವೆ ರೂಪದಲ್ಲಿ ಅರ್ಪಿಸುವುದಾಗಿ ದೇವಸ್ಥಾನದಲ್ಲಿ ಬರೆಸಿಕೊಂಡಿದ್ದಾರಂತೆ. ದೇವಿಯ ಅಭಯ ಡಿಕೆಶಿಗೆ ಸದಾ ಇರಲೆಂದು ಅಭಯರು ಹಾರೈಸಿದ್ದಾರೆಂದು ಜೈನರ ಆಪ್ತರು ತಿಳಿಸಿದ್ದಾರೆ.
ಮುಲ್ಕಿ ಅರಸರಾದ ದುಗ್ಗಣ್ಣ ಸಾವಂತರ ಸಮ್ಮುಖದಲ್ಲಿ ಅಭಯಚಂದ್ರ ಜೈನ್ ಮತ್ತು ಕಾಂಗ್ರೆಸ್ ಪ್ರಮುಖರು ಸೇರಿ ಮಲ್ಲಿಗೆ ಸೇವೆ ಅರ್ಪಿಸಿದ್ದು ವಿಶೇಷ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm