ಬ್ರೇಕಿಂಗ್ ನ್ಯೂಸ್
24-06-25 01:36 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಓದಿನಲ್ಲಿ ವಿಪರೀತ ಒತ್ತಡಕ್ಕೊಳಗಾಗಿ, ತಲೆನೋವಿನಿಂದ ಬಳಲುತ್ತಿದ್ದ ಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತಲಪಾಡಿ ದೇವಿಪುರದ ಶಾರದಾ ವಿದ್ಯಾಲಯದ ಆವರಣದ ಸಿಬ್ಬಂದಿ ವಸತಿ ಗೃಹದಲ್ಲಿ ನಡೆದಿದೆ.
ಮಂಗಳೂರು ಬೆಂದೂರ್ ವೆಲ್ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದ್ವಿತೀಯ ಸಾಲಿನ ಬಿಎ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿ ಶ್ರೇಯಾ (19) ಆತ್ಮಹತ್ಯೆಗೈದ ವಿದ್ಯಾರ್ಥಿನಿ.
ತಲಪಾಡಿ ನಾರ್ಲ ನಿವಾಸಿಯಾದ ಶ್ರೇಯಾ ತಾಯಿ ಪುಷ್ಪಲತಾ ಅವರು ದೇವಿಪುರದ ಶಾರದಾ ವಿದ್ಯಾಲಯದಲ್ಲಿ ಅಟೆಂಡರ್ ಕೆಲಸದಲ್ಲಿದ್ದು ಸಂಸ್ಥೆಯ ವಸತಿ ಗೃಹದಲ್ಲೇ ಗಂಡ ಮತ್ತು ಮಕ್ಕಳ ಜೊತೆಯಲ್ಲಿ ನೆಲೆಸಿದ್ದರು.
ಶ್ರೇಯಾ ಎಂದಿನಂತೆ ಸೋಮವಾರ ಬೆಳಗ್ಗೆಯೂ ಕಾಲೇಜಿಗೆ ತೆರಳಿದ್ದಳು. ಸಂಜೆ ಶ್ರೇಯಾ ತಂಗಿ ಶಾಲೆ ಮುಗಿಸಿ ಮನೆಗೆ ಬಂದಾಗ ಮನೆಯ ಬಾಗಿಲು ತೆರೆದಿದ್ದು, ಒಳಗೆ ನೋಡಿದಾಗ ಮನೆಯ ಬೆಡ್ ರೂಂನ ಕಿಟಕಿಗೆ ಶ್ರೇಯ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.
ಸಾವಿಗೂ ಮುನ್ನ ಶ್ರೇಯಾ ಬರೆದಿರುವ ಡೆತ್ ನೋಟ್ ಪೊಲೀಸರಿಗೆ ದೊರೆತಿದ್ದು, ಓದಿನಲ್ಲಿ ಕಳೆದ ಎರಡು ತಿಂಗಳಿನಿಂದ ವಿಪರೀತ ಒತ್ತಡ ಎದುರಿಸುತ್ತಿದ್ದು, ಸಹಿಸದ ತಲೆ ನೋವಿನಿಂದ ಬಳುತ್ತಿದ್ದೇನೆಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಶ್ರೇಯಾ ಇತ್ತೀಚೆಗೆ ಬರೆದಿದ್ದ ಪರೀಕ್ಷೆಯಲ್ಲೂ ಒಂದು ವಿಷಯದಲ್ಲಿ ಫೇಲ್ ಆಗಿದ್ದಳಂತೆ. ಉಳ್ಳಾಲ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
A 19-year-old college student from Mangaluru has allegedly died by suicide, reportedly due to academic stress and health issues. The incident occurred in the staff quarters of a private school in Devipura, Talapady. The student, Shreya, was pursuing her second year of Bachelor of Arts at St. Agnes College, Bendorewell. She was the daughter of a staff member at Sharada Vidyalaya, where the family resided.
11-07-25 06:36 pm
Bangalore Correspondent
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
Heart Attack, Belagavi, Bidar: ಹೃದಯಾಘಾತ ; ರಸ್...
11-07-25 04:22 pm
ನಾನೇ ಐದು ವರ್ಷಕ್ಕೆ ಸಿಎಂ ; ದೆಹಲಿ ಅಂಗಳದಲ್ಲೂ ಹೂಂಕ...
10-07-25 09:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
11-07-25 07:13 pm
Mangalore Correspondent
Rape case in Ramanagar: 14 ವರ್ಷದ ಬಾಲಕಿ ಮೇಲೆ ಆ...
10-07-25 08:09 pm
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm