ಬ್ರೇಕಿಂಗ್ ನ್ಯೂಸ್
30-06-25 03:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ತರಗತಿ ನಡೆಯುತ್ತಿದ್ದಾಗಲೇ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಜೋರಾದ ಗಾಳಿಗೆ ಏಕಾಏಕಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದು ಹಂಚು ಜಾರುವುದನ್ನು ತಿಳಿದು ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತ ತಪ್ಪಿದೆ.
ಜೋಕಟ್ಟೆ ಸಮೀಪದ ಪೇಜಾವರ ಮೂಲ ಮಠದ ಬಳಿಯಿರುವ ಕೆಂಜಾರು ಮುಖ್ಯಪ್ರಾಣ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನ 12.30ರ ವೇಳೆಗೆ ಘಟನೆಯಾಗಿದ್ದು ಗಾಳಿಗೆ ಒಂದು ಬದಿಯ ಹಂಚು ಜಾರುತ್ತಿದ್ದಂತೆ ಮಕ್ಕಳು ಹೊರಗೆ ಓಡಿ ಬಂದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿ ತರಗತಿ ಕೊಠಡಿಯಿದ್ದ ಆ ಭಾಗದ ಹಂಚು ಪೂರ್ತಿಯಾಗಿ ಕುಸಿದು ಕೆಳಕ್ಕೆ ಬಿದ್ದಿದೆ.




ಘಟನೆಯಲ್ಲಿ ಶೋನಿತ್ ಎಂಬ ಯುಕೆಜಿ ವಿದ್ಯಾರ್ಥಿಗೆ ತಲೆ ಮತ್ತು ಮುಖಕ್ಕೆ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಶಾಲೆಯನ್ನು ದುರಸ್ತಿ ಪಡಿಸಲಾಗಿತ್ತು. ಶಾಲೆಯಲ್ಲಿ 21 ವಿದ್ಯಾರ್ಥಿಗಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಊರವರೇ ಸೇರಿ ಶಾಲೆ ನಡೆಸುತ್ತಿದ್ದೇವೆ
ಹಿಂದೆ ಇದು ಅನುದಾನಿತ ಶಾಲೆಯಾಗಿದ್ದು ಆನಂತರ ಇಲ್ಲಿನ ಮುಖ್ಯ ಶಿಕ್ಷಕಿ ನಿವೃತ್ತಿಯಾದ ಬಳಿಕ ಮತ್ತೆ ಸರ್ಕಾರದಿಂದ ನೇಮಕಾತಿ ಆಗಿರಲಿಲ್ಲ. ಮುಖ್ಯಪ್ರಾಣ ದೇವರ ಹೆಸರಲ್ಲಿದ್ದ ಶಾಲೆ ನಿಲುಗಡೆ ಆಗುತ್ತದೆ ಎನ್ನುವಾಗ ಊರವರು ಸೇರಿ ದಾನಿಗಳ ಸಹಕಾರದಿಂದ ಶಾಲೆಯನ್ನು ಉಳಿಸಿದ್ದೆವು. ಈಗ ಮೂರು ವರ್ಷದಿಂದ ಎಲ್ಕೆಜಿ, ಯುಕೆಜಿ ಮತ್ತು ನರ್ಸರಿ ತರಗತಿಯನ್ನು ಖಾಸಗಿಯಾಗಿಯೇ ನಡೆಸುತ್ತಿದ್ದೇವೆ. ಸರ್ಕಾರದ ಯಾವುದೇ ಅನುದಾನ ಇಲ್ಲ. ಊರಿಗೊಂದು ಶಾಲೆ ಬೇಕೆಂಬ ಕಾಳಜಿಯಿಂದ ಮಾಡುತ್ತಿದ್ದೇವೆ. ಕಳೆದ ವರ್ಷ ನಾವು ಸ್ಥಳೀಯರು ಸೇರಿ ಶ್ರಮದಾನದ ಮೂಲಕ ಶಾಲೆ ದುರಸ್ತಿ ಮಾಡಿದ್ದೆವು. ಹಂಚು, ಪಕ್ಕಾಸು ಎಲ್ಲ ಬದಲಾಯಿಸಿದ್ದೆವು. ಈಗ ಸಣ್ಣ ಗಾಳಿಗೆ ಕುಸಿದು ಬಿದ್ದಿದೆ. ಹೇಗೆ ಬಿದ್ದಿದೆ ಎನ್ನುವುದು ಗೊತ್ತಿಲ್ಲ. ಆದರೆ ದೇವರು ಯಾವುದೇ ಅಪಾಯ ಆಗದಂತೆ ನೋಡಿಕೊಂಡಿದ್ದಾರೆ. ಶಾಲೆಯಲ್ಲಿ 21 ಸಣ್ಣ ಮಕ್ಕಳಿದ್ದರೂ ಒಂದು ಮಗು ಬಿಟ್ಟರೆ ಯಾರಿಗೂ ತೊಂದರೆ ಆಗಿಲ್ಲ ಎಂದು ಸ್ಥಳೀಯರಾದ ವಿಜಯ ಕುಮಾರ್ ಮತ್ತು ಬಾಲು ಪೇಜಾವರ 'ಹೆಡ್ ಲೈನ್ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.
A major tragedy was narrowly avoided in Pejavara village on the outskirts of Mangaluru when the roof of a classroom collapsed during school hours due to strong winds. Fortunately, most students had rushed out moments before the collapse, preventing a serious disaster.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm