ಬ್ರೇಕಿಂಗ್ ನ್ಯೂಸ್
30-06-25 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ಹಾಸನ ಜಿಲ್ಲೆಯಲ್ಲೇ ಯಾಕಿಷ್ಟು ಹೃದಯಘಾತ ಆಗುತ್ತಿದೆ ಅನ್ನೋದರ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಯುವಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆರೋಗ್ಯ ಇಲಾಖೆಯಿಂದ ವರದಿ ಕೇಳಿದ್ದೇವೆ. ವರದಿ ಮಾಹಿತಿ ಆಧರಿಸಿ ಪರಿಶೀಲನೆ ಮಾಡುತ್ತೇವೆ. ಸಾವಿನ ಹಿಂದಿನ ಸತ್ಯಾಸತ್ಯತೆ ಏನು ಅನ್ನೋದು ಅಂಕಿ ಅಂಶಗಳ ಆಧಾರದ ವರದಿ ಮೂಲಕ ತಿಳಿಯುತ್ತದೆ. ಈಗಿನ ಜೀವನ ಶೈಲಿ, ಆಹಾರ ಪದ್ಧತಿ, ಮೊಬೈಲ್ ಮತ್ತು ಡಿಜಿಟಲ್ ವ್ಯಸನದಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ.
ಅನೇಕ ಜನರಿಗೆ ಚಿಕ್ಕ ವಯಸ್ಸಿನಲ್ಲಿ ರಕ್ತದೊತ್ತಡ, ಮಧುಮೇಹ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈಗ ಎಲ್ಲ ಕಡೆ ಮಾಲಿನ್ಯವಿದೆ. ವಾಯು, ಆಹಾರ, ನೀರಿನಲ್ಲಿ ಮಾಲಿನ್ಯ ಇದೆ. ದೆಹಲಿಯಲ್ಲಿ ಗಾಳಿಯನ್ನ ಉಸಿರಾಟ ಮಾಡಿದ್ರೆ ದುಷ್ಪರಿಣಾಮವಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ಈಗ ನಮ್ಮಲ್ಲೂ ಅದೇ ರೀತಿಯ ವಾತಾವರಣ ಆಗಿದೆ. ಇದಕ್ಕೇನು ಕಾರಣ ಅಂತ ಅಧ್ಯಯನ ಆಗಬೇಕು. ಜೊತೆಗೆ, ನಮ್ಮ ಜೀವನ ಶೈಲಿ ನೋಡಿಕೊಳ್ಳೋದು, ಆರೋಗ್ಯದ ಕಾಳಜಿ ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಬಳಿಕ ಹೃದಯಾಘಾತ ಏರಿಕೆ ಕುರಿತಾಗಿ ಅಧ್ಯಯನಕ್ಕೆ ಸಮಿತಿ ನೇಮಕ ಮಾಡಲಾಗಿತ್ತು. ಲಾಂಗ್ ಕೋವಿಡ್ ನಿಂದ ಏನಾದರೂ ಸಮಸ್ಯೆಗಳು ಇದೆಯಾ ಎಂದು ಮುಖ್ಯಮಂತ್ರಿಗಳು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದು ಕೇವಲ ಕರ್ನಾಟಕದ ಸಮಸ್ಯೆ ಅಲ್ಲ. ವಿಶ್ವ ಮಟ್ಟದ ಅಧ್ಯಯನದ ಅವಶ್ಯಕತೆಯಿದೆ. ಲಾಂಗ್ ಕೋವಿಡ್ ದುಷ್ಪರಿಣಾಮ ಏನು ಅನ್ನೋದರ ಅಧ್ಯಯನ ನಡೆಯಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has directed health department officials to submit a detailed report regarding the alarming rise in heart attack cases in Hassan district, especially among the youth.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm