ಬ್ರೇಕಿಂಗ್ ನ್ಯೂಸ್
30-06-25 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ಹಾಸನ ಜಿಲ್ಲೆಯಲ್ಲೇ ಯಾಕಿಷ್ಟು ಹೃದಯಘಾತ ಆಗುತ್ತಿದೆ ಅನ್ನೋದರ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಯುವಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆರೋಗ್ಯ ಇಲಾಖೆಯಿಂದ ವರದಿ ಕೇಳಿದ್ದೇವೆ. ವರದಿ ಮಾಹಿತಿ ಆಧರಿಸಿ ಪರಿಶೀಲನೆ ಮಾಡುತ್ತೇವೆ. ಸಾವಿನ ಹಿಂದಿನ ಸತ್ಯಾಸತ್ಯತೆ ಏನು ಅನ್ನೋದು ಅಂಕಿ ಅಂಶಗಳ ಆಧಾರದ ವರದಿ ಮೂಲಕ ತಿಳಿಯುತ್ತದೆ. ಈಗಿನ ಜೀವನ ಶೈಲಿ, ಆಹಾರ ಪದ್ಧತಿ, ಮೊಬೈಲ್ ಮತ್ತು ಡಿಜಿಟಲ್ ವ್ಯಸನದಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ.
ಅನೇಕ ಜನರಿಗೆ ಚಿಕ್ಕ ವಯಸ್ಸಿನಲ್ಲಿ ರಕ್ತದೊತ್ತಡ, ಮಧುಮೇಹ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈಗ ಎಲ್ಲ ಕಡೆ ಮಾಲಿನ್ಯವಿದೆ. ವಾಯು, ಆಹಾರ, ನೀರಿನಲ್ಲಿ ಮಾಲಿನ್ಯ ಇದೆ. ದೆಹಲಿಯಲ್ಲಿ ಗಾಳಿಯನ್ನ ಉಸಿರಾಟ ಮಾಡಿದ್ರೆ ದುಷ್ಪರಿಣಾಮವಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ಈಗ ನಮ್ಮಲ್ಲೂ ಅದೇ ರೀತಿಯ ವಾತಾವರಣ ಆಗಿದೆ. ಇದಕ್ಕೇನು ಕಾರಣ ಅಂತ ಅಧ್ಯಯನ ಆಗಬೇಕು. ಜೊತೆಗೆ, ನಮ್ಮ ಜೀವನ ಶೈಲಿ ನೋಡಿಕೊಳ್ಳೋದು, ಆರೋಗ್ಯದ ಕಾಳಜಿ ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಬಳಿಕ ಹೃದಯಾಘಾತ ಏರಿಕೆ ಕುರಿತಾಗಿ ಅಧ್ಯಯನಕ್ಕೆ ಸಮಿತಿ ನೇಮಕ ಮಾಡಲಾಗಿತ್ತು. ಲಾಂಗ್ ಕೋವಿಡ್ ನಿಂದ ಏನಾದರೂ ಸಮಸ್ಯೆಗಳು ಇದೆಯಾ ಎಂದು ಮುಖ್ಯಮಂತ್ರಿಗಳು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದು ಕೇವಲ ಕರ್ನಾಟಕದ ಸಮಸ್ಯೆ ಅಲ್ಲ. ವಿಶ್ವ ಮಟ್ಟದ ಅಧ್ಯಯನದ ಅವಶ್ಯಕತೆಯಿದೆ. ಲಾಂಗ್ ಕೋವಿಡ್ ದುಷ್ಪರಿಣಾಮ ಏನು ಅನ್ನೋದರ ಅಧ್ಯಯನ ನಡೆಯಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has directed health department officials to submit a detailed report regarding the alarming rise in heart attack cases in Hassan district, especially among the youth.
31-01-26 10:24 pm
HK News Desk
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm