ಬ್ರೇಕಿಂಗ್ ನ್ಯೂಸ್
02-07-25 08:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 2 : ಸುರತ್ಕಲ್ ಸಮೀಪದ ಮಧ್ಯ ವಾಲ್ಮೀಕಿ ವಸತಿ ಶಾಲೆಯ ಸಮೀಪ ಖಾಸಗಿ ಬಸ್ಗಳೆರಡು ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ನಡೆದಿದ್ದು ಹೈಸ್ಕೂಲ್, ಪಿಯುಸಿ ವಿದ್ಯಾರ್ಥಿಗಳು, ಶಿಕ್ಷಕಿಯರು ಸೇರಿ 28 ಮಂದಿ ಗಾಯಗೊಂಡಿದ್ದಾರೆ.
ಬೆಳಗ್ಗೆ 9ರ ಸುಮಾರಿಗೆ ಘಟನೆ ನಡೆದಿದ್ದು ಎರಡೂ ಬಸ್ನಲ್ಲಿ ಶಾಲಾ ಮಕ್ಕಳು ಸೇರಿದಂತೆ ಅನೇಕ ಪ್ರಯಾಣಿಕರಿದ್ದರು. ಅಪಘಾತದ ದೃಶ್ಯ ಒಂದು ಬಸ್ಸಿನ ಡ್ಯಾಶ್ ಬೋರ್ಡ್ ಕ್ಯಾಮರಾದಲ್ಲಿ ಸೆರೆಯಾಗಿದ್ದು ಮಂಗಳೂರಿನ ಸ್ಟೇಟ್ ಬ್ಯಾಂಕ್ ಕಡೆಯಿಂದ ಚೇಳಾಯರಿಗೆ ತೆರಳುತ್ತಿದ್ದ ನಂದನ್ ಹೆಸರಿನ ಬಸ್ ನೇರವಾಗಿ ಬಂದು ಡಿಕ್ಕಿಯಾಗುವುದು ಕಾಣುತ್ತದೆ. ಎರಡೂ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಎರಡೂ ಬಸ್ಸಿನ ಚಾಲಕರು ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಶಾಜಿ ಮತ್ತು ಮಹಮ್ಮದ್ ಮುರ್ಶಿದ್ ಎಂಬ ಇಬ್ಬರೂ ಚಾಲಕರು ಸಣ್ಣ ಪುಟ್ಟ ಗಾಯಕ್ಕೀಡಾಗಿದ್ದಾರೆ. ಒಬ್ಬನ ಕೈಗೆ ರಾಡ್ ಒಡೆದ ಏಟು ಬಿದ್ದಿದೆ. ಇಲೆಕ್ಟ್ ಹೆಸರಿನ ಮತ್ತೊಂದು ಬಸ್ ಚೇಳಾರಿನಿಂದ ಬಜ್ಪೆ ಕಡೆಗೆ ತೆರಳುತ್ತಿತ್ತು. ಎರಡು ಬಸ್ಸಿನಲ್ಲು 30ರಷ್ಟು ಪ್ರಯಾಣಿಕರು ಇದ್ದರು.





ಅಪಘಾತಕ್ಕೆ ಒಂದು ಬಸ್ಸಿನ ಸ್ಟೇರಿಂಗ್ ಜಾಮ್ ಆಗಿದ್ದು ಕಾರಣ ಎಂದು ಚಾಲಕರು ಹೇಳಿದ್ದಾರಂತೆ. ಆದರೆ ಈ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಎರಡೂ ಬಸ್ಸಿನಲ್ಲಿದ್ದ ಇಬ್ಬರು ಹೈಸ್ಕೂಲ್, ಒಬ್ಬ ಪಿಯುಸಿ, ಶ್ರೀನಿವಾಸ್ ಕಾಲೇಜಿನಲ್ಲಿ ಎಂಎಸ್ ಡಬ್ಲ್ಯು ಓದುತ್ತಿದ್ದ 11 ಮಂದಿ ಗಾಯಗೊಂಡಿದ್ದಾರೆ. ಒಟ್ಟು 28 ಮಂದಿ ಗಾಯಗೊಂಡಿದ್ದು ಇದರಲ್ಲಿ ಐವರು ಶಿಕ್ಷಕಿಯರೂ ಇದ್ದಾರೆ. 2-3 ಮಂದಿಯ ಮುಖಕ್ಕೆ ಏಟು ಬಿದ್ದು ಹಲ್ಲು ಮುರಿದಿದೆ. ಒಂದು ಮಗುವಿಗೆ ಗಂಭೀರ ಗಾಯವಾಗಿದೆ ಎಂದು ಸುರತ್ಕಲ್ ಸಂಚಾರಿ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಬಸ್ ಚಾಲಕರು ಪರಸ್ಪರ ಸರಿಯಾದ ಸಮಯಕ್ಕೆ ಬ್ರೇಕ್ ಹಾಕದೇ ಇದ್ದಿದ್ದರೆ ಅಪಾಯ ಸಂಭವಿಸಬಹುದಿತ್ತು ಎಂದು ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಪರಿಸರದಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುರತ್ಕಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
Major #Accident in #Surathkal, @#Mangalore. Two private buses collided head-on near Madhya Valmiki Residential School. 28 injured, including 15 students & 5 teachers. #Surathkal #Mangalore #RoadAccident #viralvideo pic.twitter.com/MKkAnSI6n2
— Headline Karnataka (@hknewsonline) July 2, 2025
A major road accident occurred near Madhya Valmiki Residential School in Surathkal on Wednesday morning, where two private buses collided head-on, leaving 28 people injured, including 15 high school and PUC students, and 5 female teachers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm