ಬ್ರೇಕಿಂಗ್ ನ್ಯೂಸ್
05-07-25 12:56 pm Mangalore Correspondent ಕರಾವಳಿ
ಮಂಗಳೂರು, ಜುಲೈ.5: ಹಿಂದು ಜಾಗರಣ ವೇದಿಕೆ ಮುಖಂಡನೊಬ್ಬನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆಯಾಗಿದ್ದು ಕರಾವಳಿಯಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿದೆ. ಮೂಡುಬಿದ್ರೆಯ ಹಿಂಜಾವೇ ಮುಖಂಡ ಸಮಿತ್ ರಾಜ್ ದರೆಗುಡ್ಡೆ ಎಂಬಾತನ ಮೊಬೈಲ್ ನಲ್ಲಿ ಪೊಲೀಸರ ಪರಿಶೀಲನೆ ವೇಳೆ ಅಶ್ಲೀಲ ವಿಡಿಯೋ ಸಿಕ್ಕಿದೆಯೆಂದು ಪೊಲೀಸರು ಆತನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಸಿಕ್ಕಿದ್ದು ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಇದೆಯೆಂದೂ ವದಂತಿ ಹರಡಿದೆ. 2024ರ ನವೆಂಬರ್ ತಿಂಗಳಲ್ಲಿ ಅಪಘಾತ ಪಡಿಸಿದ ಖಾಸಗಿ ಬಸ್ಸೊಂದಕ್ಕೆ ಕಲ್ಲೆಸೆದ ಪ್ರಕರಣದಲ್ಲಿ ಸಮಿತ್ ರಾಜ್ ನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದು ಈ ವೇಳೆ ಮೊಬೈಲ್ ಪರಿಶೀಲನೆ ಮಾಡಿದ್ದರು. ಮೊಬೈಲ್ ಲಾಕ್ ಆಗಿದ್ದರಿಂದ ಕೋರ್ಟ್ ಅನುಮತಿ ಪಡೆದು ಮೊಬೈಲನ್ನು ಹೆಚ್ಚಿನ ಪರಿಶೀಲನೆಗಾಗಿ ಮಂಗಳೂರಿನ ಸೆನ್ ಠಾಣೆಯ ಲ್ಯಾಬ್ ನಲ್ಲಿ ಚೆಕ್ ಮಾಡಲಾಗಿತ್ತು.
ಈ ವೇಳೆ, 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ತುಣುಕು ಪತ್ತೆಯಾಗಿದೆ. ಅಲ್ಲದೆ, ಗಂಡು ಮತ್ತು ಹೆಣ್ಣಿನ ನಗ್ನ ಹಲವಾರು ದೃಶ್ಯಾವಳಿಗಳು ಪತ್ತೆಯಾಗಿದ್ದು ತನ್ನದೇ ಲೈಂಗಿಕ ಸಂಪರ್ಕದ ದೃಶ್ಯಾವಳಿಗಳೂ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಶ್ಲೀಲ ವಿಡಿಯೋ ಹಿನ್ನೆಲೆಯಲ್ಲಿ ಮೂಡುಬಿದಿರೆ ಠಾಣೆ ಇನ್ಸ್ಪೆಕ್ಟರ್ ಸಂದೇಶ್ ದೂರಿನಂತೆ ಬಿಎನ್ಎಸ್ ಸೆಕ್ಷನ್ 294(ಎ) ಪ್ರಕಾರ ಅಶ್ಲೀಲ ವಿಡಿಯೋಗಳನ್ನು ಹೊಂದಿದ್ದಕ್ಕಾಗಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡುವ ಅಥವಾ ಇನ್ಯಾರಿಗೋ ಕಳುಹಿಸಿ ಬೆದರಿಕೆ ಒಡ್ಡುವ ಸಾಧ್ಯತೆ ಇದೆಯೆಂದು ಕೇಸು ದಾಖಲಿಸಲಾಗಿದೆ. ಇಂತಹ ವಿಡಿಯೋಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಸಾಧ್ಯತೆಯಿರುವ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಯಾರೂ ಸಂತ್ರಸ್ತರು ದೂರು ಕೊಟ್ಟಿಲ್ಲ. ಯಾರಾದ್ರೂ ಬ್ಲಾಕ್ಮೇಲ್ ಒಳಗಾದವರು, ಸಂತ್ರಸ್ತರಿದ್ದರೆ ದೂರು ಕೊಟ್ಟರೆ ರೇಪ್ ಕೇಸು ದಾಖಲಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ರಿ ಪ್ರಕರಣದಲ್ಲಿ ಆರೋಪಿ ಜಾಮೀನು ಪಡೆದು ಬಿಡುಗಡೆಗೊಂಡಿದ್ದು ಯಾರಾದ್ರೂ ದೌರ್ಜನ್ಯಕ್ಕೊಳಗಾದವರಿದ್ದರೆ ದೂರು ಕೊಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
A major controversy has erupted in the coastal region after over 50 obscene video clips were allegedly found on the mobile phone of a Hindu Jagarana Vedike leader. An FIR has been registered against the accused, identified as Sumith Raj Daregudde, a prominent figure associated with the organization in Moodbidri.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm