ಬ್ರೇಕಿಂಗ್ ನ್ಯೂಸ್
07-07-25 05:02 pm Mangalore Correspondent ಕರಾವಳಿ
ಮಂಗಳೂರು, ಜುಲೈ 7 : ಪ್ರೀತಿಸುತ್ತಿದ್ದ ಯುವತಿ ಕೈಕೊಟ್ಟಳೆಂದು ಸಿಟ್ಟಿನಿಂದ ಆಕೆಯ ಮೇಲೆ ಚಾಕುವಿನಲ್ಲಿ ಹಲ್ಲೆಗೈದು ಬಳಿಕ ಯುವತಿ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫರಂಗಿಪೇಟೆ ಬಳಿಯ ಸುಜೀರು ಎಂಬಲ್ಲಿ ನಡೆದಿದೆ.
ಫರಂಗಿಪೇಟೆ ನಿವಾಸಿ ಕುಮಾರಿ ದಿವ್ಯಾ ಯಾನೆ ದೀಕ್ಷಿತಾ (26) ಹಾಗೂ ಕೋಡ್ಮಣ್ ಗ್ರಾಮದ ನಿವಾಸಿ ಸುಧೀರ್ (30) ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಕಳೆದ ಕೆಲ ತಿಂಗಳುಗಳಿಂದ ಇವರ ಮಧ್ಯೆ ಮನಸ್ತಾಪ ಉಂಟಾಗಿತ್ತು. ಆದರೂ ಸುಧೀರ್ ಫೋನ್ ಮಾಡುವುದು, ಹಿಂಬಾಲಿಸುವುದನ್ನು ಮಾಡುತ್ತಿದ್ದ.


ಸುಧೀರ್ ಇಂದು ಬೆಳಗ್ಗೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿಗೆ ಬಂದು ದಿವ್ಯಾಳೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದ್ದು ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಿನಲ್ಲಿ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ದಿವ್ಯಾಳನ್ನು ಸಾಯಿಸಲು ಚುಚ್ಚಿದ್ದಾನೆ. ಆಕೆ ತಪ್ಪಿಸಿಕೊಂಡು ಹೋಗುತ್ತ ಅರ್ಧ ದಾರಿಯಲ್ಲಿ ಬಿದ್ದಾಗ, ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಆರೋಪಿ ಅಲ್ಲಿಂದ ತೆರಳಿದ್ದು ಅದೇ ಪರಿಸರದಲ್ಲಿರುವ ದಿವ್ಯಾಳ ಬಾಡಿಗೆ ಮನೆಗೆ ಹೋಗಿ, ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾಬೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳು ಯುವತಿಯನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಸುಧೀರ್ ಗ್ಯಾರೇಜ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
A tragic incident unfolded near Farangipete, Mangalore, where a young man fatally attacked his girlfriend with a knife and later died by suicide at her residence, following an argument over their relationship. The deceased have been identified as Sudhir (30), a resident of Kodman village, and Divya, also known as Deekshita (26), a resident of Farangipete.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm