ಬ್ರೇಕಿಂಗ್ ನ್ಯೂಸ್
09-07-25 06:53 pm Mangalore Correspondent ಕರಾವಳಿ
ಮಂಗಳೂರು, ಜುಲೈ 9 : ಸುರತ್ಕಲ್ ವ್ಯಾಪ್ತಿಯಲ್ಲಿ ಸೋಮವಾರ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಒಬ್ಬರು 18 ವರ್ಷ ವಿದ್ಯಾರ್ಥಿಯಾದರೆ ಮತ್ತೊಬ್ಬರು 45 ವರ್ಷದ ಮಧ್ಯ ವಯಸ್ಕ. ಆರೋಗ್ಯವಾಗಿದ್ದ ಇಬ್ಬರೂ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ಆರೋಗ್ಯದಿಂದಿದ್ದ 18ರ ಹರೆಯದ ಯುವಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೃಷ್ಣಾಪುರದಲ್ಲಿ ಜು.7ರಂದು ಸಂಭವಿಸಿದೆ. ಕೃಷ್ಣಾಪುರ ಹಿಲ್ಸೈಡ್ ನಿವಾಸಿ ಅಸ್ಲರ್ ಅಲಿ ಅವರ ಪುತ್ರ ಅಫ್ತಾಬ್ (18) ಮೃತಪಟ್ಟವರು. ಸುರತ್ಕಲ್ನಲ್ಲಿ ಎಲೆಕ್ಟಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದು ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ತಂದೆ ಆಟೋ ರಿಕ್ಷಾ ಚಾಲಕರಾಗಿದ್ದು, ಮಧ್ಯಾಹ್ನದ ವರೆಗೂ ಮಗನೊಂದಿಗೆ ಮನೆಯಲ್ಲಿದ್ದು, ಬಳಿಕ ಕೆಲಸಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಅಫ್ತಾಬ್ ಸ್ನಾನಕ್ಕೆಂದು ಹೊರಡುತ್ತಿದ್ದಂತೆ ಕುಸಿದು ಬಿದ್ದರು ಎನ್ನಲಾಗಿದೆ.
ಅಸ್ಲರ್ ಅಲಿ ಅವರ ನಾಲ್ವರು ಮಕ್ಕಳಲ್ಲಿ ಅಫ್ತಾಬ್ ಏಕೈಕ ಪುತ್ರ. ಮೂವರು ಸಹೋದರಿಯರಿದ್ದು, ಎಲ್ಲರಿಗೂ ವಿವಾಹವಾಗಿದೆ. ತಾಯಿ ಕೋವಿಡ್ ಸಮಯದಲ್ಲಿ ನಿಧನ ಹೊಂದಿದ್ದರು. ತಂದೆ ಮತ್ತು ಮಗ ಮಾತ್ರ ಜತೆಯಲ್ಲಿ ವಾಸಿಸುತ್ತಿದ್ದರು.
45ರ ವ್ಯಕ್ತಿ ಕುಸಿದು ಸಾವು
ಬೈಕಂಪಾಡಿಯಲ್ಲಿ ಆಟೋರಿಕ್ಷಾ ಚಾಲಕರಾಗಿದ್ದ ಅನ್ವರ್ (45) ಅಂಗರಗುಂಡಿಯ ತನ್ನ ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸ್ವಲ್ಪ ಸಮಯದ ಹಿಂದೆ ಬೆನ್ನು ನೋವಿಗೆ ತುತ್ತಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಉಳಿದಂತೆ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಆಟೋ ರಿಕ್ಷಾ ಚಲಾಯಿಸುತ್ತ ನಿತ್ಯ ಜೀವನ ನಡೆಸುತ್ತಿದ್ದರು. ರವಿವಾರ ಬೆಳಗ್ಗೆ ಎಂದಿನಂತೆ ಎದ್ದಾಗ ತಲೆಸುತ್ತು ಬಂದಂತಾಗಿ ಕುಸಿದು ಬಿದ್ದಿದ್ದರು. ತತ್ಕ್ಷಣ ಕಾರಿನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದರೂ ಪರೀಕ್ಷಿಸಿದ ವೈದ್ಯರು ಅನ್ವರ್ ಮೃತಪಟ್ಟಿರುವುದಾಗಿ ತಿಳಿಸಿಸಿದರು. ಮೃತರು ಪತ್ನಿ, ಮೂವರು ಪುತ್ರಿಯರು ಮತ್ತು ಪುತ್ರನನ್ನು ಅಗಲಿದ್ದಾರೆ.
In a deeply unsettling development, two individuals — an 18-year-old student and a 45-year-old man — died of sudden cardiac arrest within a single day in the Surathkal area of Mangaluru, raising alarm among local residents.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm