ಬ್ರೇಕಿಂಗ್ ನ್ಯೂಸ್
12-07-25 01:42 pm Mangalore Correspondent ಕರಾವಳಿ
ಮಂಗಳೂರು, ಜುಲೈ 12 : ಸುರತ್ಕಲ್ ಬಳಿಯಿರುವ ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ.
ಪೆಟ್ರೋ ಕೆಮಿಕಲ್ ಘಟಕದಲ್ಲಿ ಟ್ಯಾಂಕ್ ಗಳನ್ನು ಕ್ಲೀನ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮುಖ, ಕಣ್ಣಿಗೆ ಕವಚ ಧರಿಸಿ ಕಾರ್ಮಿಕರು ಟ್ಯಾಂಕ್ ಕ್ಲೀನಿಂಗ್ ಕೆಲಸ ಮಾಡುತ್ತಿದ್ದಾಗ ಮೂವರು ಗಂಭೀರ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಕಾರ್ಮಿಕರನ್ನು ಕೂಡಲೇ ಸುರತ್ಕಲ್ ಶ್ರೀನಿವಾಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.



ಮೃತರನ್ನು ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ದೀಪಚಂದ್ರ(33) ಮತ್ತು ಕೇರಳ ಮೂಲದ ಬಿಜಿಲ್ ಪ್ರಸಾದ್ (33) ಎಂದು ಗುರುತಿಸಲಾಗಿದೆ. ಇನ್ನೊಬ್ಬ ಗದಗ ಮೂಲದ ವಿನಾಯಕ್ ಎಂಬ ಕಾರ್ಮಿಕನೂ ಅಸ್ವಸ್ಥಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೋ ಕೆಮಿಕಲ್ಸ್ ಟ್ಯಾಂಕ್ ಗಳನ್ನು ಸಾಮಾನ್ಯವಾಗಿ ತಿಂಗಳಲ್ಲಿ ಒಂದು ಬಾರಿ ಕ್ಲೀನ್ ಮಾಡಲಾಗುತ್ತದೆ. ಅದೇ ರೀತಿ ಟ್ಯಾಂಕ್ ಕ್ಲೀನಿಂಗ್ ಮಾಡುತ್ತಿದ್ದಾಗ ಗ್ಯಾಸ್ ಸೇವನೆಗೊಳಗಾಗಿ ಕಾರ್ಮಿಕರು ಅಸ್ವಸ್ಥಕ್ಕೀಡಾಗಿದ್ದಾರೆ.
ಸದ್ಯಕ್ಕೆ ಎಂಆರ್ ಪಿಎಲ್ ಘಟಕದ ಸುರಕ್ಷತಾ ವಿಭಾಗದ ಅಧಿಕಾರಿಗಳು ಸೋರಿಕೆಯನ್ನು ನಿಲ್ಲಿಸಿದ್ದಾರೆ. ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಆರ್ ಪಿಎಲ್ ಒಳಗಡೆ ಏನೋ ಆಗಿದೆಯೆಂದು ಬೆಳಗ್ಗೆಯೇ ಸುದ್ದಿ ಹಬ್ಬಿತ್ತು. ಆದರೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಇದೀಗ ಇಬ್ಬರು ಸಾವನ್ನಪ್ಪಿದ್ದನ್ನು ಪೊಲೀಸರೇ ದೃಢಪಡಿಸಿದ್ದಾರೆ.
In a tragic incident at the Mangalore Refinery and Petrochemicals Limited (MRPL) facility near Surathkal, two contract workers died and another was critically injured due to a suspected toxic gas leak while cleaning chemical storage tanks.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm